ಪುರಸಭೆಯ ಅವ್ಯವಹಾರ ತನಿಖೆಗೆ ಆಗ್ರಹಿಸಿ ಮನವಿ
Team Udayavani, Apr 1, 2022, 2:43 PM IST
ಭಾಲ್ಕಿ: ಪುರಸಭೆ ಕಚೇರಿಯಲ್ಲಿ ಸಮರ್ಪಕ ಸಭೆ ನಡೆಯದಿರುವುದು, ನೂತನ ಕಟ್ಟಡದಲ್ಲಿ ಶಿಷ್ಟಾಚಾರ ಪಾಲಿಸದೇ ಕಚೇರಿ ಪ್ರವೇಶ ಮಾಡಿರುವುದು ಸೇರಿ ಇಲ್ಲಿನ ವ್ಯಾಪ್ತಿಯಲ್ಲಿ ಜಾರಿಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪುರಸಭೆ ಸದಸ್ಯರು ಪಟ್ಟಣದಲ್ಲಿ ಬುಧವಾರ ಧರಣಿ ಸತ್ಯಾಗ್ರಹ ನಡೆಸಿದರು.
ಜಿಲ್ಲಾಧಿಕಾರಿಗಳು ಸಭೆ ನಡೆಸಲಿರುವ ವಿಷಯ ತಿಳಿದ ಪುರಸಭೆ ಸದಸ್ಯರಾದ ರೌಫ್ ಪಟೇಲ್ ಮತ್ತು ಪಾಂಡುರಂಗ ಕನಸೆ ಅವರು ಪಟ್ಟಣದ ಪುರಸಭೆ ಕಚೇರಿ ಎದುರು ಟೆಂಟ್ ಹಾಕಿ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ಇಟ್ಟು ಧರಣಿ ಆರಂಭಿಸಿದರು.
ಎಂಟು ತಿಂಗಳು ಕಳೆದರೂ ಇದುವರೆಗೂ ಸಾಮಾನ್ಯ ಸಭೆ ನಡುವಳಿಕೆ ಕೊಟ್ಟಿಲ್ಲ. ನಡುವಳಿ ಕೆಯಲ್ಲಿ ಚರ್ಚಿಸಲಾದ ವಿಷಯಗಳು ಕಾರ್ಯರೂಪಕ್ಕೆ ಬಂದಿಲ್ಲ. ಜುಲೈ 22, 2021ರ ನಂತರ ಒಂದು ಸಾಮಾನ್ಯ ಸಭೆ ಜರುಗಿಲ್ಲ. ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಾಣಗೊಂಡ ಸುಮಾರು 400 ಮನೆಗಳು ಅರ್ಹರಿಗೆ ಮುಟ್ಟುತ್ತಿಲ್ಲ. ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳು, 24/7 ಕುಡಿವ ನೀರಿನ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿವೆ. ವಾಜಪೇಯಿ ವಸತಿ ಯೋಜನೆಯಡಿ ಮಂಜೂರಾದ 57 ಮನೆಗಳ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆಪಾದಿಸಿದರು.
ಸರಕಾರಿ ಕಟ್ಟಡಗಳ ನಿರ್ಮಾಣ ಸಂದರ್ಭದಲ್ಲಿ ಹಳೇ ಕಟ್ಟಡದ ಕಲ್ಲು, ಮಣ್ಣು ದುರ್ಬಳಕೆ ಮಾಡಿಕೊಳ್ಳಲಾಗಿದೆ. 2019-20, 21-22ನೇ ಸಾಲಿನ ವರೆಗೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಪುರಸಭೆ ಬಂದಿರುವ ಯೋಜನೆಗಳ ಮಾಹಿತಿ ಕೂಡ ಸಮರ್ಪಕವಾಗಿ ಕೊಡುತ್ತಿಲ್ಲ. ಬೀದಿದೀಪ ಅಳವಡಿಕೆಯಲ್ಲಿ ಅವ್ಯವಹಾರ ನಡೆದಿದ್ದು, 2015-16ನೇ ಸಾಲಿನ 14ನೇ ಹಣಕಾಸು ಯೋಜನೆಯಡಿ ಮಂಜೂರಾದ ಕಾಮಗಾರಿಗಳ ವಿವರ ನೀಡುತ್ತಿಲ್ಲ. ಇದುವರೆಗೂ ಸ್ಥಾಯಿ ಸಮಿತಿ ರಚಿಸಿಲ್ಲ ಎಂದು ಆರೋಪಿಸಿ ಧರಣಿ ನಡೆಸಿದ್ದರು.
ಧರಣಿ ವಿಷಯ ತಿಳಿದ ಜಿಲ್ಲಾಧಿಕಾರಿಗಳು ಕೊನೆಯ ಹಂತದಲ್ಲಿ ಪುರಸಭೆಯಲ್ಲಿ ಸಭೆ ನಡೆಸುವುದನ್ನು ಮೊಟಕುಗೊಳಿಸಿದರು. ಬಳಿಕ ಬಸವಕಲ್ಯಾಣ ಸಹಾಯಕ ಆಯುಕ್ತರು ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರು ಧರಣಿ ಹಿಂಪಡೆದರು.
ಪುರಸಭೆ ಸದಸ್ಯರಾದ ಪ್ರವೀಣ ಸವರೆ, ಭಾಗ್ಯಶ್ರೀ ಸಂತೋಷ, ಅಂಬಿಕಾ ಕುಂದೆ, ಬಿಬಿಶೇಣ ಬಿರಾದಾರ್ ಮನವಿ ಪತ್ರಕ್ಕೆ ಸಹಿ ಹಾಕಿದರು. ಗೋವಿಂದರಾವ ಬಿರಾದಾರ್, ಸಂಗಮೇಶ ಭೂರೆ, ವಿನೋದ ಕಾರಾಮುಂಗೆ, ಮಲ್ಲಿಕಾರ್ಜುನ ನೇಳಗೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ
‘ವೀಲ್ ಚೇರ್ ರೋಮಿಯೋ’ ಚಿತ್ರ ವಿಮರ್ಶೆ; ವೀಲ್ಚೇರ್ನಿಂದ ಮೇಲೇಳುವ ಸಿನಿಮಾವಿದು…
ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್ ಸಿಬ್ಬಂದಿ