ಆಂಬ್ಯುಲೆನ್ಸ್‌ ಸೇವೆಯಿಂದ ಜನರಿಗೆ ಅನುಕೂಲ


Team Udayavani, Feb 25, 2022, 11:30 AM IST

10ambulance

ಬೀದರ: ನಗರದ ಓಲ್ಡ್‌ಸಿಟಿ ತಾಯಿ ಮತ್ತು ಮಕ್ಕಳ 100 ಹಾಸಿಗೆಗಳ ಆಸ್ಪತ್ರೆಯಲ್ಲಿ ನೂತನ ಆಂಬ್ಯುಲೆನ್ಸ್‌ ಸೇವೆಗೆ ಶಾಸಕ ರಹೀಂ ಖಾನ್‌ ಗುರುವಾರ ಚಾಲನೆ ನೀಡಿದರು.

ನಂತರ ಮಾತನಾಡುದ ಅವರು, ಆಂಬ್ಯುಲೆನ್ಸ್‌ ಸೇವೆಯಿಂದ ನಗರದ ಓಲ್ಡ್ ಸಿಟಿ ಹಾಗೂ ಸುತ್ತಮುತ್ತಲ ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ. ಆಸ್ಪತ್ರೆಯಲ್ಲಿ ಕೆಕೆಆರ್‌ಡಿಬಿ ಶಾಸಕರ 2 ಕೋಟಿ ರೂ. ಅನುದಾನದಡಿ ಆಂಬ್ಯುಲೆನ್ಸ್‌, ಆಮ್ಲಜನಕ ಸಹಿತ ಹಾಸಿಗೆ, ಎಕ್ಸ್‌ರೇ, ಡಿಜಿಟಲ್‌ ಎಕ್ಸ್‌ರೇ ಯಂತ್ರ ಸೇರಿದಂತೆ ವಿವಿಧ ವೈದ್ಯಕೀಯ ಉಪಕರಣ ಅಳವಡಿಸಲಾಗಿದೆ ಎಂದು ತಿಳಿಸಿದರು.

ನರ್ಸಿಂಗ್‌ ಸಿಬ್ಬಂದಿ ಆರು ತಿಂಗಳಿಂದ ವೇತನ ಸಿಗದಿರುವ ಬಗ್ಗೆ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ಸಂಬಂಧಪಟ್ಟ ಸಚಿವರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಮುಖಂಡರಾದ ಅಬ್ದುಲ್‌ ಖದೀರ್‌, ಇರ್ಷಾದ್‌ ಪೈಲ್ವಾನ್‌, ಶೌಕತ್‌ ಅಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ರತಿಕಾಂತ ಸ್ವಾಮಿ, ಆಸ್ಪತ್ರೆಯ ಡಾ| ಸೊಹೆಲ್‌ ಇದ್ದರು.

ವಿವಿಧೆಡೆ ಶಾಸಕ-ಎಂಎಲ್ಸಿ ಸಂಚಾರ

ಶಾಸಕ ರಹೀಂಖಾನ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ನಗರದ ವಿವಿಧೆಡೆ ಸಂಚರಿಸಿ ಸಾರ್ವಜನಿಕರ ಅಹವಾಲು ಆಲಿಸಿದರು. ಅಂಬೇಡ್ಕರ್‌ ವೃತ್ತ, ಕ್ರಾಂತಿ ಗಣೇಶ, ಶಹಾಗಂಜ್‌ ಕಮಾನ್‌, ಗವಾನ್‌ ಚೌಕ್‌, ಚೌಬಾರಾ, ಸರ್ಕಾರಿ ಪ್ರೌಢಶಾಲೆ, ಸಿದ್ದಿ ತಾಲೀಂ, ನಯಾ ಕಮಾನ್‌, ವಿದ್ಯಾನಗರ- ಚಿದ್ರಿ ರಸ್ತೆ, ಹಳೇ ಆದರ್ಶ ಕಾಲೋನಿ ರಸ್ತೆ, ಗುಂಪಾ ರಿಂಗ್‌ ರಸ್ತೆ ಸೇರಿದಂತೆ ಅನೇಕ ಪ್ರದೇಶಗಳಿಗೆ ಭೇಟಿ ನೀಡಿದರು.

ಹಾಳಾದ ರಸ್ತೆ ದುರಸ್ತಿಪಡಿಸಬೇಕು. ಚರಂಡಿಗಳು ತುಂಬಿಕೊಳ್ಳುತ್ತಿರುವ ಕಾರಣ ಬೃಹತ್‌ ಚರಂಡಿ ನಿರ್ಮಿಸಬೇಕು. ಕಾಲಕಾಲಕ್ಕೆ ಚರಂಡಿ ಶುಚಿಗೊಳಿಸಬೇಕು. ಕಾಲೋನಿಗಳಲ್ಲಿ ನೈರ್ಮಲ್ಯ ಕಾಪಾಡಬೇಕು ಎಂದು ಅನೇಕರು ಮನವಿ ಮಾಡಿದರು.

ನಗರದಲ್ಲಿ ಚರಂಡಿ ಸಮಸ್ಯೆ ಇರುವ ಕಡೆಗಳಲ್ಲಿ ನಗರೋತ್ಥಾನ ಯೋಜನೆ ಹಾಗೂ ಕೆಕೆಆರ್‌ಡಿಬಿ ಅನುದಾನದಲ್ಲಿ ಬೃಹತ್‌ ಚರಂಡಿ ನಿರ್ಮಿಸಲಾಗುವುದು. ಸಿಸಿ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ರಹೀಂ ಖಾನ್‌ ಭರವಸೆ ನೀಡಿದರು.

ಚರಂಡಿ ಸ್ವಚ್ಛತೆ, ನಗರ ನೈರ್ಮಲ್ಯಕ್ಕೆ ಕ್ರಮ ಕೈಗೊಳ್ಳಲು ಪೌರಾಯುಕ್ತರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಹಮ್ಮದ್‌ ಗೌಸ್‌, ಅಬ್ದುಲ್‌ ಅಜಿಜ್‌ ಮುನ್ನಾ, ಶೌಕತ್‌ ಅಲಿ, ಡಿಯುಡಿಸಿ ಪಿಡಿ, ಪೌರಾಯುಕ್ತ ಹಾಗೂ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.