ವಿಮಾನಯಾನ ಆರಂಭ ಹುಸಿ ಭರವಸೆ


Team Udayavani, Mar 9, 2019, 10:58 AM IST

bid-1.jpg

ಬೀದರ: ದಶಕದಿಂದ ನನೆಗುದಿಗೆ ಬಿದ್ದಿರುವ ನಾಗರಿಕ ವಿಮಾನಯಾನ ಸೇವೆಯನ್ನು 2018-19ನೇ ಸಾಲಿನಲ್ಲಿ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದ ಜನ ಪ್ರತಿನಿಧಿಗಳ ಭರವಸೆ ಮತ್ತೆ ಹುಸಿಯಾಗಿದೆ.

2018-19ನೇ ಸಾಲಿನಲ್ಲಿ ಖಂಡಿತವಾಗಿ ವಿಮಾನ ಹಾರಾಟ ಶುರುವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಇತರೆ ಜನ ಪ್ರತಿನಿಧಿಗಳು ವಿವಿಧೆಡೆ ನಡೆದ ಕಾರ್ಯಕ್ರಮಗಳಲ್ಲಿ ದೊಡ್ಡ ಭರವಸೆಗಳನ್ನು ನೀಡಿ ಜನರಲ್ಲಿ ಹೊಸ ಕನಸು ಹುಟ್ಟಿಸಿದ್ದರು. ಆದರೆ, ನೀಡಿದ ಭರವಸೆಯಂತೆ ಜನಪ್ರತಿನಿಧಿಗಳು ಮಾತ್ರ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಜಿಲ್ಲೆಯ ಜನರದಾಗಿದೆ.
 
ಟರ್ಮಿನಲ್‌ ಕಟ್ಟಡ: ನಗರದ ಹೊರವಲಯದ ಚಿದ್ರಿ ಸಮೀಪದ ವಾಯು ನೆಲೆ ತರಬೇತಿ ಕೇಂದ್ರದಲ್ಲಿ ನಾಗರಿಕ ವಿಮಾನಯಾನ ಸೇವೆ ಆರಂಭಿಸುವ ನಿಟ್ಟಿನಲ್ಲಿ ಭೂಸ್ವಾಧೀನ ಇತರೆ ಕಾಮಗಾರಿಗಳಿಗೆ 2007ರಲ್ಲಿ ಸರ್ಕಾರ ಅನುಮೋದನೆ ನೀಡಿತ್ತು. ಅಂದಾಜು 3 ಕೋಟಿ ರೂ. ವೆಚ್ಚದಲ್ಲಿ ಪ್ರತ್ಯೇಕ ಟರ್ಮಿನಲ್‌ ಕಟ್ಟಡ ನಿರ್ಮಿಸಲಾಗಿತ್ತು.

ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದ 5.35 ಕೋಟಿಗೂ ಅಧಿಕ ಹಣ ಭರಿಸಲಾಗಿತ್ತು. ನಂತರ ಕಸ್ಟಮ್‌ ಅಧಿಕಾರಿಗಳ ಹಾಲ್‌, ಟ್ರಾಕ್‌ ಆಪರೇಟರ್‌ ಕೊಠಡಿ, ವಿಶ್ರಾಂತಿ ಕೋಣೆ ಹೊಂದಿರುವ ಟರ್ಮಿನಲ್‌ ನಿರ್ಮಿಸಲಾಗಿತ್ತು. ಆದರೆ, ಒಂದು ದಶಕದಲ್ಲಿಯೇ ಟರ್ಮಿನಲ್‌ ಕಟ್ಟಡ ಹಾಳಾಗಿದ್ದು, ಅನೇಕ ಅನುಮಾನಕ್ಕೆ ಕಾರಣವಾಗಿದೆ. ಬಳಕೆ ಮಾಡದ ಕಟ್ಟಡ ಹೇಗೆ ಹಾಳಾಯ್ತು ಎಂಬ ಪ್ರಶ್ನೆ ಜನರನ್ನು ಕಾಡುತ್ತಿದ್ದು, ಈ ಕುರಿತು ತನಿಖೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

ರಾಜಕೀಯಕ್ಕೆ ಸೀಮಿತ: ಪ್ರಸಕ್ತ ವರ್ಷದಲ್ಲಿ ವಿಮಾನ ಹಾರಾಟ ಶುರುವಾಗುತ್ತದೆ ಎಂದು ಹೇಳುತ್ತಿದ್ದ ಜಿಲ್ಲೆಯ ಜನ ಪ್ರತಿನಿಧಿಗಳು ರಾಜಕೀಯ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಚುನಾಯಿತ ಜನಪ್ರತಿನಿಧಿಗಳು ಜಿಲ್ಲೆಯ ಜನರಿಗೆ ಹಗಲ ಕನಸು ತೋರಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಿದ್ದರೆ ಜಿಲ್ಲೆಯಲ್ಲಿ ಕೂಡ ಸಾರ್ವಜನಿಕರಿಗೆ ವಿಮಾನ ಸೇವೆ ದೊರೆಯುತ್ತಿತ್ತು. ಜನ ಪ್ರತಿನಿಧಿಗಳು ಪ್ರಾಮಾಣಿಕತೆಯಿಂದ ಸರ್ಕಾರದ ಮೇಲೆ ಒತ್ತಡ ಹೇರಿದ್ದರೆ ಈ ವರೆಗೆ ತಾತ್ಕಾಲಿಕ ವಿಮಾನ ಸೇವೆ ಆರಂಭಗೊಳ್ಳುತ್ತಿತ್ತು. ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆಯಿಂದ ಒಂದು ದಶಕದಿಂದ ಯೋಜನೆ ನನೆಗುದಿಗೆ ಬಿದ್ದಿದೆ ಎಂಬುದು ಜನರ ಮಾತು.

ವಿಮಾನಯಾನಕ್ಕೆ ಬೇಕಿರುವ ಭೂಸ್ವಾ ಧೀನ ಪ್ರಕ್ರಿಯೆಗಳು ನಡೆದಿದೆ. ಜಿಎಂಆರ್‌ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳುವ ಪ್ರಕ್ರಿಯೆ ಸರ್ಕಾರ ಮಟ್ಟದಲ್ಲಿ ಇದೆ.  ಡಾ| ಎಚ್‌.ಆರ್‌. ಮಹಾದೇವ, ಜಿಲ್ಲಾಧಿಕಾರಿ ಬಳಕೆಯಾಗದ ಬೀದರ್‌ ನಾಗರಿಕ ವಿಮಾನಯಾನ ಟರ್ಮಿನಲ್‌ ಕಟ್ಟಡ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ 32 ಕೋಟಿ ಅನುದಾನ ಘೊಷಣೆ ಮಾಡಲಾಗಿದೆ. ವಿಮಾನಯಾನ ಶುರು ಮಾಡಬೇಕಾದರೆ ಹೆಚ್ಚು ಭೂಮಿ ಬೇಕು ಎಂದು ಜಿಎಂಆರ್‌ ಕಂಪನಿ ಜಿಲ್ಲಾಡಳಿತಕ್ಕೆ 8 ತಿಂಗಳ ಹಿಂದೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಸುತ್ತಲ್ಲಿನ 13.03 ಎಕರೆ ಭೂಮಿಯನ್ನು ಜಿಲ್ಲಾಡಳಿತ ಗುರುತಿಸಿದೆ. ಇದಕ್ಕಾಗಿ ಈಗಾಗಲೇ ಸರ್ಕಾರ 15 ಕೋಟಿ ಅನುದಾನ ಕೂಡ ಬಿಡುಗಡೆ ಮಾಡಿದೆ. ಮುಂದಿನ ಒಂದು ವಾರದಲ್ಲಿ ಭೂಮಿ ಖರೀದಿ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.
 ಬಲಭೀಮ ಕಾಂಬಳೆ, ಯೋಜನಾಧಿಕಾರಿ

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.