ನಿರ್ವಹಣೆ ಇಲ್ಲದೇ ಪಾಳುಬಿದ್ದ ಪುರಭವನ


Team Udayavani, Jan 3, 2022, 12:56 PM IST

14town-hall

ಹುಮನಾಬಾದ: ಪಟ್ಟಣದ ಏಕೈಕ ಉದ್ಯಾನವನ ಆವರಣದಲ್ಲಿ 3.14 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪುರಭವನ ಉದ್ಘಾಟನೆಗೂ ಮುನ್ನವೇ ಹಾಳಾದ ಸ್ಥಿತಿಗೆ ಬಂದಿದೆ. ಸದ್ಯ ಕಟ್ಟಡ ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ನೆಮ್ಮದಿ ಊರು ಯೋಜನೆಯ ಎಚ್‌ ಕೆಆರ್‌ಡಿ ಮ್ಯಾಕ್ರೋ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಂಡು ಮುಖ್ಯ ಕಟ್ಟಡ ಕಾಮಗಾರಿಗೆ 1.94 ಕೋಟಿ ವೆಚ್ಚ ಮಾಡಲಾಗಿದೆ. 500 ಜನರು ಏಕಕಾಲಕ್ಕೆ ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ ಕಟ್ಟಡದ ಸುತ್ತುಗೋಡೆ, ವಿದ್ಯುತ್‌ ದೀಪ, ಉದ್ಯಾನವನ ವ್ಯವಸ್ಥೆ, ಎಸಿ ಸೇರಿದಂತೆ ಇತರೆ ಕಾಮಗಾರಿಗಳಿಗೆ ಸುಮಾರು 1.20 ಕೋಟಿ ರೂ. ಖರ್ಚು ಮಾಡಲಾಗಿದೆ.

ಲೋಕೋಪಯೋಗಿ ಇಲಾಖೆಯಡಿಯಲ್ಲಿ ಕಾಮಗಾರಿ ನಡೆದಿದ್ದು, 2020ರಲ್ಲಿ ಪೂರ್ಣಗೊಂಡ ಕಾಮಗಾರಿ ಫೆಬ್ರವರಿ ತಿಂಗಳಲ್ಲಿ ಸ್ಥಳೀಯ ಪುರಸಭೆಗೆ ಹಸ್ತಾಂತರಗೊಂಡಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿರ್ವಹಣೆ ಕೊರತೆ

ಉದ್ಯಾನವನ ಆವರಣದಲ್ಲಿ ನಿರ್ಮಾಣಗೊಂಡಿರುವ ಕಟ್ಟಡ ನೋಡುಗರ ಗಮನ ಸೆಳೆಯುವಂತಿದೆ. ಆದರೆ ಕಟ್ಟಡ ನಿರ್ವಹಣೆ ಮಾಡುವಲ್ಲಿ ಇಲ್ಲಿನ ಪುರಸಭೆ ಆಡಳಿತ ಸಂಪೂರ್ಣ ವಿಫಲಗೊಂಡಿದೆ. ಕಟ್ಟಡ ಆವರಣದಲ್ಲಿ ಹಾಸಿದ ಹುಲ್ಲು ಒಣಗಿದೆ. ಎಲ್ಲಾ ಕಡೆಗಳಲ್ಲಿ ಗಿಡಗಂಟೆಗಳು ಬೆಳೆದು ನಿಂತಿವೆ. ವಿದ್ಯುತ್‌ ಕಂಬಗಳ ದೀಪಗಳು ಒಡೆದು ಹಾಕಲಾಗಿದೆ. ಕಿಟಕಿ ಬಾಗಿಲು ಗಾಜುಗಳು ಪುಡಿ ಮಾಡಲಾಗಿದೆ. ಹೊಸ ಕಟ್ಟಡ ಆವರಣದ ಎಲ್ಲ ಕಡೆಗಳಲ್ಲಿ ಪಾಳು ಬಿದ್ದಂತೆ ಭಾಸವಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡುವಲ್ಲಿ ವಿಫಲಗೊಂಡಿದ್ದಾರೆ. ಇಲ್ಲಿನ ಪುರಸಭೆಗೆ ಒಬ್ಬರ ನಂತರ ಒಬ್ಬರು ಅಧಿಕಾರಿಗಳು ಬದಲಾಗುತ್ತಿದ್ದು, ಪುರಭವನ ಕಡೆಗೆ ನೋಡಲು ಸಾಧ್ಯವಾಗುತ್ತಿಲ್ಲ ಎಂದು ಕೆಲ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ.

ಅನೈತಿಕ ಚಟುವಟಿಕೆ ತಾಣ

ಇಲ್ಲಿನ ಉದ್ಯಾನವನ ಈ ಹಿಂದೆ ಸಾರ್ವಜನಿಕರ ಆಕರ್ಷಣೆಯ ಕೇಂದ್ರವಾಗಿತ್ತು. ದಿನಗಳೆದಂತೆ ನಿರ್ವಹಣೆ ಕೊರತೆಯಿಂದ ಉದ್ಯಾನವನ ಸಂಪೂರ್ಣ ಹಾಳಾಗಿತ್ತು. ಈ ಮಧ್ಯದಲ್ಲಿ ಪುರಭವನ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಕಟ್ಟಡವಾದರೂ ಸಾರ್ವಜನಿಕರ ಉಪಯೋಗಕ್ಕೆ ಬರುತ್ತೆಂದು ಊಹಿಸಲಾಗಿತ್ತು. ಆದರೆ ಕಟ್ಟಡ ಮಾತ್ರ ಪುಂಡ- ಪೋಕರಿಗಳ ಅನೈತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಕಟ್ಟಡದ ಮುಖ್ಯ ದ್ವಾರಕ್ಕೆ ಹಾಗೂ ಗೇಟಿಗೆ ಬೀಗ ಹಾಕದ ಕಾರಣ ಪುಂಡರು ಅಕ್ರಮ ಪ್ರವೇಶ ಮಾಡಿ ವಿವಿಧ ವಸ್ತುಗಳಿಗೆ ಹಾನಿ ಉಂಟು ಮಾಡುತ್ತಿದ್ದಾರೆ. ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಹೆಚ್ಚು ಹಾನಿ ಸಂಭವಿಸಬಹುದಾಗಿದೆ.

ಈಡೇರದ ಶಾಸಕರ ಮಾತು

ಪಟ್ಟಣದಲ್ಲಿರುವ ಉದ್ಯಾನವನ ಅಭಿವೃದ್ಧಿ ಮಾಡುವುದಾಗಿ ಅನೇಕ ಬಾರಿ ಭರವಸೆ ನೀಡಿದ ಶಾಸಕರ ಮಾತು ಇಂದಿಗೂ ಕಾರ್ಯ ರೂಪಕ್ಕೆ ಬಂದಿಲ್ಲ. ಪಟ್ಟಣದಲ್ಲಿ ಹೈಟೆಕ್‌ ಉದ್ಯಾನವನ, ಹೈಟೆಕ್‌ ಲೈಬ್ರರಿ, ಹೈಟೆಕ್‌ ಜಿಮ್‌ ವ್ಯವಸ್ಥೆ ಕಲ್ಪಿಸುವುದಾಗಿ ಶಾಸಕರು ಅನೇಕ ಬಾರಿ ಹೇಳಿದ್ದರು. ಅಲ್ಲದೆ ಸಾರ್ವಜನಿಕರ ಅನುಕೂಲಕ್ಕಾಗಿ ಉದ್ಯಾನವನದಲ್ಲಿ ಪುರಭವನ ನಿರ್ಮಿಸಲಾಗುತ್ತಿದೆ ಎಂದು ಹೇಳಿದ್ದರು. ಇದೀಗ ಕೂಡಲೇ ಪುರಭವನ ಉದ್ಘಾಟನೆ ಮಾಡಿ, ಸೂಕ್ತ ನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕರು ನಿರ್ದೇಶನ ನೀಡಬೇಕಾಗಿದೆ. ಈ ಕುರಿತು ಪುರಸಭೆ ಮುಖ್ಯಾಧಿಕಾರಿ ಚಾಂದ್‌ ಪಟೇಲ್‌ ಖುದ್ದು ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

-ದುರ್ಯೋಧನ ಹೂಗಾರ

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.