ಕ್ಯಾಟ್ ಫಿಶ್ ಸಾಕಾಣಿಕೆ ಮಾಡಿದರೆ ಕ್ರಮ
Team Udayavani, Jul 26, 2022, 5:02 PM IST
ಬೀದರ: ಆಫ್ರಿಕನ್ ಕ್ಯಾಟ್ ಫಿಶ್ ಸಾಕಾಣಿಕೆ ಮಾಡುವುದನ್ನು ಸರ್ಕಾರ ನಿಷೇಧಿಸಿದ್ದರೂ ಜಿಲ್ಲೆಯಲ್ಲಿ ಕೆಲವರು ಕ್ಯಾಟ್ ಫಿಶ್ ಸಾಕುತ್ತಿರುವ ದೂರುಗಳು ಕಂಡುಬಂದಿದ್ದು, ಅಂಥವರ ವಿರುದ್ಧ ನಿರ್ದಾಕ್ಷಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನೀರಾವರಿ ನಿಗಮ, ಮೀನುಗಾರಿಕೆ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಕಾರಂಜಾ ಜಲಾಶಯದ ಮರಕಲ್ ಮತ್ತು ರಂಜೋಳಖೇಣಿ ಗ್ರಾಮಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಹತ್ತು ಟ್ಯಾಂಬ್ಗಳನ್ನು ನಿರ್ಮಿಸಿ ಆಫೀಕನ್ ಕ್ಯಾಟ್ ಫಿಶ್ ಸಾಕಾಣಿಕೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕಾರಂಜಾ ಜಲಾಶಯದ ಹಿನ್ನೀರನ್ನು ಬಳಸಿಕೊಂಡು ಸರ್ಕಾರಿ ಜಮೀನು ಅಥವಾ ಖಾಸಗಿ ಪಟ್ಟಾ ಜಮೀನುಗಳಲ್ಲಿ ಟ್ಯಾಂಬ್ಗಳನ್ನು ನಿರ್ಮಿಸಿದ್ದು, ಅಧಿಕಾರಿಗಳ ತಂಡ ಸಂಬಂಧಪಟ್ಟ ಜಮೀನಿನ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಸದರಿ ಟ್ಯಾಂಬ್ಗಳಲ್ಲಿರುವ ಕ್ಯಾಟ್ಫಿಶ್ ಗಳನ್ನು ಹಿಡಿದು ನಿಷ್ಕ್ರೀಯಗೊಳಿಸಬೇಕು ಹೇಳಿದರು.
ಟ್ಯಾಂಬ್ಗಳ ಹತ್ತಿರ ವಾಸಿಸುತ್ತಿರುವ ಕಾರ್ಮಿಕರನ್ನು ಸಂಪರ್ಕಿಸಿ ವರದಿ ಪಡೆದು ಪ್ರಕರಣ ದಾಖಲಿಸಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಪಂ ಸಿಇಒ ಶಿಲ್ಪಾ ಎಂ., ಸಹಾಯಕ ಆಯುಕ್ತ ಮಹಮ್ಮದ ನಯೀಮ್ ಮೋಮಿನ್, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ತಹಶೀಲ್ದಾರ್ ಅಣ್ಣಾರಾವ ಪಾಟೀಲ, ನೀರಾವರಿ ನಿಗಮದ ಇಇ ಸ್ವಾಮಿ, ಸಣ್ಣ ನೀರಾವರಿ ಇಲಾಖೆ ಇಇ ಸುರೇಶ ಮೇದಾ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಮಲ್ಲೇಶ ಬಡಿಗೇರ, ಡಿವೈಎಸ್ಪಿ ಸತೀಶ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು