ಜಲ ಜೀವನ್ ಯೋಜನೆಯಡಿ 22.4 ಕೋಟಿ ರೂ. ಬಿಡುಗಡೆ
Team Udayavani, Nov 26, 2020, 4:58 PM IST
ಬೀದರ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಪೂರೈಕೆಗಾಗಿ ಜಾರಿಗೆ ತಂದಿರುವ ಜಲ ಜೀವನ್ ಮಿಷನ್ ಯೋಜನೆಯಡಿ ಔರಾದ ತಾಲೂಕಿಗೆ 22.4 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ತಾಲೂಕಿನ ಚಾಂದೋರಿ, ಹಾಲಳ್ಳಿ, ಚಿಕ್ಲಿ(ಜೆ), ನಾಗನಪಳ್ಳಿ, ಬಾಬ್ಳಿ, ಧೂಪತಮಹಾಗಾಂವ್,ಮಣಿಗೆಂಪುರ, ರಂಡ್ಯಾಳ, ಬಾವಲಗಾಂವ್, ಹೊಕ್ರಾಣಾ, ಹೊಳಸಮುದ್ರ, ಜಮಗಿ, ಕಮಲನಗರ, ಲಾಧಾ, ಮದನೂರ್, ಮುರ್ಕಿ, ನಾಗಮಾರಪಳ್ಳಿ, ಶೆಂಬೆಳ್ಳಿ, ಸೋನಾಳ, ಜೀರ್ಗಾ(ಜೆ), ಹೊರಂಡಿ, ಕಾಳಗಾಪುರ, ಇಟಗ್ಯಾಳ, ಸುಂದಾಳ, ಯನಗುಂದಾ, ಮುಧೋಳ(ಕೆ), ಸೋರಳ್ಳಿ, ಸೋರಳ್ಳಿ ತಾಂಡಾ, ಮಾಳೆಗಾಂವ್, ಲಷ್ಕರ್ ತಾಂಡಾ, ಮಹಾದೇವ ತಂಡಾ, ಮಾರುತಿ ತಾಂಡಾ, ಹಿಪ್ಪಳಗಾಂವ್, ಖಂಡಿಕೇರಿ, ಬೆಳಕುಣಿ ಗ್ರಾಮಗಳು ಈ ಯೋಜನೆಗೆ ಆಯ್ಕೆಯಾಗಿವೆ.
ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಲು ಜಲ ಜೀವನ ಮಿಷನ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಔರಾದ ತಾಲೂಕಿಗೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಕ್ರಿಯಾ ಯೋಜನೆ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ಹಂತ-ಹಂತವಾಗಿ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು. ಲಭ್ಯವಿರುವ ನೀರಿನ ಸಂಪನ್ಮೂಲಗಳನ್ನು ಬಳಸಿಕೊಂಡು ಆಯ್ಕೆಯಾಗಿರುವ ಗ್ರಾಮಗಳ ಪ್ರತಿ ಮನೆಗೆ ನೀರಿನ ಸಂಪರ್ಕ ಕಲ್ಪಿಸಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ