ಕಂದು ರೋಗ ನಿಯಂತ್ರಣಕ್ಕೆ ಕ್ರಮ

ಹ್ಯಾಂಡ್‌ ಗ್ಲೌಸ್‌ ಮತ್ತು ಮಾಸ್ಕ್ ಧರಿಸಿ ಸುರಕ್ಷತೆಯಿಂದ ಲಸಿಕೆ ಹಾಕಬೇಕು

Team Udayavani, Sep 8, 2021, 6:09 PM IST

ಕಂದು ರೋಗ ನಿಯಂತ್ರಣಕ್ಕೆ ಕ್ರಮ

ಬೀದರ: ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಅತೀ ಅವಶ್ಯಕತೆ ಇದೆ ಎನ್ನುವಂತಹ ವಿಷಯಗಳ ಬಗ್ಗೆ ರೈತರಿಗೆ ತಿಳಿಸಿ, ಅವರ ಮನವೊಲಿಸಿ ಲಸಿಕೆ ಕಡ್ಡಾಯ ಹಾಕಿಸಬೇಕು. ಪಶು ವೈದ್ಯರು ಹಳ್ಳಿಗಳಿಗೆ ಬಂದಾಗ ರೈತರು ಲಸಿಕಾಕರಣಕ್ಕೆ ಸಹಕರಿಸಬೇಕು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಮನವಿ ಮಾಡಿದರು.

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ರಾಜ್ಯಮಟ್ಟದ ಕಂದುರೋಗ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸುವುದಕ್ಕೆ ಸಂಬಂಧಿಸಿದಂತೆ ಕಲಬುರಗಿ ವಿಭಾಗದ ಆರು ಜಿಲ್ಲೆಗಳ ಪಶುಪಾಲನಾ ಇಲಾಖೆ ಅಧಿಕಾರಿಗಳನ್ನೊಳಗೊಂಡ ವಿಭಾಗೀಯ ಮಟ್ಟದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತರಿಗೆ ಆರ್ಥಿಕ ನಷ್ಟ ಉಂಟು ಮಾಡುವ ಹಾಗೂ ಪ್ರಾಣಿ ಜನ್ಯ ಮಾನವ ರೋಗದ ಬಗ್ಗೆ ಮೊದಲು ಪಶುಪಾಲನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾಹಿತಿ ಇರಬೇಕು. ಗಂಡು ಕರುಗಳಿಗೆ ಈ ಲಸಿಕೆ ಹಾಕಿಸಬಾರದು ಎನ್ನುವಂತಹ ವಿಶೇಷ ಮುನ್ನೆಚ್ಚರಿಕೆಯ ಕ್ರಮಗಳ ಪಾಲನೆಗೆ ಒತ್ತು ಕೊಡಬೇಕು ಎಂದರು.

ಬೀದರ ಜಿಲೆಯಲ್ಲಿ ಇರುವ ಎಲ್ಲ ಒಟ್ಟು 25,000 ಹೆಣ್ಣು ಕರುಗಳನ್ನು ಕಡ್ಡಾಯವಾಗಿ ಲಸಿಕೆಗೊಳಪಡಿಸಬೇಕು. ಇದು ಮನುಷ್ಯರಿಗೂ ಹರಡುವ ಸಾಧ್ಯತೆ ಇರುವುದರಿಂದ ಲಸಿಕಾದಾರರು  ಕೂಡ ಕಡ್ಡಾಯ ಹ್ಯಾಂಡ್‌ ಗ್ಲೌಸ್‌ ಮತ್ತು ಮಾಸ್ಕ್ ಧರಿಸಿ ಸುರಕ್ಷತೆಯಿಂದ ಲಸಿಕೆ ಹಾಕಬೇಕು ಎಂದು ಸಚಿವರು ಸಲಹೆ ಮಾಡಿದರು.

ಅಪರ ನಿರ್ದೇಶಕ ಡಾ| ತಿಪ್ಪೇಸ್ವಾಮಿ ಮಾತನಾಡಿ, ಪ್ರತಿಬಂಧಕೋಪಾಯವಾಗಿ 4-8 ತಿಂಗಳು ಪ್ರಾಯದ ಹಸು ಮತ್ತು ಎಮ್ಮೆಗಳ ಹೆಣ್ಣು ಕರುಗಳಿಗೆ ತಪ್ಪದೇ ಜೀವನದಲ್ಲಿ ಒಮ್ಮೆ ಮಾತ್ರವೇ ಲಸಿಕೆ ಹಾಕಿಸುವುದರಿಂದ ಜಾನುವಾರುಗಳ ಹಿಂಡಿನಲ್ಲಿ ರೋಗ ಪ್ರತಿಬಂಧಕ ಶಕ್ತಿ ಹೆಚ್ಚಿಸಲು ಸಾಧ್ಯವಾಗುತ್ತದೆ ಎಂಬುದನ್ನು ರೈತರು ಅರಿಯಬೇಕು ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಕಂದು ರೋಗ ಎಂದರೇನು?, ಅದನ್ನು ತಡೆಗಟ್ಟುವ ರೀತಿ ಹೇಗೆ?, ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಏನು? ಎಂಬುದರ ಬಗ್ಗೆ ಕಾರ್ಯಾಗಾರದಲ್ಲಿ ಸಮಗ್ರ ಚರ್ಚಿಸಲಾಯಿತು. ಕಂದು ರೋಗವು ಹಸು, ಎಮ್ಮೆ, ಕುರಿ, ಮೇಕೆ, ಹಂದಿ, ನಾಯಿ, ಒಂಟೆ ಮತ್ತು ಕುದುರೆ ಮುಂತಾದ ಪ್ರಾಣಿಗಳಲ್ಲಿ ಕಂಡು ಬರುವ ಮಾರಕ ರೋಗವಾಗಿದೆ. ಈ ರೋಗದಿಂದ ಜಾನುವಾರುಗಳಲ್ಲಿ ಗರ್ಭಪಾತ, ಅನಾರೋಗ್ಯ, ಉತ್ಪಾದನೆಯಲ್ಲಿ ಕುಸಿತ ಹಾಗೂ ಬಂಜೆತನ ಉಂಟಾಗಿ ಪಶುಪಾಲಕರಿಗೆ ನಷ್ಟ ಉಂಟುಮಾಡುತ್ತದೆ ಎಂಬುದನ್ನು ರೈತಬಾಂಧವರಿಗೆ ತಿಳಿಸಿ ಅಭಿಯಾನಕ್ಕೆ ಸಹಕರಿಸಬೇಕು ಎಂಬುದರ ಬಗ್ಗೆ
ಕಾರ್ಯಾಗಾರದಲ್ಲಿ ಚರ್ಚಿಸಲಾಯಿತು.

ಇಲಾಖೆಯ ಬೀದರ ಉಪ ನಿರ್ದೇಶಕ ಡಾ| ರವಿ ಬೂರೆ ಮಾತನಾಡಿದರು. ಉಪ ನಿರ್ದೇಶಕರಾದ ಕಲಬುರಗಿ ಡಾ| ಬಿ.ಎಸ್‌. ಪಾಟೀಲ, ರಾಯಚೂರಿನ ಡಾ| ಶಿವಣ್ಣ, ಬಳ್ಳಾರಿಯ ಪರಮೇಶ್ವರ ನಾಯ್ಕ ಮತ್ತು ಇನ್ನಿತರರು ಇದ್ದರು.

ಕಂದುರೋಗ ಮುಕ್ತವಾಗಿರುವಹಿಂಡಿನಿಂದಲೇ ಹಸುಗಳನ್ನು ಖರೀದಿಸಬೇಕು. ಹೊಸದಾಗಿ ಖರೀದಿಸಿದರಾಸುವನ್ನು ಕನಿಷ್ಠ  30 ದಿನಗಳವರೆಗೆ ಉಳಿದ ರಾಸುಗಳಿಂದ ದೂರವಿರಿಸಬೇಕು. ಕಂದುರೋಗ ಇರಬಹುದೆಂದು ಸಂಶಯಿಸಿದ ಸಂದರ್ಭಗಳಲ್ಲಿ ಪ್ರಯೋಗಾಲಯಕ್ಕೆ ಮಾದರಿ ಕಳುಹಿಸಿ ರೋಗದ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಅಥವಾ ರೋಗ ಪತ್ತೆಗೆ ಕಾಲಕಾಲಕ್ಕೆ  ಹಾಲಿನ ಪರೀಕ್ಷೆ ಮಾಡಿಸಬೇಕು. ಜಾನುವಾರುಗಳ ಪ್ಲಾಸ್ಟೀಕರಿಸದ ಹಾಲು ಮತ್ತು ಹಾಲಿನ ಉತ್ಪನ್ನಗಳ ಸೇವನೆಯಿಂದಮಾನವರಿಗೂಈ ರೋಗವು ಹರಡುವ ಸಾಧ್ಯತೆಇರುತ್ತದೆ.
ಡಾ| ಮಂಜುನಾಥ ಪಾಳೆಗಾರ, ಪಶು ಇಲಾಖೆ ನಿರ್ದೇಶಕ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.