ಮಹಿಳೆಯರಲ್ಲಿದೆ ಉದ್ಯಮಿಯಾಗುವ ಸಾಮರ್ಥ್ಯ

ತಿಂಗಳಿಗೊಮ್ಮೆಯಾದರೂ ಇಂತಹ ಮೇಳಗಳನ್ನು ಆಯೋಜಿಸಿ ವಸ್ತುಗಳ ಪ್ರದರ್ಶನಕ್ಕೆ ಅನುವು ಮಾಡಿಕೊಡಲಾಗುವುದು

Team Udayavani, Feb 15, 2021, 5:57 PM IST

ಮಹಿಳೆಯರಲ್ಲಿದೆ ಉದ್ಯಮಿಯಾಗುವ ಸಾಮರ್ಥ್ಯ

ಬೀದರ: ಜವಾಬ್ದಾರಿಗೆ ಅನುಗುಣವಾಗಿ ಕುಟುಂಬದಲ್ಲಿ ಹಲವು ವಿಧದ ಪಾತ್ರ ಯಶಸ್ವಿಯಾಗಿ ನಿರ್ವಹಿಸುವ ಮಹಿಳೆ ಕುಟುಂಬದ ಏಳ್ಗೆಗೆ ಆಧಾರವಾಗಿದ್ದಾಳೆ. ಮನೆ ನಿರ್ವಹಿಸುವ ಗೃಹಿಣಿಯಾಗಿಯೂ ಕುಟುಂಬಕ್ಕೆ ಆರ್ಥಿಕ ಬಲ ನೀಡುವ ಉದ್ಯಮಿಯಾಗಿಯೂ ಸೇವೆ ಸಲ್ಲಿಸುವ ಅಸಾಧರಣ ಸಾಮರ್ಥ್ಯ ಮಹಿಳೆ ಹೊಂದಿದ್ದಾಳೆ ಎಂದು ಕೌಶಲ್ಯ ಕರ್ನಾಟಕ ಅಧಿಕಾರಿ ಶಿವಲೀಲಾ ಬಂಡೆ ಹೇಳಿದರು. ನೂಪುರ ನೃತ್ಯ ಅಕಾಡೆಮಿಯಿಂದ ನಗರದಲ್ಲಿ ನಡೆದ ಕರಕುಶಲ ಮೇಳ ಮತ್ತು ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮನೆಯಲ್ಲಿಯೇ ವಿವಿಧ ಬಗೆಯ ಕರಕುಶಲ ವಸ್ತುಗಳ ತಯಾರಿಯನ್ನು ಹವ್ಯಾಸವಾಗಿ ಹೊಂದಿರುವ ಅನೇಕ ಗೃಹಿಣಿಯರು ಅತ್ಯುತ್ತಮ ವಸ್ತುಗಳನ್ನು ತಯಾರಿಸುತ್ತಿದ್ದಾರೆ. ಆದರೆ ಮಾರುಕಟ್ಟೆಗೆ ಬಂದು ವ್ಯವಹಾರ ಮಾಡುವಲ್ಲಿ ಸಮಸ್ಯೆ ಹೊಂದಿದ್ದಾರೆ. ಮುಖ್ಯವಾಗಿ ಕೌಟುಂಬಿಕ ಸಹಾಯ ಮತ್ತು ಉಪೇಕ್ಷೆಗಳಿಂದ ಹಿಂದುಳಿದಿರುವುದು ಕಂಡುಬರುತ್ತದೆ ಎಂದರು.

ಕುಟುಂಬ ಮತ್ತು ವ್ಯವಹಾರ ಎರಡನ್ನೂ ನಿಭಾಯಿಸುವ ಅಸಾಧಾರಣ ಸಾಮರ್ಥ್ಯ ಗುರುತಿಸದೇ ಹೆಣ್ಣು ಎಂದಾಕ್ಷಣ ಅಸಡ್ಡೆ ತೋರುವ ಸಾಮಾಜಿಕ ಚಿಂತನೆ, ವಿಚಾರಧಾರೆ ನಾವಿಂದು ಬದಲಿಸಬೇಕು. ಮಹಿಳೆಯರೆಲ್ಲರೂ ತಮ್ಮ ಮನೆಗಳಿಂದಲೇ ಹೊಸ ಚಿಂತನೆ ಬಿತ್ತುವ ಕಾರ್ಯ ಆರಂಭಿಸಬೇಕು. ಬೀದರಿನಲ್ಲಿ ಇಂದು ದ್ಯೋಗವಕಾಶಗಳು ಹೆಚ್ಚಾಗುತ್ತಿವೆ. ಸಣ್ಣ ಕೈಗಾರಿಕೆಗಳಿಗೆ ಗೃಹೋದ್ಯಮಗಳಿಗೆ ಅತ್ಯುತ್ತಮ ಬೇಡಿಕೆಯಿದ್ದು ಸರ್ಕಾರದ ಸಹಾಯ ಸೌಲಭ್ಯ, ನೆರವು ಬಳಸಿಕೊಳ್ಳಬೇಕು ಎಂದರು.

ಹಿರಿಯ ಜೀವಿ ಜಗದೇವಿ ಪೊಲೀಸ್‌ ಪಾಟೀಲ ಚಾಲನೆ ನೀಡಿ ಮಾತನಾಡಿ, ಮಹಿಳೆ ಎಂದೂ ಅಬಲೆಯಲ್ಲ. ಅವಳೂ ಔದ್ಯೋಗಿಕ ರಂಗದಲ್ಲೂ ಮಿಂಚಬಹುದು. ಅದಕ್ಕಾಗಿ ದೃಢ ಮನಸ್ಸು ಮಾಡಬೇಕು ಎಂದರು. ದಂತ ವೈದ್ಯೆ ಡಾ| ಶ್ವೇತಾ ಮೇಗೂರು ಮಾತನಾಡಿ, ಮಹಿಳೆಯರು ಪ್ರಭಾವ ಶಾಲಿಯಾಗಿ ಬೆಳೆಯಲು ಸಾಧ್ಯವಿದೆ. ಪ್ರತಿಭಾನ್ವಿತ ಮಹಿಳೆ ಸಮಾಜಕ್ಕೆ ಅಂಜಬೇಕಿಲ್ಲ. ತಮ್ಮ ನಡೆ-ನುಡಿಯಿಂದ ಸಂಸ್ಕಾ ರಯುತವಾಗಿ ಬದುಕುವುದರಿಂದ ಗೌರವಾನ್ವಿತ ವ್ಯಕ್ತಿಗಳಾಗಿ
ಬದುಕಬಹುದು ಎಂದರು.

ಸಾಧಕ ಮಹಿಳೆ ಸಿರಿಗನ್ನಡ ವೇದಿಕೆ ಅಧ್ಯಕ್ಷೆ ರೂಪಾ ಪಾಟೀಲ ಮಾತನಾಡಿ, ನೃತ್ಯ, ಸಂಗೀತ ಕಲೆಗಳು ಸಾಮರ್ಥ್ಯ ವೃದ್ಧಿಗೆ ಸಹಕಾರಿ ಎಂದರು. ಅಕಾಡೆಮಿಯ ಉಷಾ ಪ್ರಭಾಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರಲ್ಲಿನ ಪ್ರತಿಭೆ ಪ್ರದರ್ಶಿಸಲು ಅವಕಾಶಗಳು ಒದಗಿ ಬರಬೇಕು. ಅದಕ್ಕಾಗಿ ನೃತ್ಯ ವಿದ್ಯಾರ್ಥಿಗಳ ಪಾಲಕರಿಗಾಗಿ ಕರಕುಶಲ ಮೇಳ ಆಯೋಜಿಸಿ ಅವರ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಒದಗಿಸುವ ಸಣ್ಣ ಪ್ರಯತ್ನ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ತಿಂಗಳಿಗೊಮ್ಮೆಯಾದರೂ ಇಂತಹ ಮೇಳಗಳನ್ನು ಆಯೋಜಿಸಿ ವಸ್ತುಗಳ ಪ್ರದರ್ಶನ-ಮಾರಾಟಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.

ಆಹಾರ ವಸ್ತುಗಳ ಪ್ರದರ್ಶನ ಮಾರಾಟದಲ್ಲಿ ಸಂಧ್ಯಾ ಸಹಿನಾಳೆ ಪ್ರಥಮ, ರಾಜೇಶ್ವರಿ ವಾಸಿ ದ್ವಿತೀಯ ಹಾಗೂ ಕರಕುಶಲ ವಿಭಾಗದಲ್ಲಿ ರೋಹಿಣಿ ಸಂತೋಷ, ಪವಿತ್ರಾ ಪವನಕುಮಾರ ಪ್ರಶಸ್ತಿ ಪಡೆದರು. ಈ ವೇಳೆ ರಘುರಾಮ ಉಪಾಧ್ಯಾಯ, ಉಮೇಶ ನಾಯಕ, ಸತೀಶ ಕೋಟ್ಯಾನ, ಅನಿತಾ ಶೆಟ್ಟಿ ಇತರರು ಇದ್ದರು. ಸುಬ್ರಹ್ಮಣ್ಯ ಪ್ರಭು ಕಾರ್ಯಕ್ರಮ ನಿರ್ವಹಿಸಿದರು. ಪ್ರಥಮ ಪ್ರಭು ಸಂಚಾಲನೆ ಮಾಡಿದರು. ಪ್ರಭಾಕರ ಎ.ಎಸ್‌ ಸ್ವಾಗತಿಸಿದರು. ಮಂಗಳಾ ಭಾಗವತ ವಂದಿಸಿದರು.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.