ಭೂ ಪರಿಹಾರ ಮೊತ್ತ ಹೆಚ್ಚಿಸಲು ಆಗ್ರಹಿಸಿ ಮನವಿ


Team Udayavani, Nov 25, 2021, 1:42 PM IST

20appeal

ರಾಯಚೂರು: ವಾಡಿ-ಗದಗ ರೈಲು ಮಾರ್ಗ ನಿರ್ಮಾಣಕ್ಕೆ ಲಿಂಗಸುಗೂರು ತಾಲೂಕಿನ ಕರಡಕಲ್‌ ಗ್ರಾಮದ ಭೂ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದ್ದು, ಪರಿಹಾರ ಮೊತ್ತ ಅತ್ಯಂತ ಕಡಿಮೆ ನಿಗದಿ ಮಾಡಿರುವುದನ್ನು ಖಂಡಿಸಿ ಭೂ ಸಂತ್ರಸ್ತರು ಮಂಗಳವಾರ ಪ್ರತಿಭಟಿಸಿದರು.

ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. 2018ರಲ್ಲಿ ಭೂ ಸ್ವಾಧೀನ ಕುರಿತು ರೈತರಿಗೆ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನೋಟಿಸ್‌ ನೀಡಲಾಗಿತ್ತು. ರೈತರು 30 ದಿನದೊಳಗೆ ಆಕ್ಷೇಪಣೆ ಸಲ್ಲಿಸಿದ್ದರು. 2020ರ ನ.27ರಂದು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ದರ ನಿಗದಿ ಕುರಿತು ಸಭೆ ನಡೆಸಲಾಗಿತ್ತು. ಆಗ ರೈತರು ಎಕರೆಗೆ ಒಂದು ಕೋಟಿ ರೂ. ನೀಡುವಂತೆ ಒತ್ತಾಯಿಸಿದ್ದರು. ಆದರೆ, ಡಿಸಿಯವರು ಎಕರೆಗೆ 36 ಲಕ್ಷ ರೂ. ಸಿಗಬಹುದು. ಮತ್ತೊಮ್ಮೆ ಸಭೆ ಕರೆದು ಅಂತಿಮ ದರ ನಿಗದಿಪಡಿಸುವುದಾಗಿ ತಿಳಿಸಿದ್ದರು ಎಂದು ವಿವರಿಸಿದರು.

ಆದರೆ, 2021ರ ಆ.28ರಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಎಕರೆಗೆ ಕೇವಲ 10.50 ಲಕ್ಷ ರೂ. ದರ ನಿಗದಿ ಮಾಡಲಾಗಿದೆ. ಇದು ಏಕಪಕ್ಷೀಯ ನಿರ್ಧಾರವಾಗಿದ್ದು, ರೈತರಿಗೆ ಸಾಕಷ್ಟು ಅನ್ಯಾಯವಾಗಲಿದೆ. ಕರಡಕಲ್‌ ಗ್ರಾಮವು ಲಿಂಗಸುಗೂರು ಪಟ್ಟಣಕ್ಕೆ ಹೊಂದಿಕೊಂಡಿದೆ. 30/40 ಅಳತೆಯ ನಿವೇಶನವೇ 15 ಲಕ್ಷ ರೂ. ಗಿಂತ ಹೆಚ್ಚಾಗಿದೆ. ಎಕರೆಗೆ ಏನಿಲ್ಲವೆಂದರೂ 60-70 ಲಕ್ಷ ರೂ. ಬೆಲೆ ಇದೆ. ಹೀಗಾಗಿ ಸರ್ಕಾರ ನಿಗದಿ ಮಾಡಿರುವ ಬೆಲೆ ಅವೈಜ್ಞಾನಿಕವಾಗಿದ್ದು, ರೈತರು ಭೂಮಿ ನೀಡಿದರೆ ಬೀದಿಗೆ ಬರಬೇಕಾಗುತ್ತದೆ. ಸರ್ಕಾರ ಕೂಡಲೇ ಬೆಲೆಯನ್ನು ಮರು ನಿಗದಿ ಮಾಡದಿದ್ದರೆ ನಾವು ಯೋಜನೆಗೆ ಕಿಂಚಿತ್ತೂ ಭೂಮಿ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಮುಖಂಡರು ಶಿವಾನಂದ ಐದನಾಳ, ಗುಂಡಯ್ಯ ಸ್ವಾಮಿ, ಸತ್ಯನಾರಾಯಣ, ಸುಂದರ್‌, ಗುಂಡಪ್ಪ ಸಜ್ಜನ್‌, ಭೂ ಸಂತ್ರಸ್ತರಾದ ಶಂಕ್ರಪ್ಪ, ಗುರುಸಿದ್ದಪ್ಪ, ಅಮರೇಶ, ಪರಸಪ್ಪ, ಚನ್ನಬಸವ, ವೆಂಕಪ್ಪ, ಅಯ್ಯಪ್ಪ, ನಾಗರಾಜ್‌, ರಂಗನಾಥ ಸೇರಿದಂತೆ ಅನೇಕ ಭೂ ಸಂತ್ರಸ್ತರು ಇದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.