ಲಾಕ್‌ಡೌನ್‌: ಕೃಷಿ ಚಟುವಟಿಕೆಗೆ ಸಡಿಲಿಕೆ

ತಳಮಟ್ಟದಲ್ಲೇ ಸೋಂಕು ತಡೆಗೆ ಕಾರ್ಯಾಚರಣೆಇನ್ನೂ ತೆಗೆದಿಲ್ಲ ರಸ್ತೆ ಮೇಲಿನ ಮುಳ್ಳುಕಂಟಿ

Team Udayavani, Apr 30, 2020, 4:11 PM IST

30-April-21

ಆಳಂದ: ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಕೋವಿಡ್ ವಾರಿಯರ್ಗಳು ಪಾಲ್ಗೊಂಡಿದ್ದರು.

ಆಳಂದ: ರೈತರ ಉತ್ಪನ್ನ ಮಾರಲು, ಬೀಜ, ರಸಗೊಬ್ಬರ ಖರೀದಿ ಸೇರಿದಂತೆ ಲಾಕ್‌ಡೌನ್‌ ಸಮಯದಲ್ಲಿನ ಕೆಲ ನಿರ್ಬಂಧನೆಗಳಿಗೆ ವಿನಾಯಿತಿ ನೀಡಿದ್ದರಿಂದ ಪಟ್ಟಣದಲ್ಲಿ ಆಟೋ, ಕಾರು, ದ್ವಿಚಕ್ರವಾಹನಗಳ ಸಂಚಾರ ಕಂಡುಬರುತ್ತಿದೆ.

ಬಹುತೇಕ ರೈತರು, ಕೃಷಿ ಕೂಲಿ ಕಾರ್ಮಿಕರು ಖಾಸಗಿ ವಾಹನಗಳ ಮೂಲಕ ತಮ್ಮ ದಿನನಿತ್ಯದ ಕೆಲಸ-ಕಾರ್ಯಗಳಿಗಾಗಿ ಸಂಚರಿಸಿದರು. ತಾಲೂಕು ಆಡಳಿತ ಇದಕ್ಕೆ ಸಂಬಂಧಿಸಿದಂತೆ ಪಾಸ್‌ಗಳ ವ್ಯವಸ್ಥೆ ಮಾಡಿದೆ. ಕೆಲವು ಗ್ರಾಮಗಳಲ್ಲಿ ರಸ್ತೆಗಳಿಗೆ ಅಡ್ಡಲಾಗಿ ಮುಳ್ಳು ಕಂಟಿ ಒಡ್ಡಿದ್ದರಿಂದ ಅಗತ್ಯ ಕೆಲಸಗಳಿಗೆ ಸಂಚರಿಸುವವರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ. ಬ್ಯಾಂಕ್‌, ದಿನಸಿ ಖರೀದಿ, ಕೃಷಿ ಕಾರ್ಯಕ್ಕೆ ಸಂಬಂಧಿತ ಕೆಲಸಗಳಿಗೆ ಮುಕ್ತ ಅವಕಾಶ ಕೊಟ್ಟಿದ್ದರಿಂದ ಪಟ್ಟಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಬೆಳಗಿನ ಹೊತ್ತಿನಲ್ಲಿ ಮಾತ್ರ ಕಿರಾಣಿ ಅಂಗಡಿಗಳನ್ನು ತೆರೆಯಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಬೆಳಗಿನ ಜಾವ ಏಕಕಾಲಕ್ಕೆ ಹೊರಬರುತ್ತಿದ್ದಾರೆ. ಅಲ್ಲದೇ ಕೆಲವು ಕಡೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂರೇ, ಇನ್ನು ಕೆಲವು ಕಡೆಗಳಲ್ಲಿ ನಿಯಮ ಉಲ್ಲಂಘನೆಯಾಗುತ್ತಿದೆ. ಈ ನಡುವೆ ಸರ್ಕಾರ ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಹೊಸದೊಂದು ಕಾರ್ಯಚರಣೆಗೆ ಮುಂದಾಗಿದೆ. ಪ್ರತಿ ಮನೆ, ಮನೆಗೆ ಭೇಟಿ ನೀಡಿ 60 ವರ್ಷದ ಒಳಗಿನವರು ಮತ್ತು ನಂತರದವರ ಆರೋಗ್ಯ ಮಾಹಿತಿ ಕಲೆಹಾಕಲು ಮುಂದಾಗಿದೆ.

ಒಂದೊಮ್ಮೆ ಲಾಕ್‌ ಡೌನ್‌ನಲ್ಲಿ ಏರುಪೇರಾದರೂ ಜನರ ಮೇಲೆ ವೈರಸ್‌ನ ಯಾವುದೇ ದುಷ್ಪರಿಣಾಮ ಆಗದಂತೆ ನೋಡಿಕೊಳ್ಳಲು ಆರೋಗ್ಯದ ಮಾಹಿತಿ ಕಲೆಹಾಕಲು ಆರೋಗ್ಯ ತಂಡ ಮನೆ-ಮನೆಗೆ ಭೇಟಿ ನೀಡಲಿದೆ. ಈ ನಿಟ್ಟಿನಲ್ಲಿ ಬುಧವಾರ ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಕರೆದ ಆರೋಗ್ಯ ಮತ್ತು ಮತಗಟ್ಟೆ ಅಧಿಕಾರಿಗಳ ಸಭೆಯಲ್ಲಿ ತಹಶೀಲಾರ್‌ ದಯಾನಂದ
ಪಾಟೀಲ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ| ಜಿ. ಅಭಯಕುಮಾರ ಅವರು ಜಂಟಿಯಾಗಿ ಜನರ ಆರೋಗ್ಯ ತಪಾಸಣೆ ಕಾರ್ಯಾಚರಣೆಗೆ ಸೂಚಿಸಿದ್ದಾರೆ.

ವಾರ್ಡ್‌ಗಳ ಮತಗಟ್ಟೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಜಂಟಿಯಾಗಿ ಗುರುವಾರದಿಂದ ಪ್ರತಿ ಮನೆಗೂ ಭೇಟಿ ನೀಡಿ ಪ್ರತಿಯೊಬ್ಬ ಸದಸ್ಯರ ಆರೋಗ್ಯದ ಮಾಹಿತಿ ಕಲೆಹಾಕಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.