ಅಕ್ಕಮಹಾದೇವಿ ಮಹಿಳಾ ಆತ್ಮ ಬಲ ಸಂಕೇತ


Team Udayavani, Mar 2, 2022, 11:27 AM IST

10akkamahadevi

ಬೀದರ: ಶರಣರ ಕಣ್ಮಣಿಯಾದ ಶ್ರೀ ಅಕ್ಕಮಹಾದೇವಿ ಜಾಗತಿಕ ಮಹಿಳಾ ಆತ್ಮ ಬಲದ ಸಂಕೇತವಾಗಿದ್ದು, ಅವರು ಹಾಕಿಕೊಟ್ಟ ಆಧ್ಯಾತ್ಮದ ದಾರಿಯಲ್ಲಿ ಕರುಣಾದೇವಿ ಮಾತಾರವರು ಮುನ್ನಡೆಯುದ್ದಾರೆ. ಅವರ ತಪೋನುಷ್ಠಾನದ ಬಲದಿಂದ ಇಂದು ನಮಗೆ ಶ್ರೀಶೈಲ ದೊರಕಿದೆ ಎಂದು ಹೇಳಲು ನನಗೆ ಅಭಿಮಾನ ಎನಿಸುತ್ತದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ನುಡಿದರು.

ಭಾಲ್ಕಿ ತಾಲೂಕಿನ ಧನ್ನೂರ ಗ್ರಾಮದಲ್ಲಿ ವೀರಶೈವ ರಕ್ಷಣಾ ವೇದಿಕೆ ಮತ್ತು ಶಾಂಭವಿ ಅಧ್ಯಾತ್ಮ ವೇದಿಕೆ ಆಶ್ರಯದಲ್ಲಿ ಶ್ರೀ ಕರುಣಾದೇವಿ ಮಾತಾರವರ 60ನೇ ಜನ್ಮ ದಿನದ ಅಂಗವಾಗಿ ಗುರು ವಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾತೆಯವರು ಶ್ರೀಶೈಲದಲ್ಲಿ ಅಕ್ಕಮಹಾದೇವಿಯವರ ಅದ್ಭುತವಾದ ಸ್ಮಾರಕವನ್ನು ನಿರ್ಮಾಣ ಮಾಡಿರುವುದು ಜಿಲ್ಲೆಯ ಜನತೆಯು ಅಭಿಮಾನ ಪಡುವಂತಾಗಿದೆ. ಶ್ರೀಶೈಲದ ನಿಯೋಜಿತ ದಾಸೋಹ ಭವನ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಯೋಗ ನೀಡುತ್ತೇನೆ ಎಂದರು.

ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, ತಮ್ಮ ಅನುಷ್ಠಾನದ ಮೂಲಕ ಲೋಕದ ಕಲ್ಯಾಣ ಮಾಡುತ್ತಿರುವ ಮಾತಾ ಅಧ್ಯಾತ್ಮ ಲೋಕದ ಗೌರವನ್ನು ಹೆಚ್ಚಿಸಿದ್ದಾರೆ. ಇವರ ಸಾಧನೆಯಿಂದ ನಮ್ಮ ಸಮಾಜಕ್ಕೆ ಕೀರ್ತಿ ಮತ್ತು ನಮ್ಮಗೆಲ್ಲ ಅಧ್ಯಾತ್ಮ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಹೇಳಿದರು.

ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ. ಸಿದ್ರಾಮ್‌ ಮಾತನಾಡಿ, ಸಾಧನಾ ಮಾರ್ಗ ಸರಳವಾಗಿರುವುದಿಲ್ಲ. ತಮ್ಮನ್ನು ತಾವು ಪರೀಕ್ಷೆಗೆ ಒಡ್ಡಿಕೊಳ್ಳಬೇಕಾಗುತ್ತದೆ. ಸಮಾಜದ ಒಳತಿಗಾಗಿ, ಲೋಕದ ಕಲ್ಯಾಣಕ್ಕಾಗಿ ಪೂಜ್ಯ ಕರುಣಾದೇವಿ ಮಾತೆಯವರು ತಮ್ಮನ್ನು ತಾವು ಕರ್ಪೂರದಂತೆ ಉರಿದು ಬೆಳಕನ್ನು ನೀಡುತ್ತಿದ್ದಾರೆ. ಅವರು ಭಾಲ್ಕಿಯ ಮತಕ್ಷೇತ್ರಕ್ಕೆ ಬೆಲೆ ಕಟ್ಟಿಲಾಗದ ಕೀರ್ತಿ ತಂದಿದ್ದಾರೆ ಎಂದರು.

ಶ್ರೀಶೈಲ ಟ್ರಸ್ಟ್‌ನ ಸದಸ್ಯೆ ಶಕುಂತಲಾ ತಂಬಾಕೆ ಮಾತನಾಡಿದರು. ಡಾ| ಓಂಕಾರ ಸ್ವಾಮಿ, ವೀರಶೆಟ್ಟಿ ಭಂಗೂರೆ, ಚಂದ್ರಶೇಖರ ಪಾಟೀಲ, ಮಹಾದೇವಪ್ಪ ಭಂಗೂರೆ, ಯೋಗೇಶ ಸೋಲಾಪುರ, ಪ್ರಫುಲ್‌ ಪಾಂಡೆ, ಕಾಶಿನಾಥ ಖಂಡ್ರೆ, ಬಾಬುರಾವ್‌ ಪೊಲೀಸ್‌ ಪಾಟೀಲ, ಗುಂಡೇರಾವ್‌ ಪಾಟೀಲ, ಅಕ್ಕಮಹಾದೇವಿ ಮಠಪತಿ, ಅನಿಲಕುಮಾರ ಪಾಟೀಲ ಇದ್ದರು. ಗುರುವಂದನಾ ಸೇವಾ ಸಮಿತಿ ಅಧ್ಯಕ್ಷ ಶ್ರೀಕಾಂತ ದಾನಿ ಸ್ವಾಗತಿಸಿದರು. ಬಸವರಾಜ ಹಾಲಹಳ್ಳಿ ಪ್ರಾಸ್ತಾವಿಕ ನುಡಿ ಹೇಳಿದರು. ದೀಪಕ ಠಮಕೆ ನಿರೂಪಿಸಿದರು. ಗುರುವಂದನೆ ಪ್ರಯುಕ್ತ ಮಾತಾಜಿ ಅವರನ್ನು ಖಾನಾಪೂರದಿಂದ ಬಸವೇಶ್ವರ ಕಲ್ಯಾಣ ಮಂಟಪದವರೆಗೆ ರಥದಲ್ಲಿ ಭವ್ಯ ಮೆರವಣಿಗೆ ಮೂಲಕ ಕರೆ ತರಲಾಯಿತು.

ರಾಜ್ಯ ಸರ್ಕಾರ ಅಕ್ಕ ಮಹಾದೇವಿ ಶರಣೆಯನ್ನು ಕಡೆಗಣಿಸಿದೆ. ಅಕ್ಕಳ ಜಯಂತಿಯನ್ನು ಸದರಿ ವರ್ಷದಿಂದ ಆಚರಿಸಬೇಕು. ಈವರೆಗೆ ಪ್ರಕಟಗೊಂಡ ಅಕ್ಕ ಮಹಾದೇವಿಯವರ ಲೇಖನಗಳ ಮಹಾ ಸಂಪುಟವನ್ನು ಹೊರತರುವ ಕಾರ್ಯಯೋಜನೆ ಹಾಕಿಕೊಂಡಿದ್ದೇನೆ. -ಡಾ| ರಾಜಶೇಖರ ಶಿವಾಚಾರ್ಯರು, ಹಿರೇಮಠ ಸಂಸ್ಥಾನ, ಬೇಮಳಖೇಡ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.