ದೇಶಾಂಶ ಪತ್ನಿಗೆ ಅಮ್ಮ ಗೌರವ ಪ್ರದಾನ


Team Udayavani, Dec 22, 2020, 4:33 PM IST

ದೇಶಾಂಶ ಪತ್ನಿಗೆ ಅಮ್ಮ ಗೌರವ ಪ್ರದಾನ

ಬೀದರ: “ಬೀದರ ಶಬ್ದಕೋಶ’ದ ಮೂಲಕ ಕನ್ನಡವನ್ನು ಶ್ರೀಮಂತಗೊಳಿಸಿದ ನಾಡಿನ ಹಿರಿಯ ಲೇಖಕರಾಗಿದ್ದ ದೇಶಾಂಶಹುಡಗಿ ಅವರ ನಿಧನದ ಹಿನ್ನೆಲೆಯಲ್ಲಿ ನಗರದ ಚಿಟ್ಟಾವಾಡಿಯ “ಜಯಶಂಕರ’ ಮನೆಯಲ್ಲಿ “ಅಮ್ಮ ಗೌರವ’ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.

ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್‌ ಪ್ರತಿಷ್ಠಾನ ಕೊಡ ಮಾಡುವ “ಅಮ್ಮ ಪ್ರಶಸ್ತಿ-20’ಗೆ ಹಿರಿಯ ಸಾಹಿತಿದೇಶಾಂಶ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ನ.25ರಂದು ಅವರ ನಿಧನ ಹಿನ್ನೆಲೆಯಲ್ಲಿ ಬೀದರಿನ ಅವರ ಮನೆಯಲ್ಲಿ, ದೇಶಾಂಶ ಅವರ ಪತ್ನಿ ಮಹಾದೇವಮ್ಮ ಹುಡಗಿ ಅವರಿಗೆ ಅಮ್ಮ ಗೌರವ ಪ್ರದಾನ ಮಾಡಲಾಯಿತು. ಶಾಲು ಸತ್ಕಾರ, ಅಭಿನಂದನಾ ಪತ್ರ, ಫಲಪುಷ್ಪಗಳೊಂದಿಗೆ, ತೊಗರಿ ಬೇಳೆ ಮತ್ತು ಸೀರೆಯನ್ನು ಕಾಣಿಕೆಯಾಗಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚೆನ್ನಶೆಟ್ಟಿ, ಧರಿನಾಡಿಗೆ ಕೀರ್ತಿಯನ್ನು ತಂದ ದೇಶಾಂಶಹುಡಗಿ ಅವರನ್ನು ಹುಡುಕಿಕೊಂಡು ಬಂದ ಅಮ್ಮ ಪ್ರಶಸ್ತಿಯ ಗೌರವ ಪುರಸ್ಕಾರದ ಆಯ್ಕೆ ಸಮಿತಿಯು ಅತ್ಯುತ್ತಮರನ್ನು ಆಯ್ಕೆ  ಮಾಡಿದೆ. ಸಾಹಿತಿಗಳನ್ನು ಬೆಳೆಸುವಲ್ಲಿ ಅಹರ್ನಿಶಿ ಶ್ರಮಿಸಿದ ದೇಶಾಂಶ ಅವರ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ. ಕೆಂಪು ನೆಲದ ಈ ಧರಿನಾಡಿನಲ್ಲಿ ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ. ಬೀದರ ಎಂಬ ಹೆಸರು ಪ್ರಸ್ತಾಪವಾದಗಲೆಲ್ಲ ದೇಶಾಂಶ ಅವರ ಹೆಸರು ನೆನಪಿಗೆ ಬರುತ್ತದೆ ಎಂದು ಸ್ಮರಿಸಿದರು.

ಅಮ್ಮ ಪ್ರಶಸ್ತಿ ಸಂಸ್ಥಾಪಕ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ್‌ ಮಾತನಾಡಿ, ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮನೆಗೆ ತೆರಳಿ ಅಮ್ಮ ಪುರಸ್ಕಾರ ನೀಡಲಾಗುತ್ತಿದೆ. ಸಂಭ್ರಮ ಪಡಬೇಕಾದ ವ್ಯಕ್ತಿತ್ವದ ಅಗಲಿಕೆಯ ನಡುವೆಯೂ ದೇಶಾಂಶ ಅವರ ಬೆನ್ನ ಹಿಂದಿನ ಬೆಳಕಂತೆ ಜೀವನವನ್ನು ಸವೆಸಿದ ಪತ್ನಿ ಮಹಾದೇವಮ್ಮ ಅವರನ್ನು ಸತ್ಕರಿಸುವ ಮೂಲಕ ಆ ಹಿರಿಯ ಚೇತನಕ್ಕೆ ನೆನಪು ಮಾಡಿಕೊಂಡಂತಾಯಿತು ಎಂದು ಹೇಳಿದರು.

ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ, ಹಿರಿಯ ಲೇಖಕಿ ಜಗದೇವಿ ದುಬಲಗುಂಡಿ, ಸಾಹಿತಿಗಳಾದ ಪ್ರೇಮಾ ಹೂಗಾರ, ವಿಜಯಲಕ್ಷ್ಮೀ ಸುಜೀತಕುಮಾರ, ವಿಜಯ ಭಾಸ್ಕರರೆಡ್ಡಿ, ಮಹಾದೇವರೆಡ್ಡಿ, ಬಸವರಾಜ, ಕನ್ಯಾಕುಮಾರಿ ಅನೇಕರು ಇದ್ದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.