ಶರಣ ಕಮ್ಮಟ-ಅನುಭವ ಮಂಟಪ ಉತ್ಸವ

ಡಿಸಿ ರಾಮಚಂದ್ರನ್‌ ಆರ್‌. ಧ್ವಜಾರೋಹಣ,ವಿವಿಧ ಭಾಷೆಯ 20 ಗ್ರಂಥಗಳು ಲೋಕಾರ್ಪಣೆ

Team Udayavani, Nov 26, 2020, 4:43 PM IST

ಶರಣ ಕಮ್ಮಟ-ಅನುಭವ ಮಂಟಪ ಉತ್ಸವ

 ಬೀದರ: ಬಸವಕಲ್ಯಾಣದಲ್ಲಿ ನ.28 ಮತ್ತು 29ರಂದು ವಿಶ್ವ ಬಸವ ಧರ್ಮ ಟ್ರಸ್ಟ್‌ ಅನುಭವ ಮಂಟಪ ವತಿಯಿಂದ 41ನೇ ಶರಣ ಕಮ್ಮಟ-ಅನುಭವ ಮಂಟಪ ಉತ್ಸವ-2020, ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೋವಿಡ್ ವೈರಸ್‌ ಹಿನ್ನೆಲೆಯಲ್ಲಿ ಅಂತರ್ಜಾಲದ ಮೂಲಕ ನೇರ ಪ್ರವಾಸದ ವ್ಯವಸ್ಥೆ ಮಾಡಲಾಗಿದೆ ಎಂದು ಅನುಭವ ಮಂಟಪ ಅಧ್ಯಕ್ಷರಾದ ಡಾ| ಬಸವಲಿಂಗ ಪಟ್ಟದ್ದೇವರು ತಿಳಿಸಿದರು.

ಫೆಸ್‌ಬುಕ್‌ ಮತ್ತು ಯುಟ್ಯೂಬ್‌ ನೇರ ಪ್ರಸಾರದ ವ್ಯವಸ್ಥೆ ಇರಲಿದೆ. ಸಮಾರಂಭದಲ್ಲಿ ಸಾನ್ನಿಧ್ಯ ವಹಿಸುವ ಸ್ವಾಮಿಜಿಗಳು ಮತ್ತು ಮುಖ್ಯ ಅತಿಥಿಗಳು ವಿಡಿಯೋ ಸಂದೇಶದ ಮೂಲಕವೇ ತಮ್ಮ ಅನುಭಾವ ನೀಡಲಿದ್ದಾರೆ. 28ರಂದು ಬೆ.10ಕ್ಕೆ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಧ್ವಜಾರೋಹಣ ನೆರವೇರಿಸುವರು. ಬಿಕೆಡಿಬಿ ಆಯುಕ್ತ ಶರಣಬಸಪ್ಪ ಕೊಟ್ಟಪ್ಪಗೊಳ್‌ ವಚನ ಪಠಣ ಮತ್ತು ತಹಶೀಲ್ದಾರ್‌ ಸಾವಿತ್ರಿ ಸಲಗರ ಬಸವ ಗುರು ಪೂಜೆ ನಡೆಸಿಕೊಡುವರು ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬೆ.11ಕ್ಕೆ ಆರ್ಟ್‌ ಆಪ್‌ ಲಿವಿಂಗ್‌ನ ರವಿಶಂಕರ ಗುರೂಜಿ, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮಿಗಳ ಸಾನ್ನಿಧ್ಯದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದ್ದು, ಕೇಂದ್ರ ಕಲ್ಲಿದ್ದಲು ಮತ್ತುಗಣಿ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡುವರು. ಡಾ| ಬಸವಲಿಂಗ ಪಟ್ಟದ್ದೇವರು ಆಶಯ ನುಡಿ ಹೇಳುವರು. ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸುವರು. ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಸಚಿವ ಜಗದೀಶ ಶೆಟ್ಟರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಎಂಎಲ್‌ಸಿ ಬಸವರಾಜ ಹೊರಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಅಧ್ಯಕ್ಷ ಅನೀಲ ರಗಟೆ ಗ್ರಂಥ ಲೋಕಾರ್ಪಣೆ ಮಾಡುವರು.

ಸಾಯಂಕಾಲ 6 ಕ್ಕೆ ಅನುಭವ ಮಂಟಪ: ಅಂದು-ಇಂದು ಮತ್ತು ಎಂದೆಂದೂ ಪ್ರಥಮ ಗೋಷ್ಠಿ ನಡೆಯಲಿದೆ. 29ರಂದು ಬೆ.11ಕ್ಕೆ ಕಲ್ಯಾಣ ರಾಜ್ಯ-ಶರಣ ಪರಿಕಲ್ಪನೆ ಕುರಿತು ಎರಡನೇ ಗೋಷ್ಠಿ ನಡೆಯಲಿದೆ. ಸಾಯಂಕಾಲ 6ಕ್ಕೆ ಸಮಾರೋಪ ಸಮಾರಂಭ ಜರುಗಲಿದ್ದು, ಗದಗ ತೊಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು, ಭಾಲ್ಕಿಯ ಗುರುಬಸವ ಪಟ್ಟದ್ದೇವರು, ಡಾ| ಗಂಗಾಂಬಿಕಾ ಅಕ್ಕ ಸಾನಿಧ್ಯ, ಸಿಎಂ ಬಿ.ಎಸ್‌ ಯಡಿಯೂರಪ್ಪ ಅಧ್ಯಕ್ಷತೆ ವಹಿಸುವರು. ಉತ್ಸವದಲ್ಲಿ 5 ಕನ್ನಡ ಗ್ರಂಥ, 14 ಮರಾಠಿ ಮತ್ತು 1 ತೆಲಗು ಗ್ರಂಥಗಳು ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಭಾಲ್ಕಿಯ ಗುರುಬಸವ ಪಟ್ಟದ್ದೇವರು, ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಬಸವರಾಜ ಧನ್ನೂರ ಮತ್ತು ಜಯರಾಜ ಖಂಡ್ರೆ ಸುದ್ದಿಗೋಷ್ಠಿದ್ದರು.

ಚುನಾವಣೆ ಮುನ್ನ “ಅನುಭವ ಮಂಟಪ’ಕ್ಕೆ ಶಂಕು :  ಬಸವನುಯಾಯಿಗಳ ಕನಸಾಗಿರುವ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಉಪ ಚುನಾವಣೆ ಮೊದಲೇ ಸರ್ಕಾರದಿಂದ ಶಂಕು ಸ್ಥಾಪನೆ ನೆರವೇರಿಸುವ ಸಾಧ್ಯತೆ ಇದೆ ಎಂದು ಅನುಭವ ಮಂಟಪದ ಅಧ್ಯಕ್ಷರಾದ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ಬಜೆಟ್‌ನಲ್ಲಿ 600 ಕೋಟಿ ರೂ. ಮೀಸಲಿಟ್ಟು, 100 ಕೋಟಿ ರೂ. ಬಿಡುಗಡೆ ಮಾಡಿದೆ. ಶಂಕು ಸ್ಥಾಪನೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.