ಬೀದರನಲ್ಲಿ ಶೇ.50 ಗುರಿ ಸಾಧನೆ


Team Udayavani, Feb 1, 2021, 3:55 PM IST

50% target in Beedar

ಬೀದರ: ಜಾಗತಿಕವಾಗಿ ತಲ್ಲಣ್ಣ ಮೂಡಿಸಿರುವ ಕೋವಿಡ್‌-19 ಮುಕ್ತಿಗಾಗಿ ಹಲವು ಸಂಶೋಧನೆಗಳ ಬಳಿಕ ಲಸಿಕೆ ಲಭ್ಯವಾಗಿದೆ. ಆದರೆ, ಮೊದಲ ಹಂತದ ಕೊರೊನಾ ಲಸಿಕೆ ಮಹಾ ಅಭಿಯಾನಕ್ಕೆ ಹಿನ್ನಡೆಯಾಗಿದ್ದು, ಗಡಿ ಜಿಲ್ಲೆಯಲ್ಲಿ ಶೇ.50 ಆರೋಗ್ಯ ಕಾರ್ಯಕರ್ತರು ಮಾತ್ರ ವ್ಯಾಕ್ಸಿನ್‌ ಪಡೆದಿದ್ದಾರೆ. ಇದಕ್ಕೆ ಲಸಿಕೆ ಕುರಿತಾಗಿ ನಂಬಿಕೆ ಇಲ್ಲದಿರವುದು ಮತ್ತು ಅಡ್ಡ ಪರಿಣಾಮಗಳ ಅಪಪ್ರಚಾರ ಕಾರಣ.

ಬಹು ನಿರೀಕ್ಷೆ ಹೆಚ್ಚಿಸಿದ್ದ ಕೋವಿಡ್‌ ಲಸಿಕೆ ಹಂಚಿಕೆಗೂ ಮೊದಲಿದ್ದ ಲೆಕ್ಕಾಚಾರಗಳು ಬುಡ ಮೇಲಾಗಿದೆ. ದೇಶದ ಇತರೆಡೆಯಂತೆ ಜಿಲ್ಲೆಯಲ್ಲೂ ಕೊರೊನಾ ಲಸಿಕೆ ವಿತರಣೆಆರಂಭವಾಗಿ 12 ದಿನಗಳು ಕಳೆದಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ 5 ಜನರಲ್ಲಿ ತಲೆ ನೋವು, ಸುಸ್ತು ಹೊರತುಪಡಿಸಿ ಲಸಿಕೆಯಿಂದ ದೊಡ್ಡಮಟ್ಟದ ಅನಾಹುತವೇನೂ ಸಂಭವಿಸಿಲ್ಲವಾದರೂ ಲಸಿಕೆ ಪಡೆಯಲು ಈ ಮೊದಲು ಹೆಸರು ನೋಂದಾಯಿಸಿಕೊಂಡಿದ್ದ ಕೋವಿಡ್ ವಾರಿಯರ್ಸ್‌ಗಳೇ ಕೊನೆ ಕ್ಷಣದಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಜಿಲ್ಲೆಯಲ್ಲಿ ಲಸಿಕೆ ಮಹಾ ಅಭಿಯಾನದ ಪ್ರಥಮ ಹಂತದಡಿ 10,984 ವಾರಿಯರ್ ನೋಂದಣಿ ಮಾಡಿಕೊಂಡಿದ್ದಾರೆ.

ಮೊದಲು ಆರೋಗ್ಯ ಕಾರ್ಯಕರ್ತರಿಗೆ, ನಂತರ ಪೊಲೀಸ್‌ ಸಿಬ್ಬಂದಿ, ಆಶಾ-ಅಂಗನವಾಡಿ ಕಾರ್ಯಕರ್ತರಿಗೆ ಲಸಿಕೆ ನೀಡುವುದು, ಜ.30ರವರೆಗೆ ನಿಗದಿತ ಗುರಿ ಸಾ ಧಿಸುವ ಕುರಿತು ಆರೋಗ್ಯ ಇಲಾಖೆ ಯೋಜನೆ ರೂಪಿಸಿದೆ. ಆದರೆ, ಇದುವರೆಗೆ ಜಿಲ್ಲೆಯಲ್ಲಿ 5400 ಫಲಾನುಭವಿಗಳು ಮಾತ್ರ “ಕೋವಿಶೀಲ್ಡ್‌’ ಲಸಿಕೆ ಪಡೆದಿದ್ದಾರೆ. ಆರೋಗ್ಯ ಕಾರ್ಯಕರ್ತರು, ಆಶಾ ಸಿಬ್ಬಂದಿ ವ್ಯಾಕ್ಸಿನ್‌ ಪಡೆಯಲು ಮುಂದೆ ಬಂದರೆ, ಖಾಸಗಿ ಆರೋಗ್ಯ ನೌಕರರು, ಅಂಗನವಾಡಿ ಕಾರ್ಯಕರ್ತೆಯರು ಹಿಂಜರಿಯುತ್ತಿರುವುದು ಅಭಿಯಾನ ಹಿನ್ನಡೆಗೆ ಕಾರಣವಾಗಿದೆ.

ಲಸಿಕೆ ಪಡೆದ ಆರೋಗ್ಯ ಸಿಬ್ಬಂದಿ ಸಣ್ಣ ಪುಟ್ಟ ಅಡ್ಡ ಪರಿಣಾಮಗಳು ಬಿಟ್ಟರೆ ತೀವ್ರ ಅನಾಹುತಗಳು ಬರುವುದಿಲ್ಲ ಎಂಬ ಅನುಭವ ಹಂಚಿಕೊಂಡಿದ್ದಾರೆ. ಆದರೂ, ಬಹುತೇಕ ಕೇಂದ್ರಗಳಲ್ಲಿ ವೈದ್ಯರೇ ಹಿಂದೇಟು ಹಾಕುತ್ತಿದ್ದಾರೆ. ದೇಶೀಯ ಲಸಿಕೆ ಕೊನೆ ಹಂತದ ಪ್ರಯೋಗ ಪೂರ್ಣಗೊಳಿಸಿಲ್ಲ, ಇದರಿಂದ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂಬ ಸುದ್ದಿಗಳು ವಾರಿಯರ್‌ ಗಳಲ್ಲಿ ಲಸಿಕೆ ಕುರಿತಾಗಿ ಭಯ ಇದೆ. ಹೀಗಾಗಿ ಮುಂದೆ ತೆಗೆದುಕೊಳ್ಳೋಣಎಂದು ಕಾದು ನೋಡುವ ತಂತ್ರ  ಅನುಸರಿಸುತ್ತಿದ್ದಾರೆ.

ಇದನ್ನೂ ಓದಿ:ಚಿತ್ತಾಪುರ ಪೊಲೀಸರಿಂದ ಜನಜಾಗೃತಿ ಜಾಥಾ

ಲಸಿಕೆ ಪಡೆಯಲು ಹಿಂಜರಿಯುತ್ತಿರುವ ಕೋವಿಡ್ ವಾರಿಯರ್‌ಗಳಲ್ಲಿ ಲಸಿಕೆ ಸುರಕ್ಷತೆ ಮತ್ತು ಅಗತ್ಯತೆ ಕುರಿತು ಭರವಸೆ ಮೂಡಿಸಲು ಜಿಲ್ಲಾಡಳಿತ ಮುಂದಾಗಿದೆ. ಇದಕ್ಕಾಗಿ ಅನುಸರಿಸಬೇಕಾದ ಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಇನ್ನೂ ಪ್ರಥಮ ಹಂತದಲ್ಲಿ ಲಸಿಕೆ ಹಾಕಿಸಿಕೊಂಡವರಿಗೆ 28 ದಿನಗಳ ನಂತರ 2ನೇ ಡೋಸ್‌ ಕೋವಿಡ್‌ ಲಸಿಕೆ ನೀಡಬೇಕಿರುವುದರಿಂದ ಆರೋಗ್ಯ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಫೆ.1ರಿಂದ ಮೂರು ದಿನಗಳವರೆಗೆ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಬಳಿಕ ಮತ್ತೆ ಕೋವಿಡ್‌ ಲಸಿಕೆ ಅಭಿಯಾನ ನಡೆಯಲಿದೆ.

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.