ಅಂಬೇಡ್ಕರ್ ವಿಶ್ವಕ್ಕೆ ಮಾದರಿ: ಶಿವಗುಂಡಪ್ಪ
Team Udayavani, Dec 7, 2018, 3:09 PM IST
ಭಾಲ್ಕಿ: ಡಾ|ಬಿ.ಆರ್.ಅಂಬೇಡ್ಕರ್ ಅವರು ವಿಶ್ವಕ್ಕೇ ಮಾದರಿಯಾದ ಸಂವಿಧಾನವನ್ನು ನಮಗೆ ನೀಡಿದ್ದಾರೆ. ಹೀಗಾಗಿ ಅವರು ವಿಶ್ವಕ್ಕೇ ಮಾದರಿಯಾದ ವ್ಯಕ್ತಿಯಾಗಿದ್ದಾರೆ. ಅವರ ತತ್ವ-ಸಿದ್ಧಾಂತಗಳನ್ನು ಯುವಜನತೆ ಮೈಗೂಡಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಗುಂಡಪ್ಪ ಎಚ್.ಎಸ್. ಹೇಳಿದರು.
ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ಗುರುವಾರ ಡಾ| ಬಿ.ಆರ್.ಅಂಬೇಡ್ಕರ್ ಅವರ 62ನೇ ಮಹಾ ಪರಿನಿರ್ವಾಣ ದಿನ ನಿಮಿತ್ತ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಮತ್ತು ಹೋರಾಟದ ಗುಣಗಳಿಂದ ಅವರು ದೀನ, ದಲಿತರನ್ನು ಉತ್ತಮ ದಾರಿಗೆ ತಂದಿದ್ದಾರೆ. ಇಂತಹ ಮಹಾನ್ ವ್ಯಕ್ತಿಗಳ ಆದರ್ಶ ನಮ್ಮೆಲ್ಲರಿಗೂ ಮಾದರಿಯಾಗಿವೆ ಎಂದು ಹೇಳಿದರು. ಜಿ.ಜೆ.ಶಿಕ್ಷಣ ಸಂಸ್ಥೆಯ ಬಿ.ಇಡಿ ಕಾಲೇಜಿನ ಉಪನ್ಯಾಸಕ ಮಿಸ್ಟರ್ ಸ್ವಾಮಿ ಮಾತನಾಡಿ, ಡಾ|ಬಿ.ಆರ್. ಅಂಬೇಡ್ಕರ್ ಅವರು ಬಡ ಕುಟುಂಬದಲ್ಲಿ ಹುಟ್ಟಿ, ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ವಿಶ್ವವೇ ಗುರುತಿಸುವಂತಾದರು. ನಮ್ಮ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದಲ್ಲಿ ಉತ್ತಮ ವ್ಯಕ್ತಿಗಳಾಗಿ ಹೊರ ಹೊಮ್ಮಬಹುದು ಎಂದು ಅಲಹೆ ನೀಡಿದರು. ಶಿಕ್ಷಕ ಯುವರಾಜ ಪಾಟೀಲ, ದೀಪಕ ಗಾಯಕವಾಡ, ಸುಭಾಷ ಜಲೆª ಪ್ರಶಾಂತ ಶ್ರೀಮಾಳಿ ಇದ್ದರು. ಅಮೃತ ಮುದ್ದಾ ಸ್ವಾಗತಿಸಿದರು. ಶಿವಕುಮಾರ ವಾಡಿಕರ ನಿರೂಪಿಸಿದರು. ಸಂತೋಷ ಕಾಳೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ