ಕೋವಿಡ್ ಪತ್ತೆ: ಅಗತ್ಯ ಕ್ರಮ ಕೈಗೊಳ್ಳಿ
Team Udayavani, Apr 23, 2020, 4:31 PM IST
ಆಳಂದ: ತಹಶೀಲ್ದಾರ್ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಶಾಸಕ ಸುಭಾಶ್ ಗುತ್ತೇದಾರ ಮಾತನಾಡಿದರು.
ಆಳಂದ: ಪಟ್ಟಣದ ಒಬ್ಬ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡು ಸೋಂಕು ಹರಡುವುದನ್ನು ತಡೆಯಲು ಮುಂದಾಗಬೇಕು ಎಂದು ಶಾಸಕ ಸುಭಾಶ್ ಗುತ್ತೇದಾರ ತಾಲೂಕಾಡಳಿತಕ್ಕೆ ಸೂಚಿಸಿದರು.
ತಹಶೀಲ್ದಾರ್ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸೋಂಕು ಪತ್ತೆಯಾಗಿರುವ ಪ್ರದೇಶದಲ್ಲಿ 1 ಕಿಮೀ ಅಂತರದಲ್ಲಿ ಸೀಲ್ಡೌನ್ ಕೈಗೊಳ್ಳಬೇಕು. ಜತೆಗೆ ಅದರ ಹಿಂದಿನ 1 ಕಿಮೀ ವ್ಯಾಪ್ತಿಯಲ್ಲಿ ಬಫರ್ಜೋನ್ ಅಳವಡಿಸಿಕೊಳ್ಳಲು ಹೇಳಿದರು. ಸೋಂಕು ಪತ್ತೆಯಾಗಿರುವ ವ್ಯಕ್ತಿಯು ವಾಸವಾಗಿದ್ದ ಇಡೀ ಪ್ರದೇಶದ ಜನರನ್ನು ತಪಾಸಣೆಗೆ ಒಳಪಡಿಸಿ, ಸ್ಕ್ರೀನಿಂಗ್ ಮಾಡಬೇಕು. ಆ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಸ್ಥಳಗಳಲ್ಲಿ ಪುರಸಭೆ ವತಿಯಿಂದ ನಿಷೇಧಿತ ಪ್ರದೇಶವೆಂದು ಫ್ಲೆಕ್ಸ್ ಹಾಕಲು ಆದೇಶಿಸಿದರು.
ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕರು ವಿನಾಕಾರಣ ಓಡಾಡಿದರೇ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ದಿನನಿತ್ಯದ ಉಪಜೀವನಕ್ಕೆ ಬೇಕಾಗುವ ದಿನಸಿ ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಯವರು ಕಡ್ಡಾಯವಾಗಿ ಸ್ಯಾನಿಟೈಜರ್ ಬಳಸಿ, ಮಾಸ್ಕ್ ಗ್ಲೌಸ್ ಧರಿಸಿಕೊಂಡು ನಿಗದಿತ ಸಮಯಕ್ಕೆ ವ್ಯಾಪಾರ ಮಾಡಬೇಕು. ಗ್ರಾಹಕರು ಕೂಡಾ ಮಾಸ್ಕ್ ಧರಿಸಿಕೊಂಡೇ ಪದಾರ್ಥ ಖರೀದಿಸಬೇಕು ಎಂದರು.
ತಹಶೀಲ್ದಾರ್ ದಯಾನಂದ ಪಾಟೀಲ, ಇಒ ಸಂಜಯರೆಡ್ಡಿ, ಸಿಪಿಐ ಶಿವಾನಂದ ಗಾಣಿಗೇರ್, ಜೆಸ್ಕಾಂ ಎಇಇ, ಪುರಸಭೆ ಮುಖ್ಯಾಧಿ ಕಾರಿ, ಶಿರಸ್ತೇದಾರ, ಉಪ ತಹಶೀಲ್ದಾರರು ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ