ಬೀದರನಲ್ಲೇ ರಾಜ್ಯ ಕ್ರೀಡಾಕೂಟಕ್ಕೆ ಪ್ರಯತ್ನ

ಕ್ರೀಡಾಕೂಟವು ಅವರಲ್ಲಿನ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಒದಗಿಸಲಿದೆ.

Team Udayavani, Feb 13, 2021, 6:18 PM IST

ಬೀದರನಲ್ಲೇ ರಾಜ್ಯ ಕ್ರೀಡಾಕೂಟಕ್ಕೆ ಪ್ರಯತ್ನ

ಬೀದರ: ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಬೀದರನಲ್ಲೇ ಆಯೋಜಿಸಲು ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ರಘುನಾಥರಾವ್‌ ಮಲ್ಕಾಪುರೆ ಭರವಸೆ ನೀಡಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಾಜ್ಯ ಸರ್ಕಾರಿ ನೌಕರರ ಎರಡು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯಮಟ್ಟದ ಕ್ರೀಡಾಕೂಟ ಇಲ್ಲಿಯೇ ನಡೆಯಬೇಕು ಎನ್ನುವುದು ಜಿಲ್ಲೆಯ ಸರ್ಕಾರಿ ನೌಕರರ ಆಶಯವಾಗಿದೆ ಎಂದರು.

ರಾಜ್ಯ ಸರ್ಕಾರ ನೌಕರರ ಬೇಡಿಕೆಗಳಿಗೆ ಸ್ಪಂದಿಸುತ್ತ ಬಂದಿದೆ. ಕೋವಿಡ್‌ ಸಂಕಷ್ಟದಲ್ಲಿ ಅನೇಕ ರಾಜ್ಯಗಳು ನೌಕರರ ವೇತನ ಕಡಿತಗೊಳಿಸಿದ್ದವು. ಆದರೆ, ರಾಜ್ಯ ಸರ್ಕಾರ ಮಾತ್ರ ಯಾವುದೇ ಕಡಿತ ಮಾಡದೇ ನೌಕರರ ಹಿತ ರಕ್ಷಿಸಿತು ಎಂದು ತಿಳಿಸಿದರು.

ರಾಜೇಂದ್ರಕುಮಾರ ಗಂದಗೆ ಕ್ರಿಯಾಶೀಲರಾಗಿದ್ದಾರೆ. ನೌಕರರಿಗಾಗಿ ವಿವಿಧ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಚಟುವಟಿಕೆಗಳಿಗೆ ತಮ್ಮ ಸಹಾಯ, ಸಹಕಾರ ಸದಾ ಇರಲಿದೆ ಎಂದರು.

ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಮಾತನಾಡಿ, ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ವ್ಯವಸ್ಥಿತವಾಗಿ ಸಂಘಟಿಸಲಾಗಿದೆ. ಆನ್‌ಲೈನ್‌ ನೋಂದಣಿ ಮೂಲಕ ಕ್ರೀಡಾಪಟುಗಳ ಸಮಯ ಹಾಗೂ ಹಣ ವ್ಯರ್ಥವಾಗುವುದನ್ನು ತಪ್ಪಿಸಿರುವುದು ಪ್ರಶಂಸನೀಯ. ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಬೀದರನಲ್ಲೇ ಏರ್ಪಡಿಸುವ ಸಂಬಂಧ ಸರ್ಕಾರ ಹಾಗೂ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಕ್ರೀಡಾಜ್ಯೋತಿ ಸ್ವೀಕರಿಸಿದ ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ ಮಾತನಾಡಿ, ಕ್ರೀಡಾಕೂಟಗಳು ನೌಕರರಲ್ಲಿ ಹೊಸ ಉತ್ಸಾಹ, ಹುಮ್ಮಸ್ಸು ಮೂಡಿಸಲು ನೆರವಾಗಲಿವೆ ಎಂದರು. ಅಧ್ಯಕ್ಷತೆ ವಹಿಸಿದ್ದ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿ, ನೌಕರರನ್ನು ಒತ್ತಡಮುಕ್ತಗೊಳಿಸಲು ಪ್ರತಿ ವರ್ಷ ಜಿಲ್ಲಾ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಸರ್ಕಾರಿ ನೌಕರರಲ್ಲೂ ಬಹಳಷ್ಟು ಕ್ರೀಡಾಪಟುಗಳು ಇದ್ದಾರೆ.

ಕ್ರೀಡಾಕೂಟವು ಅವರಲ್ಲಿನ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಒದಗಿಸಲಿದೆ. ರಾಜ್ಯಮಟ್ಟದ ಕ್ರೀಡಾಕೂಟ ಬೀದರನಲ್ಲೇ ಆಯೋಜಿಸುವ ನಿಟ್ಟಿನಲ್ಲಿ ಸಂಘ ಪ್ರಯತ್ನ ನಡೆಸುತ್ತಿದೆ. ಅವಕಾಶ ದೊರೆತರೆ ರಾಜ್ಯದಲ್ಲೇ ಮಾದರಿಯಾಗಿ ಸಂಘಟಿಸಲಾಗುವುದು ಎಂದರು.

ಸಚಿವರ ಸಂದೇಶ: ಅನಿವಾರ್ಯ ಕಾರಣಕ್ಕಾಗಿ ದೆಹಲಿಗೆ ಬಂದಿರುವ ಕಾರಣ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ನೌಕರರು ಕ್ರೀಡಾಕೂಟದಲ್ಲಿ ಆಸಕ್ತಿಯಿಂದ ಭಾಗವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕಳುಹಿಸಿದ ಸಂದೇಶವನ್ನು ಗಂದಗೆ ಓದಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಇದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್‌.ಜಿ. ನಾಡಗೀರ ಸ್ವಾಗತಿಸಿದರು. ಶಿವಕುಮಾರ ಬಾವಗೆ ನಿರೂಪಿಸಿದರು. ರಾಜಕುಮಾರ ಹೊಸದೊಡ್ಡೆ ವಂದಿಸಿದರು. ಇದಕ್ಕೂ ಮೊದಲು ರೋಟರಿ ಕನ್ನಡಾಂಬೆ ವೃತ್ತದಿಂದ ನೆಹರು ಕ್ರೀಡಾಂಗಣವರೆಗೆ ಕ್ರೀಡಾಜ್ಯೋತಿ ಮೆರವಣಿಗೆ ನಡೆಯಿತು.

ಉತ್ಸಾಹದಿಂದ ಪಾಲ್ಗೊಂಡ ನೌಕರರು ನೆಹರು ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸರ್ಕಾರಿ ನೌಕರರು ಉತ್ಸಾಹದಿಂದ ಪಾಲ್ಗೊಂಡರು. ಮೊದಲ ದಿನ 800 ಮೀ. ಓಟ, ವಾಲಿಬಾಲ್‌, ಕಬಡ್ಡಿ, ಕ್ರಿಕೆಟ್‌, ಡಿಸ್ಕಸ್‌ ಥ್ರೋ, ಶಾಟ್‌ಪುಟ್‌, ಉದ್ದ-ಎತ್ತರ ಜಿಗಿತ, ಚೆಸ್‌, ಕೇರಂ, ಷಟಲ್‌ ಬ್ಯಾಡ್ಮಿಂಟನ್‌, ಬಾಸ್ಕೆಟ್‌ಬಾಲ್‌, ಥ್ರೋಬಾಲ್‌ ಮೊದಲಾದ ಕ್ರೀಡೆಗಳು ನಡೆದವು. ನೌಕರರ ಸಂಘವು ಕ್ರೀಡಾಪಟುಗಳಿಗೆ ಟೀ ಶರ್ಟ್‌ ಹಾಗೂ ಟೊಪ್ಪಿಗೆ ವಿತರಿಸಿತು. ಕ್ರೀಡಾಕೂಟದಲ್ಲಿ ಪಾಲ್ಗೊಂಡವರಿಗೆ ಬೆಳಗ್ಗೆ ಚಹಾ, ಉಪಾಹಾರ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು. ಕ್ರೀಡಾಕೂಟದಲ್ಲಿ ಜಿಲ್ಲೆಯ ಒಟ್ಟು 1,680 ಸರ್ಕಾರಿ ನೌಕರರು ಹೆಸರು ನೊಂದಾಯಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.