ಪರವಾನಗಿ ರಹಿತ ವಾಹನ ಚಾಲನೆ ಮಾಡದಿರಲು ಸಲಹೆ
Team Udayavani, Nov 3, 2017, 1:07 PM IST
ಬೀದರ: ಮನ್ನಳ್ಳಿ ಗ್ರಾಮದ ಪೊಲೀಸ್ ಠಾಣೆಯಲ್ಲಿ ರೈತ ಸಾರಥಿ ಯೋಜನೆಯಡಿ ಟ್ರ್ಯಾಕ್ಟರ್ ಚಾಲಕರಿಗಾಗಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಸಾರಿಗೆ ಇಲಾಖೆಯ ಅಧಿಕಾರಿ ಕೆ.ಟಿ. ವಿಶ್ವನಾಥ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್ಲಾ ರೈತರು ಚಾಲನಾ ಪತ್ರ ಪಡೆಯಬೇಕು. ಪರವಾನಗಿ ಇಲ್ಲದೇ ವಾಹನ ನಡೆಸುವುದು ಸರಿಯಲ್ಲ. ಅಪಘಾತಕ್ಕೆ ಒಳಗಾದಾಗ ಯಾವುದೇ ವಿಮೆ ಕಂಪನಿಯು ವಿಮಾ ಇನ್ಸೂರೆನ್ಸ್ ಕೊಡುವುದಿಲ್ಲ. ಹಾಗೂ ಚಾಲಕರಿಗೂ ಯಾವುದೇ ಸೌಲಭ್ಯಗಳು ದೊರಕುವುದಿಲ್ಲ. ಆದ್ದರಿಂದ ಎಲ್ಲರೂ ಪ್ರಾದೇಶಿಕ ಸಾರಿಗೆ ಇಲಾಖೆಗೆ ಭೇಟಿ ನೀಡಿ ಪರವಾನಿಗೆ ಪಡೆಯಬೇಕು ಎಂದರು. ಎಲ್ಲಾ ಹೋಬಳಿ ಮಟ್ಟದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗ ಪಡೆಯಬೇಕು ಎಂದು ಸಲಹೆ ನೀಡಿದರು.
ಪಿಎಸ್ಐ ಪ್ರಕಾಶ ಯಾತನೂರ ಮಾತನಾಡಿ, ಎಲ್ಲರೂ ತಪ್ಪದೇ ಕಡ್ಡಾಯವಾಗಿ ದ್ವಿಚಕ್ರ ವಾಹನದ ಪರವಾನಗಿ ಪಡೆದು, ಹೆಲ್ಮೇಟ್ ಧರಿಸಿ ತಮ್ಮ ಜೀವನ ಪಾಡಿಕೊಳ್ಳಬೇಕು. ದ್ವಿಚಕ್ರ ವಾಹನದ ಮೇಲೆ ಚಲಿಸುವಾಗ ಮೊಬೈಲ್, ಹೆಡ್ ಫೋನ್ ಬಳಸಬೇಡಿ. ಮದ್ಯಪಾನ, ಧೂಪಮಾನ ಮಾಡಬೇಡಿ ಎಂದು ಹೇಳಿದರು.
ವಾಹನ ಚಾಲಕರು ಪೊಲೀಸರಿಗೆ ದಂಡ ಕೊಡುವ ಬದಲು ಆ ಹಣದಲ್ಲಿ ಹೆಲ್ಮೇಟ್ ಹಾಗೂ ವಿಮೆ ಮಾಡಿಸಿಕೊಂಡು
ತಮ್ಮನ್ನು ತಾವು ಸಂರಕ್ಷಿಸಿಕೊಳ್ಳರ್ಬಕು ಎಂದು ಸಲಹೆ ನೀಡಿದರು. ಡ್ರೈವಿಂಗ್ ಸ್ಕೂಲ್ನ ಪ್ರಾಚಾರ್ಯ ಶಿವರಾಜ ಜಮಾದಾರ ಮಾತನಾಡಿದರು. ಎಎಸ್ಐಗಳಾದ ಶಿವರಾಜ ರಾಂಮಪುರೆ, ನಾಗನಾಥ ಕಮಠಾಣೆ, ರಮೇಶ ಜಮಾದಾರ, ಸಂಜುಕುಮಾರ, ಮಲ್ಲಿಕಾರ್ಜುನ ಸಿಂದೋಲ, ಉಮೇಶ ಪಾತರಪಳ್ಳಿ, ಮೌಲಾನ ಬರೂರ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು. ಪ್ರಾದೇಶಿಕ ಸಾರಿಗೆ ಇಲಾಖೆ, ಮನ್ನಳ್ಳಿ ಪೊಲೀಸ್ ಠಾಣೆ ಹಾಗೂ ಭಾಗ್ಯವಂತಿ ಮೋಟಾರ್ ಡ್ರೈವಿಂಗ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
MUST WATCH
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ