ಬೀದರ್: ಕೋವಿಡ್ 19 ಸೋಂಕಿಗೆ ಮಹಿಳೆ ಸಾವು; ಒಂದೇ ದಿನ 84 ಪ್ರಕರಣ
ಜಿಲ್ಲೆಯಲ್ಲಿ ಮೃತರ ಸಂಖ್ಯೆ 91ಕ್ಕೆ ಏರಿಕೆ ; ಒಟ್ಟು ಸೋಂಕು ಪ್ರಕರಣ 2796 ; ಸಕ್ರೀಯ ಪ್ರಕರಣಗಳು 869
Team Udayavani, Aug 8, 2020, 2:47 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ್: ಜಿಲ್ಲೆಯಲ್ಲಿ ಶುಕ್ರವಾರವೂ ಸಾವಿನ ಕೇಕೆ ಹಾಕಿರುವ ಕೋವಿಡ್ 19 ಸೋಂಕು ಮಹಿಳೆಯೊಬ್ಬಳನ್ನು ಬಲಿ ಪಡೆದಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿಗೆ ಮೃತಪಟ್ಟವರ ಸಂಖ್ಯೆ 91ಕ್ಕೆ ಏರಿಕೆ ಆಗಿದೆ. ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಇಂದು ಹೊಸದಾಗಿ 84 ಜನರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ.
ಬೀದರ ನಗರದ ಚೌಬಾರಾ ನಿವಾಸಿಯಾಗಿರುವ 35 ವರ್ಷದ ರೋಗಿ ಮೃತಪಟ್ಟಿದ್ದಾರೆ. ಜ್ವರ, ಕೆಮ್ಮು, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಐದು ದಿನಗಳಲ್ಲಿ 11 ಜನ ಕೋವಿಡ್ 19 ಸೋಂಕಿತರು ಸಾವಿನ ಕದ ತಟ್ಟಿದಂತಾಗಿದೆ.
ಶುಕ್ರವಾರ ಒಂದೇ ದಿನ ಜಿಲ್ಲೆಯಲ್ಲಿ ಪತ್ತೆಯಾಗಿರುವ 84 ಸೋಂಕು ಪ್ರಕರಣಗಳಲ್ಲಿ ಬೀದರ್ ನಗರ ಮತ್ತು ತಾಲೂಕಿನ 24 ಜನರು ಸೇರಿದ್ದಾರೆ. ಹುಮನಾಬಾದ್- ಚಿಟಗುಪ್ಪ ತಾಲೂಕಿನಲ್ಲಿ 18 ಜನ, ಬಸವಕಲ್ಯಾಣ- ಹುಲಸೂರು ತಾಲೂಕಿನಲ್ಲಿ 15 ಜನ ಮತ್ತು ಔರಾದ್- ಕಮಲನಗರ ತಾಲೂಕಿನಲ್ಲಿ ತಲಾ 15 ಜನ ಹಾಗೂ ಭಾಲ್ಕಿ ತಾಲೂಕಿನಲ್ಲಿ 12 ಜನ ಸೋಂಕಿತರು ಪತ್ತೆಯಾಗಿದ್ದಾರೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 2796ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 91 ಜನ ಮೃತಪಟ್ಟಿದ್ದಾರೆ. ಶುಕ್ರವಾರ ಒಂದೇ ದಿನ 29 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1832ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇನ್ನೂ 869 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ. ಈವರೆಗೆ ಜಿಲ್ಲೆಯ 52,495 ಜನರ ಗಂಟಲ ಮಾದರಿ ತಪಾಸಣೆ ಮಾಡಲಾಗಿದ್ದು, ಈ ಪೈಕಿ 48,998 ಜನರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಇನ್ನೂ 701 ಜನರ ಪರೀಕ್ಷಾ ವರದಿ ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ