ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ
Team Udayavani, Dec 5, 2021, 10:46 AM IST
ಬೀದರ: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಇತ್ತೀಚೆಗೆ ಸಂವಿಧಾನದ ದಿನ ಮತ್ತು ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿವಿ ಕುಲಪತಿ ಪ್ರೊ| ಎಚ್.ಡಿ. ನಾರಾಯಣಸ್ವಾಮಿ ಅವರು ಸಂವಿಧಾನ ರಚಿಸಲು ಡಾ| ಬಿ.ಅರ್. ಅಂಬೇಡ್ಕರ್ ಅವರ ಪಾತ್ರ ಬಹು ಮುಖ್ಯವಾಗಿದೆ ಎಂದು ಹೇಳಿದರು.
ವಿವಿ ವ್ಯವಸ್ಥಾಪಕ ಮಂಡಳಿ ಸದಸ್ಯ ದೀಪಕ ದೋಡಯ್ನಾ ಮಾತನಾಡಿ, ಸಂವಿಧಾನದಲ್ಲಿ ಅಳವಡಿಸಿರುವ ಮೂಲಭೂತ ಹಕ್ಕುಗಳ ಕುರಿತು ವಿವರವಾಗಿ ತಿಳಿಸಿದರು.
ಇನ್ನೊರ್ವ ಸದಸ್ಯ ಭೋಜ್ಯಾ ನಾಯ್ಕ ಮಾತನಾಡಿ, ದೇಶಕ್ಕೆ ಸ್ವತಂತ್ರ ಬಂದು 75 ವರ್ಷಗಳು ಕಳೆದಿವೆ ಮತ್ತು ಪ್ರತಿಯೊಬ್ಬರು ಸಂವಿಧಾನದ ಪರಿಕಲ್ಪನೆಯಂತೆ ನಾವೆಲ್ಲರೂ ನಡೆಯಬೇಕು ಎಂದರು. ವಿವಿ ಅಧಿಕಾರಿಗಳಾದ ಡಾ| ಬಿ.ವಿ. ಶಿವಪ್ರಕಾಶ, ಡಾ| ಎನ್.ಎ. ಪಾಟೀಲ, ಡಾ| ಬಸವರಾಜ ಅವಟಿ, ಡಾ| ಎಂ.ಡಿ. ಸೂರಣಗಿ, ಸುಭಾಷ, ಹಾಗೂ ರಾಮಪ್ಪ ಕೋರವಾರ್ ಪಾಲ್ಗೊಂಡಿದ್ದರು. ಡೀನ್ ಡಾ| ದಿಲೀಪಕುಮಾರ ಡಿ. ಅಧ್ಯಕ್ಷತೆ ವಹಿಸಿದ್ದರು. ಡಾ| ಆರ್.ಜಿ ಬಿಜೂರಕರ್ ಸ್ವಾಗತಿಸಿದರು. ಡಾ| ಸಿ.ಎಂ. ಕೃಷ್ಣಮೂರ್ತಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ