ದೇಶಾಂಶ ಪತ್ನಿಗೆ ಅಮ್ಮ ಗೌರವ ಪ್ರದಾನ


Team Udayavani, Dec 22, 2020, 4:33 PM IST

ದೇಶಾಂಶ ಪತ್ನಿಗೆ ಅಮ್ಮ ಗೌರವ ಪ್ರದಾನ

ಬೀದರ: “ಬೀದರ ಶಬ್ದಕೋಶ’ದ ಮೂಲಕ ಕನ್ನಡವನ್ನು ಶ್ರೀಮಂತಗೊಳಿಸಿದ ನಾಡಿನ ಹಿರಿಯ ಲೇಖಕರಾಗಿದ್ದ ದೇಶಾಂಶಹುಡಗಿ ಅವರ ನಿಧನದ ಹಿನ್ನೆಲೆಯಲ್ಲಿ ನಗರದ ಚಿಟ್ಟಾವಾಡಿಯ “ಜಯಶಂಕರ’ ಮನೆಯಲ್ಲಿ “ಅಮ್ಮ ಗೌರವ’ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.

ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್‌ ಪ್ರತಿಷ್ಠಾನ ಕೊಡ ಮಾಡುವ “ಅಮ್ಮ ಪ್ರಶಸ್ತಿ-20’ಗೆ ಹಿರಿಯ ಸಾಹಿತಿದೇಶಾಂಶ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ನ.25ರಂದು ಅವರ ನಿಧನ ಹಿನ್ನೆಲೆಯಲ್ಲಿ ಬೀದರಿನ ಅವರ ಮನೆಯಲ್ಲಿ, ದೇಶಾಂಶ ಅವರ ಪತ್ನಿ ಮಹಾದೇವಮ್ಮ ಹುಡಗಿ ಅವರಿಗೆ ಅಮ್ಮ ಗೌರವ ಪ್ರದಾನ ಮಾಡಲಾಯಿತು. ಶಾಲು ಸತ್ಕಾರ, ಅಭಿನಂದನಾ ಪತ್ರ, ಫಲಪುಷ್ಪಗಳೊಂದಿಗೆ, ತೊಗರಿ ಬೇಳೆ ಮತ್ತು ಸೀರೆಯನ್ನು ಕಾಣಿಕೆಯಾಗಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚೆನ್ನಶೆಟ್ಟಿ, ಧರಿನಾಡಿಗೆ ಕೀರ್ತಿಯನ್ನು ತಂದ ದೇಶಾಂಶಹುಡಗಿ ಅವರನ್ನು ಹುಡುಕಿಕೊಂಡು ಬಂದ ಅಮ್ಮ ಪ್ರಶಸ್ತಿಯ ಗೌರವ ಪುರಸ್ಕಾರದ ಆಯ್ಕೆ ಸಮಿತಿಯು ಅತ್ಯುತ್ತಮರನ್ನು ಆಯ್ಕೆ  ಮಾಡಿದೆ. ಸಾಹಿತಿಗಳನ್ನು ಬೆಳೆಸುವಲ್ಲಿ ಅಹರ್ನಿಶಿ ಶ್ರಮಿಸಿದ ದೇಶಾಂಶ ಅವರ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ. ಕೆಂಪು ನೆಲದ ಈ ಧರಿನಾಡಿನಲ್ಲಿ ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ. ಬೀದರ ಎಂಬ ಹೆಸರು ಪ್ರಸ್ತಾಪವಾದಗಲೆಲ್ಲ ದೇಶಾಂಶ ಅವರ ಹೆಸರು ನೆನಪಿಗೆ ಬರುತ್ತದೆ ಎಂದು ಸ್ಮರಿಸಿದರು.

ಅಮ್ಮ ಪ್ರಶಸ್ತಿ ಸಂಸ್ಥಾಪಕ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ್‌ ಮಾತನಾಡಿ, ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮನೆಗೆ ತೆರಳಿ ಅಮ್ಮ ಪುರಸ್ಕಾರ ನೀಡಲಾಗುತ್ತಿದೆ. ಸಂಭ್ರಮ ಪಡಬೇಕಾದ ವ್ಯಕ್ತಿತ್ವದ ಅಗಲಿಕೆಯ ನಡುವೆಯೂ ದೇಶಾಂಶ ಅವರ ಬೆನ್ನ ಹಿಂದಿನ ಬೆಳಕಂತೆ ಜೀವನವನ್ನು ಸವೆಸಿದ ಪತ್ನಿ ಮಹಾದೇವಮ್ಮ ಅವರನ್ನು ಸತ್ಕರಿಸುವ ಮೂಲಕ ಆ ಹಿರಿಯ ಚೇತನಕ್ಕೆ ನೆನಪು ಮಾಡಿಕೊಂಡಂತಾಯಿತು ಎಂದು ಹೇಳಿದರು.

ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ, ಹಿರಿಯ ಲೇಖಕಿ ಜಗದೇವಿ ದುಬಲಗುಂಡಿ, ಸಾಹಿತಿಗಳಾದ ಪ್ರೇಮಾ ಹೂಗಾರ, ವಿಜಯಲಕ್ಷ್ಮೀ ಸುಜೀತಕುಮಾರ, ವಿಜಯ ಭಾಸ್ಕರರೆಡ್ಡಿ, ಮಹಾದೇವರೆಡ್ಡಿ, ಬಸವರಾಜ, ಕನ್ಯಾಕುಮಾರಿ ಅನೇಕರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.