ಆರಂಭಗೊಳ್ಳದ ಧಾನ್ಯ ಸ್ವಚ್ಛತೆ-ಪ್ಯಾಕಿಂಗ್‌ ಘಟಕ

ವಿದ್ಯುತ್‌ ವ್ಯವಸ್ಥೆಗಾಗಿ 17.99 ಲಕ್ಷ ರೂ. ಕ್ರಿಯಾ ಯೋಜನೆ ಹಾಕಿಕೊಂಡು ಕೆಲಸ ಮಾಡಲಾಗಿದೆ.

Team Udayavani, Feb 10, 2021, 6:09 PM IST

Aaramba

ಹುಮನಾಬಾದ: ಪಟ್ಟಣದ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಒಂದು ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡ ಧಾನ್ಯ ಸ್ವತ್ಛತೆ, ವರ್ಗೀಕರಣ ಮತ್ತು ಪ್ಯಾಕಿಂಗ್‌ ಘಟಕ ಪೂರ್ಣ ಪ್ರಮಾಣದಲ್ಲಿ ಸ್ಥಾಪನೆಗೊಂಡು ಎರಡು ವರ್ಷಗಳು ಕಳೆದರೂ ಕೂಡ ಆರಂಭಗೊಂಡಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆಗೆ ವಿವಿಧಡೆಯಿಂದ ಬರುವ ರೈತರು, ತಮ್ಮ ವಿವಿಧ ಬಗೆಯ ದವಸ ಧಾನ್ಯಗಳನ್ನು ಸ್ವಯಂ ಚಾಲಿತ ಸ್ವತ್ಛಗೊಳಿಸುವ ಯಂತ್ರದ ಮೂಲಕ ಧಾನ್ಯದಲ್ಲಿ ಮಿಶ್ರಣಗೊಂಡಿರುವ ಮಣ್ಣು, ಧಾನ್ಯದ ಇತರೆ ಪದಾರ್ಥ ವಿಂಗಡಣೆ ಮಾಡುವ ಜೊತೆಗೆ ಸ್ವಯಂ ಚಾಲಿತ ಪ್ಯಾಕಿಂಗ್‌ ಮೂಲಕ ರೈತರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಸ್ಥಳೀಯ ಎಪಿಎಂಸಿ ಪ್ರಾಂಗಣದಲ್ಲಿ ಕಳೆದ ಎರಡು ವರ್ಷಗಳ ಹಿಂದೆ (ಕ್ಲೀನಿಂಗ್‌, ಗ್ರೇಡಿಂಗ್‌ ಹಾಗೂ ಪ್ಯಾಕಿಂಗ್‌) ಘಟಕ ಪೂರ್ಣ ರೀತಿಯಲ್ಲಿ ಸ್ಥಾಪನೆ
ಮಾಡಲಾಗಿತ್ತು.

ಮಾರುಕಟ್ಟೆ ಪ್ರಾಂಗಣದಲ್ಲಿ 2015-16ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಘಟಕದ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಸುಮಾರು 43.16 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಮಾಡಲಾಗಿದೆ. ಅಲ್ಲದೆ, ಸ್ವಯಂ ಚಾಲಿತ ಯಂತ್ರಗಳ ಅಳವಡಿಕೆಗಾಗಿ 38.35 ಹಾಗೂ ವಿದ್ಯುತ್‌ ವ್ಯವಸ್ಥೆಗಾಗಿ 17.99 ಲಕ್ಷ ರೂ. ಕ್ರಿಯಾ ಯೋಜನೆ ಹಾಕಿಕೊಂಡು ಕೆಲಸ ಮಾಡಲಾಗಿದೆ. ಸದ್ಯ ಈಗಾಗಲೇ ಕಟ್ಟಡ ನಿರ್ಮಾಣ ಹಾಗೂ ವಿದ್ಯುತ್‌ ವ್ಯವಸ್ಥೆಯ ಸಂಪೂರ್ಣ
ಹಣ ಪಾವತಿ ಮಾಡಲಾಗಿದ್ದು, ಯಂತ್ರಗಳು ಅಳವಡಿಸಿದ ವ್ಯಕ್ತಿಗೆ ಇನ್ನು ಶೇ.40ರಷ್ಟು ಹಣ ಪಾವತಿ ಮಾಡಬೇಕಿದೆ ಎಂದು ಎಪಿಎಂಸಿ ಪ್ರಭಾರ ಕಾರ್ಯದರ್ಶಿ ತುಳಸಿರಾಮ ಲಾಖೆ ಮಾಹಿತಿ ನೀಡಿದ್ದಾರೆ.

ಸದ್ಯ ಈವರೆಗೂ ಘಟಕದಲ್ಲಿ ಅಳವಡಿಸಿದ ಯಂತ್ರದ ಪ್ರಾಯೋಗಿಕ ಪರೀಕ್ಷೆ ನಡೆದಿಲ್ಲ ಎಂಬುವುದು ತಿಳಿದು ಬಂದಿದೆ. ತಾಲೂಕಿನ ಬಹುತೇಕ ರೈತರು ಹುಮನಾಬಾದ ಎಪಿಎಂಸಿ ಪ್ರಾಂಗಣದಲ್ಲಿನ ಅಂಗಡಿಗಳಿಗೆ ತಮ್ಮ ಹೊಲದಲ್ಲಿ ಬೆಳೆದ ದವಸ ಧಾನ್ಯ ತೆಗೆದುಕೊಂಡು ಮಾರುಕಟ್ಟೆಗೆ ಬರುತ್ತಾರೆ.

ಚೀಲದಲ್ಲಿ ತುಂಬಿಕೊಂಡು ಬಂದ ಧಾನ್ಯಗಳನ್ನು ವ್ಯಾಪಾರಸ್ಥರು ರಸ್ತೆಯಲ್ಲಿ ಹಾಕಿ ಕೆಲಸಗಾರರಿಂದ ಕಸಕಡ್ಡಿ, ಮಣ್ಣು ವಿಂಗಡಣೆ ಮಾಡುತ್ತಿದ್ದಾರೆ. ಸದ್ಯ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಧಾನ್ಯ ವರ್ಗೀಕರಣ ಮತ್ತು ಪ್ಯಾಕಿಂಗ್‌ ಘಟಕ ಪ್ರಾರಂಭವಾದರೆ ರೈತರಿಗೆ ಹಾಗೂ ಎಪಿಎಂಸಿ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎಂದು ವ್ಯಾಪರಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಂದಿನ ಒಂದು ವಾರದಲ್ಲಿ ರಾಯಚೂರಿನಿಂದ ಯಂತ್ರ ನೂರಿತ ತಜ್ಞರು, ತಾಂತ್ರಿಕ ವರ್ಗದವರು ಬರುತ್ತಿದ್ದು, ಕ್ಲೀನಿಂಗ್‌, ಗ್ರೇಡಿಂಗ್‌ ಹಾಗೂ ಪ್ಯಾಕಿಂಗ್‌ ಯಂತ್ರವನ್ನು ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಘಟಕದ ಕಾರ್ಯ ಹಾಗೂ ನಿರ್ವಹಣೆಗಾಗಿ ಈಗಾಗಲೇ ಮೂರು ಬಾರಿ ಟೆಂಡರ್‌ ಕರೆಯಲಾಗಿದೆ. ಟೆಂಡರ್‌ನಲ್ಲಿ ಯಾರು ಭಾಗವಹಿಸದ ಕಾರಣ ನನೆಗುದಿಗೆ ಬಿದ್ದಿದೆ. ಇನ್ನೊಂದು ಬಾರಿ ಟೆಂಡರ್‌ ಕರೆಯುವ ಕೆಲಸ ನಡೆದಿದೆ.
ತುಳಸಿರಾಮ ಲಾಖೆ,
ಪ್ರಭಾರ ಎಪಿಎಂಸಿ ಕಾರ್ಯದರ್ಶಿ

*ದುರ್ಯೋಧನ ಹೂಗಾರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.