ಗುಂಡಿ ಮುಚ್ಚದಿದ್ದರೆ ಅಪಘಾತ ಖಚಿತ


Team Udayavani, Apr 1, 2019, 4:18 PM IST

bid-4
ಭಾಲ್ಕಿ: ಪಟ್ಟಣದ ಹಲವು ಬಡಾವಣೆಗಳ ರಸ್ತೆಗಳಲ್ಲಿ ತಗ್ಗು ಗುಂಡಿಗಳು ನಿರ್ಮಾಣವಾಗಿ ಹದಗೆಟ್ಟಿದ್ದು, ಇಂತಹ ರಸ್ತೆಗಳಲ್ಲಿ ಸಾರ್ವಜನಿಕರು ಸಂಚರಿಸಲು ನಿತ್ಯ ಪ್ರಯಾಸ ಪಡಬೇಕಾಗಿದೆ.
ಪಟ್ಟಣದ ಹೃದಯ ಭಾಗ ಚನ್ನಬಸವಾಶ್ರಮದ ಹತ್ತಿರ ಹಳೆ ತಹಶೀಲ್ದಾರ್‌ ಕಚೇರಿ ಪ್ರದೇಶದ ಕೂಡು ರಸ್ತೆಯ ಮಧ್ಯಭಾಗದಲ್ಲಿ ದೊಡ್ಡ ಗುಂಡಿ ನಿರ್ಮಾಣವಾಗಿದ್ದು, ಈ ಗುಂಡಿ ಮೇಲೆ ಕಾರು, ಬೈಕ್‌ಗಳು ಹಲವಾರು ಸಲ ಬಿದ್ದು ಚಾಲಕರು ಆಸ್ಪತ್ರೆ ಸೇರಿದ ಘಟನೆಗಳು ನಡೆದಿವೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಇದರುವರೆಗೆ ಗುಂಡಿ ಮುಚ್ಚುವ ಗೋಜಿಗೆ ಹೋಗಿಲ್ಲ.
ಈ ರಸ್ತೆಯಲ್ಲಿ ಗುಂಡಿ ಸುಮಾರು 4 ವರ್ಷಗಳಿಂದ ಹಾಗೆಯೇ ಇದೆ. ಪ್ರತಿನಿತ್ಯ ಹೊಸದಾಗಿ ಬರುವ ವಾಹನ ಚಾಲಕರು ಈ ಗುಂಡಿಯಲ್ಲಿ ಬಿದ್ದು ಕೈ ಕಾಲು ಮುರಿದುಕೊಳ್ಳುತ್ತಾರೆ. ಆದರೆ ಯಾರೊಬ್ಬರೂ ಈ ಗುಂಡಿ ಮುಚ್ಚುವ ಕಡೆ ಗಮನ ಹರಿಸುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿ ಮಹೇಶ ವಾರದ. ಇಂತಹ ಗುಂಡಿಗಳು ಈ ಒಂದೇ ಸ್ಥಳದಲ್ಲಿ ಮಾತ್ರವಲ್ಲ ಪಟ್ಟಣದ ಹಲವಾರು ಕಡೆಗಳಲ್ಲಿ ಇವೆ. ಆದರೆ ಪುರಸಭೆ ಅಧಿಕಾರಿಗಳು ಈ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕರಿಗೆ ಸಹಕರಿಸುವ ಕಾರ್ಯ ಮಾಡಬೇಕು ಎಂಬುದು ಜನರ ಆಗ್ರಹವಾಗಿದೆ.
ರಸ್ತೆ ಮಧ್ಯಭಾಗದಲ್ಲಿ ಯಾವುದೇ ತಗ್ಗು ಗುಂಡಿಗಳಿರಬಾರದು ಎನ್ನುವ ನಿಯಮವಿದೆ. ಅಂತಹ ಗುಂಡಿಗಳು ಕಂಡು ಬಂದರೆ ತಕ್ಷಣ ಮುಚ್ಚಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎನ್ನುವುದು ಸರ್ಕಾರದ ಮೂಲ ಉದ್ದೇಶ. ಆದರೆ ಸರ್ಕಾರದ ಅಧೀನದಲ್ಲಿ ಕಾರ್ಯಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ಇತ್ತ ಗಮನ ಹರಿಸದೇ, ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಎಲ್ಲೆಂದರಲ್ಲಿ ತಗ್ಗು ಗುಂಡಿಗಳಿದ್ದರೂ ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ.
ಈ ಮೊದಲು ರಸ್ತೆ ಪಕ್ಕ ನೀರು ಸರಬರಾಜಿಗಾಗಿ ಪೈಪ್‌ಲೈನ್‌ ವ್ಯವಸ್ಥೆ ಮಾಡಲಾಗಿತ್ತು, ರಸ್ತೆ ಅಗಲೀಕರಣದ ನಂತರ ಪೈಪ್‌ಲೈನ್‌ನಲ್ಲಿರುವ ವಾಲ್‌ಗ‌ಳು ರಸ್ತೆಯ ನಡುವೆ ಬಂದಿವೆ. ಹೊಸದಾಗಿ ನಿರ್ಮಿಸಲಾಗುತ್ತಿರುವ ಪೈಪ್‌ಲೈನ್‌ ಜೋಡಣೆಯ ನಂತರ ಎಲ್ಲಾ ತಗ್ಗು ಗುಂಡಿಗಳನ್ನು ಮುಚ್ಚಲಾಗುವುದು ಎನ್ನುವುದು ಪುರಸಭೆ ಮುಖ್ಯಾ ಧಿಕಾರಿ ಶಿವಶರಣಯ್ನಾ ಸ್ವಾಮಿ ಅವರ ಮಾತು.
ಆದಷ್ಟು ಬೇಗ ರಸ್ತೆ ಮಧ್ಯದ ತಗ್ಗು ಗುಂಡಿಗಳನ್ನು ಮುಚ್ಚಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಣಿವು ಮಾಡಿಕೊಡಬೇಕು ಎನ್ನುವುದು ಇಲ್ಲಿನ ನಾಗರಿಕರ ಒತ್ತಾಸೆಯಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.