ದೇಶದ ಉತ್ತುಂಗಕ್ಕೇರಲಿ ಪಿಡಿಎ ಕಾಲೇಜು
Team Udayavani, Mar 31, 2019, 3:01 PM IST
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ (ಪಿಡಿಎ) ತಾಂತ್ರಿಕ ಮಹಾವಿದ್ಯಾಲಯವು ಗುಣಮಟ್ಟದ ಕಲಿಕೆ ಮತ್ತು ವಿದ್ಯಾರ್ಥಿಗಳನ್ನು ಭವಿಷ್ಯದ ಶ್ರೇಷ್ಠ ಉದ್ಯಮಿಗಳನ್ನಾಗಿ ರೂಪಿಸುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಆಗಬೇಕೆಂದು ಸಂಸ್ಥೆಯ ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ ಆಶಯ ವ್ಯಕ್ತಪಡಿಸಿದರು.
ನಗರದ ಪಿಡಿಎ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿರುವ ಅಂತರ್ ಕಾಲೇಜು ತಾಂತ್ರಿಕ-ಸಾಂಸ್ಕೃತಿಕ “ನಿರ್ಮಾಣ್-2019′ ಉತ್ಸವಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಮಹಾವಿದ್ಯಾಲಯದಲ್ಲಿ ಪ್ರತಿಯೊಂದು ಹಂತದಲ್ಲಿ ಕಲಿಕೆಗೆ ಪೂರಕವಾದ ಉತ್ತಮ ವಾತಾವರಣ ನಿರ್ಮಿಸಲಾಗಿದೆ. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸ್ನೇಹಪೂರ್ವಕವಾಗಿ ಬೆರೆತು ಮಹಾವಿದ್ಯಾಲಯವನ್ನು ದೇಶದ ಉತ್ತುಂಗಕ್ಕೆ ಕೊಂಡೊಯಬೇಕೆಂದು ಕರೆ ನೀಡಿದರು.
ಮಹಾವಿದ್ಯಾಲಯದಲ್ಲಿ ಗುಣಮಟ್ಟದ ಅಧ್ಯಯನಕ್ಕೆ ಒತ್ತು ನೀಡುವುದರೊಂದಿಗೆ ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಹೆಚ್ಚಿನ ಸಮಯ ತೊಡಗಿಸಿಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ “ನಿರ್ಮಾಣ್’ಉತ್ಸವ ವಿದ್ಯಾರ್ಥಿಗಳಿಗೆ ಒಳ್ಳೆಯ ವೇದಿಕೆಯಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೂ ಉತ್ಸವ ಸಾಕ್ಷಿಯಾಗಲಿದೆ ಎಂದರು.
ಪ್ರತಿಷ್ಠಿತ ಸಂಸ್ಥೆಗಳೊಂದಿಗೆ ಒಪ್ಪಂದ: ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇನ್ಫೋಸಿಸ್ ಸೇರಿದಂತೆ ಪ್ರತಿಷ್ಠಿತ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಪ್ರಸಕ್ತ ವರ್ಷ ವಿವಿಧ ಕಂಪನಿಗಳು ನಡೆಸಿದ ಸಂದರ್ಶನದಲ್ಲಿ ಈಗಾಗಲೇ 130 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಸಂಸ್ಥೆಯ ಉಪಾಧ್ಯಕ್ಷ ಡಾ| ಶಿವಾನಂದ ದೇವರಮನಿ, ಕಾರ್ಯದರ್ಶಿ ನಾಗೇಂದ್ರ ಮಂಠಾಳೆ, ಜಂಟಿ ಕಾರ್ಯದರ್ಶಿ ಗಂಗಾಧರ ಎಲಿ, ಸದಸ್ಯರಾದ ವಿಜಯಕುಮಾರ ದೇಶಮುಖ, ನಿತಿನ್ ಜವಳಿ, ಸತೀಶಚಂದ್ರ ಹಡಗಲಿಮಠ, ಶಿವಶರಣಪ್ಪ ನಿಗ್ಗುಡಗಿ, ಜಗದೀಶ ಮಾಲು, ಅರುಣಕುಮಾರ ಎಂ ಪಾಟೀಲ, ಕಾಲೇಜಿನ ಪ್ರಾಂಶುಪಾಲ ಡಾ| ಎಸ್.ಎಸ್.ಹೆಬ್ಟಾಳ್, ಉತ್ಸವದ ಸಂಚಾಲಕ ಡಾ| ಮಹಾದೇವಪ್ಪ ಗಾದಗೆ, ಡಾ| ಸುಜಾತಾ ತೇರದಾಳ, ದಿನೇಶ್ ಪವಾರ, ನಿತಿನ್ ಪಾಟೀಲ, ಗುರುರಾಜ ಸಾಹುಕಾರ, ಡಾ| ಬಾಬುರಾವ್ ಶೇರಿಕಾರ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್