ಬಡವರಿಗೆ ಆಶಾಕಿರಣ ಸ್ವಸಹಾಯ ಗುಂಪು: ಆದಿರಾಜು
Team Udayavani, Mar 23, 2018, 4:20 PM IST
ಬೀದರ: ಸ್ವ ಸಹಾಯ ಗುಂಪುಗಳು ತಮ್ಮ ಬದ್ಧತೆ, ಶ್ರದ್ಧೆ ಮತ್ತು ಪ್ರಾಮಾಣಿಕತೆಗಳಿಂದ ಬ್ಯಾಂಕ್ ಗಳ ವಿಶ್ವಾಸಕ್ಕೆ ಪಾತ್ರವಾಗಿದ್ದು ಯಾವುದೇ ಆಧಾರವಿಲ್ಲದೇ ಸಾಲ ಪಡೆಯುವ ಅರ್ಹತೆ ಗಳಿಸಿಕೊಂಡಿವೆ ಎಂದು ಭಾರತೀಯ ಸ್ಟೇಟ್ ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕ ಶೇಷಗಿರಿ ಆದಿರಾಜು ಹೇಳಿದರು.
ನಗರದ ಸಹಾರ್ದ ತರಬೇತಿ ಕೇಂದ್ರದಲ್ಲಿ ನಬಾರ್ಡ್ ಅಡಿಯಲ್ಲಿ ಆಯೋಜಿಸಿರುವ ಎರಡು ವಾರಗಳ ರೆಕ್ಸಿನ್ ಬ್ಯಾಗ್ ತಯಾರಿಕಾ ತರಬೇತಿ ಉದ್ಘಾಟಿಸಿ ಮಾತನಾಡಿದ ಅವರು, ತರಬೇತಿ ಮೂಲಕ ಕೌಶಲ್ಯ ವೃದ್ಧಿಸಿಕೊಂಡು ಸ್ವಉದ್ಯೋಗದ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಲ್ಲಿ ಬಡವರಿಗೆ ಸ್ವಸಹಾಯ ಗುಂಪುಗಳು ಆಶಾಕಿರಣವಾಗಿವೆ. ಆದ್ದರಿಂದಲೇ ಬ್ಯಾಂಕ್ಗಳು ಇಂದು ಸ್ವಸಹಾಯ ಗುಂಪಿನ 10 ಲಕ್ಷ ರೂ.ವರೆಗಿನ ಸಾಲಕ್ಕೆ ಯಾವುದೇ ಕೊಲ್ಯಾಟರಲ್ ಅಥವಾ ಮಾರ್ಜಿನ ಮನಿ ವಿಧಿಸುತ್ತಿಲ್ಲ ಎಂದು ಹೇಳಿದರು.
ಇಂತಹ ವಾತಾವರಣ ಎಲ್ಲಾ ವರ್ಗದ ಸಾಲಗಳಿಗೂ ಅನ್ವಯಿಸುವ ಸ್ಥಿತಿ ನಿರ್ಮಾಣ ವಾಗಬೇಕು. ಸ್ವಸಹಾಯ ಗುಂಪಿನ ಹೆಣ್ಣು ಮಕ್ಕಳು ಸಾಲ ಪಡೆಯುವುದು ಮತ್ತು ಮರುಪಾವತಿ ಮಾಡುವುದು ಜಗತ್ತಿನ ಬ್ಯಾಂಕಿಂಗ್ ವ್ಯವಸ್ಥೆಗೆ ಮಾದರಿಯಾಗಿದೆ. ಬೀದರಿನಲ್ಲಿ ಸಹಕಾರಿ ಬ್ಯಾಂಕಿನಡಿ ಸ್ವಸಹಾಯ ಗುಂಪುಗಳು ಅತ್ಯುತ್ತಮ ಸಾಧನೆ ದಾಖಲಿಸಿವೆ ಎಂದ ಅವರು, ಸುಮಾರು 10 ಗುಂಪುಗಳ ಆಯ್ದ ಪ್ರತಿನಿಧಿಗಳಿಗೆ ಕಿರು ಉದ್ಯಮ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಕೌಶಲ್ಯ ತರಬೇತಿ ನೀಡಲಾಗುತ್ತಿದ್ದು, ಇದರ ಪ್ರಯೋಜನ
ಪಡೆಯಬೇಕು ಎಂದು ಹೇಳಿದರು.
ರಿಸರ್ವ್ ಬ್ಯಾಂಕಿನ ಸಹಾಯಕ ಮಹಾಪ್ರಬಂಧಕ ವಿದ್ಯಾಸಾಗರ ಮಾತನಾಡಿ, ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಡವರ ಮನೆಬಾಗಿಲಿಗೆ ತಲುಪಿಸಿರುವ ಸ್ವಸಹಾಯ ಗುಂಪುಗಳು ಅತ್ಯುತ್ತಮವಾಗಿವೆ. ಆದರೂ ಇತ್ತೀಚಿನ ದಿನಗಳಲ್ಲಿ ತರಬೇತಿ ಕೊರತೆ, ಸಮರ್ಪಕ ನಿರ್ವಹಣೆ ವೈಫಲ್ಯಗಳಿಂದಾಗಿ ಸಾಲ ಮರುಪಾವತಿಯಲ್ಲಿ ಹಿಂದೆ ಬೀಳುತ್ತಿದ್ದು, ಬ್ಯಾಂಕ್ ಗಳು ಇದರ ಬಗ್ಗೆ ಗಮನಹರಿಸಬೇಕಾಗಿದೆ. ಸ್ವಸಹಾಯ ಗುಂಪುಗಳ ವ್ಯವಸ್ಥೆ ಬಲಪಡಿಸಬೇಕಿದೆ ಎಂದು ಹೇಳಿದರು.
ಎಸ್ಬಿಐನ ದಾನೇಶ್ ಬಿರಾದಾರ್, ನಬಾರ್ಡ್ನ ಡಿವಿಎಸ್ ಜೋಶಿ, ಎಲ್ಡಿಎಂ ಪಂಡಿತ ಹೊಸಳ್ಳಿ, ಸಿ.ಎಲ್. ರೆಡ್ಡಿ, ಕಾರ್ಮೆಲ್ ಸೇವಾ ಟ್ರಸ್ಟಿನ ಸಿಸ್ಟರ್ ಪಿಡಾ ಉಪಸ್ಥಿತರಿದ್ದರು. ಸಹಾರ್ದ ಸಂಸ್ಥೆಯ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಅನೀಲಕುಮಾರ ಪರಶೆಣೆ, ತನ್ವಿರ ರಜಾ ಮತ್ತು ನಾಗಶೆಟ್ಟಿ ಘೋಡಂಪಳ್ಳಿ ನಿರ್ವಹಿಸಿದರು. ಎಸ್.ಜಿ. ಪಾಟೀಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ