6ರಂದು ಪ್ರತಿಭಟನಾ ಮೆರವಣಿಗೆ
Team Udayavani, Nov 25, 2021, 1:33 PM IST
ಮಾನ್ವಿ: ಪೊಲೀಸ್ ಇಲಾಖೆ ಅಧಿಕಾರಿಗಳು ಹಲ್ಲೆಗೊಳಗಾದವರು ನೀಡಿದ ದೂರಿನನ್ವಯ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಡಿ.6ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಎಂ.ಆರ್.ಎಚ್.ಎಸ್. ಪ್ರಗತಿಪರ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಜೆ. ಅಬ್ರಾಹಾಂ ಹೊನ್ನಟಿಗಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಟ್ಟಣದ ಪ್ರಭಾವಿ ಮುಖಂಡರೊಬ್ಬರು ಜಿಲ್ಲೆಯಲ್ಲಿ ಅನೇಕ ಅಕ್ರಮ ಚಟುವಟಿಕೆ ನಡೆಸುತ್ತಿದ್ದು, ಬಡವರಿಗೆ ಸರಕಾರದಿಂದ ದೊರೆಯುತ್ತಿರುವ ಅನ್ನಭಾಗ್ಯದ ಅಕ್ಕಿಯನ್ನು ಕೂಡ ಬಿಡದೆ ತಮ್ಮ ಅಕ್ಕಿಗಿರಣಿಯಲ್ಲಿ ಪಾಲೀಶ್ ಮಾಡಿಸಿ ಹೆಚ್ಚಿನ ಬೆಲೆಯ ಅಕ್ಕಿಯಲ್ಲಿ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದಾರೆ. ಅಕ್ರಮ ಚಟುವಟಿಕೆಗಳನ್ನು ಪ್ರಶ್ನೆಮಾಡಿದ ಉನ್ನತ ಅಧಿಕಾರಿಗಳನ್ನು, ಪತ್ರಿಕಾ ವರದಿಗಾರರನ್ನು, ಸಂಘಟನೆಗಳ ಮುಖಂಡರ ಮೇಲೆ ತಮ್ಮ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ ಮಾಡಿಸುತ್ತಿದ್ದಾರೆ. ಇದನ್ನು ಖಂಡಿಸಿ ಹಮ್ಮಿಕೊಂಡಿರುವ ಹೋರಾಟದಲ್ಲಿ ತಾಲೂಕಿನ ಪ್ರಗತಿಪರ ಚಿಂತಕರು ಹಾಗೂ ಸಂಘ-ಸಂಸ್ಥೆಯವರು ಭಾಗವಹಿಸುವಂತೆ ಕೋರಿದರು.
ಮುಖಂಡರಾದ ಅಶೋಕ ನಿಲೋಗಲ್, ಎ.ಕೆ. ಮರಿಯಣ್ಣ, ಪಿ.ರವಿಕುಮಾರ್, ಜಯಪ್ಪ, ಬಸವರಾಜ, ಯಲ್ಲಪ್ಪ, ಅಜೀತ್, ಗಣೇಶ, ಶಿವು, ಸಿದ್ದಪ್ಪ, ಪರಶುರಾಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್