ಲಂಚ ಸ್ವೀಕಾರ: ಎಸಿಬಿ ಬಲೆಗೆ ಬಿದ್ದ ಎಇ
Team Udayavani, Apr 1, 2022, 2:22 PM IST
ಬೀದರ: ಕಾಮಗಾರಿಯ ಆದೇಶ ಪ್ರತಿ ನೀಡಲು ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ (ಆರ್ಡಿಡಬ್ಲ್ಯೂಎಸ್) ಸಹಾಯಕ ಅಭಿಯಂತರ ಭ್ರಷ್ಟಾಚಾರ ನಿಗ್ರಹ ದಳ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ.
ನಾಗನಾಥ ಲಕ್ಷ್ಮಣರಾವ್ ಬಿರಾದಾರ ಎಸಿಬಿ ಬಲೆಗೆ ಬಿದ್ದಿರುವ ಸಹಾಯಕ ಅಭಿಯಂತರ. ನಗರದ ದೇವಿ ಕಾಲೋನಿ ನಿವಾಸಿಯಾಗಿರುವ ಮಚ್ಛೇಂದ್ರ ರೆಡ್ಡಿ ರಾಮರೆಡ್ಡಿ ಅವರಿಗೆ ಜಲಜೀವನ ಮಿಷನ್ ಯೋಜನೆಯಡಿ ಟೆಂಡರ್ ಹಂಚಿಕೆಯಾಗಿದ್ದು, ಟೆಂಡರ್ ಕರಾರು ಒಪ್ಪಂದ ಮತ್ತು ವರ್ಕ್ ಆರ್ಡರ್ ಸಿದ್ಧಪಡಿಸಿ ಕಾಮಗಾರಿಯ ಆದೇಶ ಪ್ರತಿಯನ್ನು ನೀಡಿದ ನಂತರ 30 ಸಾವಿರ ರೂ. ಲಂಚಕ್ಕಾಗಿ ಎಇ ನಾಗನಾಥ ಅವರು ಬೇಡಿಕೆ ಇಟ್ಟಿದ್ದರು. ಈ ಕುರಿತು ಮಚ್ಛೇಂದ್ರ ಅವರು ಎಸಿಬಿಗೆ ದೂರು ನೀಡಿದ್ದರು.
ಒಪ್ಪಂದದಂತೆ ಗುರುವಾರ ಎಇ ನಾಗನಾಥ ಅವರು ಗುತ್ತಿಗೆದಾರ ಮಚ್ಛೇಂದ್ರ ರೆಡ್ಡಿ ಅವರಿಂದ 30 ಸಾವಿರ ರೂ. ಲಂಚದ ಹಣ ತೆಗೆದುಕೊಳ್ಳುವಾಗ ಎಸಿಬಿ ಡಿವೈಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಿ ಆಪಾದಿತನಿಗೆ ದಸ್ತಗಿರಿ ಮಾಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಪಿಐಗಳಾದ ವೆಂಕಟೇಶ ಯಡಹಳ್ಳಿ, ಶರಣಬಸಪ್ಪ ಮತ್ತು ಸಿಬ್ಬಂದಿ ದಾಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು