ಪಠ್ಯದೊಂದಿಗೆ ಸಂಸ್ಕಾರ-ಸಂಸ್ಕೃತಿ ಅಳವಡಿಸಿಕೊಳ್ಳಿ


Team Udayavani, Dec 19, 2017, 1:25 PM IST

bid-3.jpg

ಬೀದರ: ವಿದ್ಯಾರ್ಥಿಗಳು ಜೀವನದಲ್ಲಿ ಪಠ್ಯದ ಜೊತೆಗೆ ಸಂಸ್ಕಾರ ಹಾಗೂ ಸಂಸ್ಕೃತಿ ಅಳವಡಿಸಿಕೊಂಡು ಹೆತ್ತವರು ಹಾಗೂ ವಿದ್ಯೆ ಕಲಿಸಿದ ಗುರುಗಳಿಗೆ ವಿಧೇಯತೆ ತೋರಬೇಕೆಂದು ಗೈಡ್‌ನ‌ ರಾಜ್ಯ ಮುಖ್ಯ ಆಯುಕ್ತೆ ಗೀತಾ ನಟರಾಜ್‌ ಹೇಳಿದರು. ನಗರದ ಕಿಶನಲಾಲ್‌ ಪಾಂಡೆ ಔಷಧ ಮಹಾವಿದ್ಯಾಲಯದಲ್ಲಿ ಭಾರತ ಸ್ಕೌಟ್ಸ್‌ ಮತ್ತು ಗೈಡ್‌ ಜಿಲ್ಲಾ ಘಟಕ ವಿಭಾಗ ಮಟ್ಟದ ರೇಂಜರ್‌ಗಳಿಗಾಗಿ ಆಯೋಜಿಸಿದ್ದ ಪ್ರೇರಣಾ ಶಿಬಿರ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಅವರು, ತಂದೆ, ತಾಯಿಗಳು ನಮ್ಮ ನಿಜವಾದ ದೈವಗಳು. ನಮ್ಮನ್ನು ಜಗತ್ತಿಗೆ ಧಾರೆ ಎರೆದ ಕಾರಣಕ್ಕಾಗಿಯೇ ಈ ಹಂತಕ್ಕೆ ತಲುಪಿದೆವು. ಪಾಲಕರ ಪರಿಶ್ರಮ ಅಳತೆಗೋಲಿನಿಂದ ಅಳೆಯಲಿಕ್ಕಾಗದು. ಅವರಿಗೆ ಗೌರವ ತೋರಿ, ಪ್ರಾಮಾಣಿಕ ಸೇವೆ ಮಾಡಿದಲ್ಲಿ ಜೀವನ ಸಾರ್ಥಕವಾಗುವುದು ಎಂದರು.

ವಿದ್ಯೆ ಮಾತ್ರವಲ್ಲ, ನೈಸರ್ಗಿಕ ಸಂಪತ್ತನ್ನು ಮಿತ ಬಳಕೆ ಮಾಡುವುದೂ ನಮ್ಮ ಧರ್ಮ. ಪೋಲಾಗುತ್ತಿರುವ ವಿದ್ಯುತ್‌,
ಹಾಳಾಗುತ್ತಿರುವ ನೀರು, ಮಲಿನವಾಗುತ್ತಿರುವ ಗಾಳಿಯ ಶುಚಿತ್ವ ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ದೇಶಭಕ್ತರ ಹಾಗೂ ಮಹಾನ್‌ ಸಾಧಕರ ಅನುಸರಣೆ ನಮ್ಮ ಜೀವನದಲ್ಲಿ ಹೊಸ ಪ್ರೇರಣೆ ಹಾಗೂ ಪ್ರೋತ್ಸಾಹ ನೀಡಬಲ್ಲದು ಎಂದರು.

ಭಾರತ ಸ್ಕೌಟ್ಸ್‌ ಮತ್ತು ಗೈಡ್‌ ಸಂಸ್ಥೆ ಸುಮಾರು 110 ವರ್ಷಗಳ ಇತಿಹಾಸ ಹೊಂದಿದೆ. 5 ಖಂಡಗಳಲ್ಲಿ ಈ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಸುಮಾರು 228 ಮಿಲಿಯನ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ಗಳು ಸೇವೆ ಸಲ್ಲಿಸುತ್ತಿರುವರು. ಮಕ್ಕಳಲ್ಲಿ ಸಾಮಾಜಿಕ, ಭೌತಿಕ, ಅಧ್ಯಾತ್ಮಿಕ ಹಾಗೂ ನೈತಿಕ ಮೌಲ್ಯಗಳನ್ನು ಬಿತ್ತಲು ಈ ಸಂಸ್ಥೆ ಸಹಕಾರಿಯಾಗಲಿದ್ದು, ಇಲ್ಲಿ ಜರುಗುವ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ತಾಳ್ಮೆ, ಸಹಕಾರ, ಸದ್ಗುಣ, ಸದಾಚಾರ, ಏಕತೆ, ಸೌಹಾರ್ದತೆ ಗಟ್ಟಿಗೊಳ್ಳಲು ಸಹಕರಿಸುತ್ತವೆ ಎಂದು
ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾ ಮುಖ್ಯ ಆಯುಕ್ತೆ ಗುರಮ್ಮ ಸಿದ್ದಾರೆಡ್ಡಿ ಮಾತನಾಡಿ, ಭಾರತ ಸ್ಕೌಟ್ಸ್‌,
ಗೈಡ್‌ನಿಂದ ಜರುಗುವ ಜಾಂಬುರಿಯಂತಹ ಕಾರ್ಯಕ್ರಮಗಳು, ಪ್ರೇರಣಾ ಶಿಬಿರಗಳು ಮಕ್ಕಳಲ್ಲಿ ಸಾಹಸ, ಧೈರ್ಯ, ಶೌರ್ಯ, ಶಕ್ತಿ, ಯುಕ್ತಿ, ಸಹೃದಯಿಗಳಾಗಿ ಹೊರಹೊಮ್ಮಲು ಪ್ರೇರೆಪಿಸುತ್ತವೆ ಎಂದರು.

ನಾವು ನಮ್ಮ ಪಾಲಕರು ಹಾಗೂ ಶಿಕ್ಷಕರನ್ನು ಮೊದಲು ಪ್ರೇರಕರಾಗಿ ಸ್ವೀಕರಿಸಬೇಕು. ಸಮಾಜ ಸುಧಾರಕರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ನಮಿಸಬೇಕು. ಸಮಾಜದಲ್ಲಿ ನೊಂದು, ಬೆಂದು ಬದುಕುವ ಶೋಷಿತರ ಬಗ್ಗೆ ಕಾಳಜಿ ವಹಿಸಿ, ಸಮಾಜ ಘಾತುಕ ಶಕ್ತಿಗಳ ವಿರುದ್ಧ ಬಡಿದೇಳಬೇಕು ಎಂದು ಕಿವಿ ಮಾತು ಹೇಳಿದರು.

ಎನ್‌.ಕೆ. ಛಾಯಾ, ಬಿ.ಡಿ. ಶಾಂತಾ, ರಾಮಲತಾ, ಮಂಜುಳಾ ಹಾಗೂ ಇತರರು ಮಾತನಾಡಿದರು. ಕೆ.ಎಸ್‌. ಚಳಕಾಪುರೆ,
ರಾಚಯ್ಯ, ಜಯಶೀಲಾ, ರಜನಿ ಗಂಧಾ, ಸೂಸಾನಾ ಸೇರಿದಂತೆ ಸ್ಕೌಟ್ಸ್‌ ಮತ್ತು ಗೈಡ್ಸ್‌ ತರಬೇತಿದಾರರು. ಕಲಬುರಗಿ, ರಾಯಚೂರು, ಯಾದಗಿರಿ, ಬೀದರ ಜಿಲ್ಲೆಗಳ ರೇಂಜರ್ ಹಾಗೂ ಗೈಡ್ಸ್‌ಗಳು ಇದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.