ಟನ್‌ ಕಬ್ಬಿಗೆ 2400 ರೂ. ನಿಗದಿ


Team Udayavani, Jan 3, 2021, 4:22 PM IST

BIDAR-TDY-1

ಬೀದರ: ಪ್ರಸಕ್ತ ಸಾಲಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಕಬ್ಬಿನ ದರ ನಿಗದಿಸಂಬಂಧ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ನೇತೃತ್ವದಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿ ಗಳು ಮತ್ತು ಕಾರ್ಖಾನೆ ಮುಖ್ಯಸ್ಥರ ಸಭೆ ಯಶಸ್ವಿಯಾಗಿದ್ದು, ಟನ್‌ ಕಬ್ಬಿಗೆ 2400ರೂ. ಪಾವತಿಸಲು ನಿರ್ಣಯಿಸಲಾಗಿದೆ. ಇದಕ್ಕೆ ರೈತ ಮುಖಂಡರು ಸಹಮತ ವ್ಯಕ್ತಪಡಿಸಿದ್ದಾರೆ.

ಕಬ್ಬಿನ ದರ ನಿಗದಿಪಡಿಸುವುದಕ್ಕೆಸಂಬಂಧಿಸಿದಂತೆ ಸಂಸದರು, ಶಾಸಕರು ಮತ್ತು ಇನ್ನೀತರ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಮತ್ತು ವಿವಿಧ ಸಕ್ಕರೆ ಕಾರ್ಖಾನೆಗಳ ನಿರ್ದೇಶಕರು ಮತ್ತುವ್ಯವಸ್ಥಾಪಕರೊಂದಿಗೆ ಸಚಿವರು ಎರಡುಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿ ಚರ್ಚಿಸಿದರು.

ರಾಜ್ಯ ಸರ್ಕಾರವು ರೈತರು ಮತ್ತುಕಾರ್ಖಾನೆಗಳ ಪರವಿದೆ. ರೈತರಿಗೆತೊಂದರೆಯಾಗದಂತೆ ಮತ್ತುಕಾರ್ಖಾನೆಗಳ ಮೇಲೆ ಹೊರೆಯಾಗದಂತೆನೋಡಿಕೊಳ್ಳುತ್ತೇವೆ. ರೈತರು ಮತ್ತುಕಾರ್ಖಾನೆಗಳೊಂದಿಗೆ ಸದಾಕಾಲ ಜೊತೆಗೆ ಇರುತ್ತೇವೆ. ರೈತರಿಗೆ ನ್ಯಾಯಯುತ ದರನೀಡಲು ಸಹಕರಿಸಿ ಎಂದು ಸಭೆಯಲ್ಲಿದ್ದವಿವಿಧ ಸಕ್ಕರೆ ಕಾರ್ಖಾನೆಗಳ ನಿರ್ದೇಶಕರುಮತ್ತು ವ್ಯವಸ್ಥಾಪಕರಿಗೆ ಸಚಿವರು ಮನವೊಲಿಸಿದರು.

ಬಳಿಕ ಡಿಸಿ ಕಚೇರಿ ಸಭಾಂಗಣದಲ್ಲಿ ರೈತರ ಸಭೆ ನಡೆಸಿ ಮಾತನಾಡಿದ ಸಚಿವರು,ರೈತರ ಬೆವರಿಗೆ ಸೂಕ್ತ ಬೆಲೆ ಸಿಗಬೇಕುಎಂದು ಯೋಚಿಸಿ, ಜಿಲ್ಲೆಯ ಎಲ್ಲಾ ಸಕ್ಕರೆಕಾರ್ಖಾನೆಗಳ ನಿರ್ದೇಶಕರು ಮತ್ತುವ್ಯವಸ್ಥಾಪಕರೊಂದಿಗೆ ಚರ್ಚಿಸಿ ದರನಿಗದಿಪಡಿಸಿ ನಿರ್ಣಯಿಸಲಾಗಿದೆ. ಪ್ರತಟನ್‌ ಕಬ್ಬಿಗೆ ರೈತರಿಗೆ ಪಾವತಿಸಬೇಕಾದ  ಒಟ್ಟು ದರ 2400 ರೂ. ನಿಗದಿಪಡಿಸಿಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

ಸಂಸದ ಭಗವಂತ ಖೂಬಾ ಮಾತನಾಡಿ, ಜಿಲ್ಲೆಯ ಜನಪ್ರತಿನಿ ಧಿಗಳು ಪಕ್ಷಬೇಧ ಮರೆತು ಎಲ್ಲರು ಸೇರಿ ಚರ್ಚಿಸಿ, ರೈತರಿಗೆ ದರ ನಿಗದಿಪಡಿಸುವ ವಿಷಯದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಪ್ರತಿ ಟನ್‌ ಕಬ್ಬಿಗೆ 2400 ರೂ. ರೈತರಿಗೆ ಪಾವತಿಸಲುಕಾರ್ಖಾನೆಗಳ ಆಡಳಿತ ಮಂಡಳಿಯವರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.

ಇದೆ ವೇಳೆ ಶಾಸಕ ರಾಜಶೇಖರ ಪಾಟೀಲಮಾತನಾಡಿ, ಎಲ್ಲ ಜನಪ್ರತಿನಿಧಿಗಳು ಸೇರಿ, ಚರ್ಚಿಸಿ ರೈತರಿಗೆ ನ್ಯಾಯಯುತ ದರ ನೀಡಿದ್ದೇವೆ ಎಂದು ಹೇಳಿದರು. ಸಭೆಯಲ್ಲಿ ಎಂಎಲ್‌ಸಿ ಅರವಿಂದಕುಮಾರ ಅರಳಿ,ಕೆಎಸ್‌ಐಐಡಿಸಿ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ,ಬಿಡಿಎ ಅಧ್ಯಕ್ಷ ಬಾಬು ವಾಲಿ, ಡಿಸಿರಾಮಚಂದ್ರನ್‌ ಆರ್‌, ಎಸ್‌ಪಿ ನಾಗೇಶಡಿ.ಎಲ್‌., ಸಹಾಯಕ ಆಯುಕ್ತರಾದಗರೀಮಾ ಪನ್ವಾರ್‌, ಭುವನೇಶ ಪಟೇಲ್‌,ವಿವಿಧ ಸಕ್ಕರೆ ಕಾರ್ಖಾನೆಗಳ ನಿರ್ದೇಶಕರುಮತ್ತು ವ್ಯವಸ್ಥಾಪಕರು, ವಿವಿಧ ರೈತಸಂಘಟನೆಗಳ ಮುಖಂಡರು ಇದ್ದರು

ಸಭೆ ವಿಳಂಬಕ್ಕೆ ರೈತರ ಆಕ್ರೋಶ :

ರೈತ ಮುಖಂಡರನ್ನು ಹೊರಗಿಟ್ಟು ಕಬ್ಬಿನ ದರ ನಿಗದಿ ಸಂಬಂಧ ಸಭೆಯನ್ನು ನಡೆಸಿದ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದ ನಡೆಗೆ ಜಿಲ್ಲಾ ರೈತ ಸಂಘದ ಎರಡು ಬಣಗಳು ಆಕ್ರೋಶ ವ್ಯಕ್ತಪಡಿಸಿದವು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಬೆ.11ಕ್ಕೆ ಸಭೆ ನಿಗದಿಯಾಗಿದ್ದು, ರೈತ ಸಂಘದ ಪ್ರಮುಖರಲ್ಲರೂ ಸಮಯಕ್ಕೆ ಆಗಮಿಸಿದ್ದರು. ಆದರೆ, ಸಚಿವ ಪ್ರಭು ಚವ್ಹಾಣ ನೇತೃತ್ವದಲ್ಲಿ ಜನಪ್ರತಿನಿ ಧಿಗಳು ಮತ್ತು ಕಾರ್ಖಾನೆ ಮುಖ್ಯಸ್ಥರ ಸಭೆ ಪ್ರತ್ಯೇಕವಾಗಿ ನಡೆಸಿದ್ದರು. ಮಧ್ಯಾಹ್ನ 2 ಗಂಟೆವರೆಗೆ ಯಾರೊಬ್ಬರು ಸಭಾಂಗಣಕ್ಕೆ ಬಾರದ ಹಿನ್ನೆಲೆ ಕೆರಳಿದ ರೈತರು ಸರ್ಕಾರ, ಕಾರ್ಖಾನೆ ಆಡಳಿತ ಮಂಡಳಿಗಳ ವಿರುದ್ಧ ಧಿ ಕ್ಕಾರಕೂಗಿದರು. ಕಬ್ಬು ಬೆಳೆದು ನಮ್ಮ ಬಾಯಿ ಕಹಿ ಆಗಿದೆ. ಸಭೆಯಿಂ ಸಿಹಿ ಸಿಗುತ್ತದೆ ಎಂಬ ಆಸೆ ಹೊತ್ತು ಬಂದಿದ್ದೇವೆ. ಆದರೆ, ಮೂರು ಗಂಟೆ ಕಾಲ ರೈತರನ್ನು ಕಡೆಗಣಿಸಲಾಗಿದೆ. ಮೊದಲೇ ಕಾರ್ಖಾನೆ ಪ್ರಮುಖರ ಜತೆ ಚರ್ಚಿಸಿ ಸಭೆ ಕರೆಯಬಹುದಿತ್ತು ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.