ದಾನದಿಂದಲೇ ಕೈಗಳಿಗೆ ಬೆಲೆ


Team Udayavani, May 22, 2022, 12:21 PM IST

4humanity

ಮುದ್ದೇಬಿಹಾಳ: ಮನುಷ್ಯನ ಕೈಗಳಿಗೆ ಬೆಲೆ ಬರುವುದು ಆತ ದಾನ, ಧರ್ಮ, ಮಾನವೀಯತೆಯ ನೆರವಿನ ಮನೋಭಾವ ಮೈಗೂಡಿಸಿಕೊಂಡಾಗಲೇ ಹೊರತು ಅನ್ಯ ಕಾರ್ಯ ಮಾಡಿದಾಗಲ್ಲ ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ| ಚನ್ನವೀರ ದೇವರು ನುಡಿದರು.

ಮುದ್ದೇಬಿಹಾಳ ತಾಲೂಕಿನ ಇಣಚಗಲ್‌ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದ ಗ್ರಾಮದೇವತೆಯ ಮೂರ್ತಿ ಪ್ರತಿಷ್ಠಾಪನೆ, ದೇವಾಲಯದ ಕಟ್ಟಡದ ಉದ್ಘಾಟನೆ ಹಾಗೂ ಧರ್ಮಸಭೆ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಮನುಷ್ಯ ಸದ್ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಕಣ್ಣುಗಳಿಗೆ ಬೆಲೆ ಬರುವುದು ಲಿಂಗವನ್ನು ಪೂಜಿಸು ವುದರಿಂದ, ಕಿವಿಗಳಿಗೆ ಬೆಲೆ ಬರುವುದು ಶಿವನ ನುಡಿಗಳನ್ನು ಆಲಿಸುವುದರಿಂದ ಅಂತೆಯೆ ಕೈಗಳಿಗೆ ಬೆಲೆ ಬರುವುದು ದಾನ ಧರ್ಮಗಳಿಂದ ಎನ್ನುವುದನ್ನು ನಾವೆಲ್ಲರೂ ತಿಳಿದುಕೊಳ್ಳಬೇಕು ಎಂದರು.

ಜಾಗತೀಕರಣದ ಪ್ರಭಾವದಿಂದಾಗಿ ಮಾನವೀಯ ಸಂಬಂಧಗಳು ಸ್ವಾರ್ಥಕ್ಕೆ ಸಿಲುಕಿ ನಶಿಸಿ ಹೋಗುತ್ತಿವೆ. ಮಾನವನ ಬದುಕು ಯಾಂತ್ರಿಕವಾಗಿ ಧರ್ಮದಿಂದ, ಸತ್‌ ಕರ್ಮಗಳಿಂದ ದೂರವಾಗುತ್ತಿದೆ. ಮನುಷ್ಯನಿಗೆ ಬೆಲೆ ಬರುವುದು ಮಾನವೀಯತೆಯ ಗುಣಗಳಿಂದ ಮಾತ್ರ ಎಂದರು.

ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿ, ನಾನು ಜಿಪಂ ಉಪಾಧ್ಯಕ್ಷನಾಗಿದ್ದ ಅವ ಧಿಯಲ್ಲಿ ದೇವಸ್ಥಾನಕ್ಕೆ 1.40 ಲಕ್ಷ ರೂ. ಅನುದಾನ ನೀಡಿದ್ದೇನೆ. ಈ ಊರಿನ ಜನ ನನಗೆ ಓಟು ಹಾಕಿ ಜಿಪಂ ಸದಸ್ಯನಾಗಿ ಗೆಲ್ಲಿಸಿದ್ದರಿಂದ ಅದಕ್ಕೆ ಪ್ರತಿರೂಪವಾಗಿ ಈ ಅನುದಾನ ನೀಡಿದ್ದೇನೆಯೇ ಹೊರತು ನಾ ಏನು ಹಾಗೇ ನೀಡಿಲ್ಲ. ನೀವು ಓಟು ಹಾಕಿದ್ರಿ, ನಾ ಅದಕ್ಕ ಅನುದಾನ ಕೊಟ್ಟೆ. ನಿಮ್ಮೂರಿನ ಯಾವುದೇ ಸೇವೆಗೆ ನಾನು ಸದಾ ಸಿದ್ಧ ಎಂದರು.

ಕುಂಟೋಜಿ ಗ್ರಾಪಂ ಅಧ್ಯಕ್ಷ ಶಿವಬಸು ಸಜ್ಜನ ಅಧ್ಯಕ್ಷತೆ ವಹಿಸಿದ್ದರು. ದಿ ಕರ್ನಾಟಕ ಕೋ ಆಪ್‌ ಬ್ಯಾಂಕ್‌ ಅಧ್ಯಕ್ಷ ಸತೀಶಕುಮಾರ ಓಸ್ವಾಲ, ಗ್ರಾಪಂ ಸದಸ್ಯ ಶಾಂತಪ್ಪ, ಪಿಡಿಒ ಆನಂದ ಹಿರೇಮಠ, ಗ್ರಾಮದ ಪ್ರಮುಖರು ಸೇರಿ ಹಲವರು ವೇದಿಕೆಯಲ್ಲಿದ್ದರು. ಕಾರ್ಯಕ್ರಮಕ್ಕೂ ಮುನ್ನ ದೇವಿಯ ಮೂರ್ತಿಯನ್ನು ಗಂಗಸ್ಥಳಕ್ಕೆ ಕರೆದೊಯ್ದು ಮೆರವಣಿಗೆ ಮೂಲಕ ಮರಳಿ ಕರೆ ತಂದು ಪ್ರತಿಷ್ಠಾಪಿಸಲಾಯಿತು. ಮುತ್ತೈದೆಯರು ದೇವತೆಗೆ ಉಡಿ ತುಂಬಿ ಭಕ್ತರು ಹರ್ಷ ಪಟ್ಟರು. ಮಹಿಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು. ಮೆರವಣಿಗೆ ಊರಿನಲ್ಲೆಲ್ಲ ಸಕಲ ವಾದ್ಯ ವೈಭವಗಳೊಂದಿಗೆ ಸಂಚರಿಸಿ ಸಾಕಷ್ಟು ಮೆರುಗು ತಂದುಕೊಟ್ಟಿತು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.