ಕತ್ತಲಲ್ಲೇ ನಡೆಯುತ್ತಾ ಅಮರೇಶ್ವರ ಜಾತ್ರೆ?

ಬೀದಿ ದೀಪ ಅಳವಡಿಸದಿದ್ದರೆ ಕಳ್ಳತನ ಹೆಚ್ಚು ರಾಜಕೀಯ ನಾಯಕರಲ್ಲಿ ಉತ್ಸಾಹದ ಕೊರತೆ

Team Udayavani, Feb 16, 2020, 12:07 PM IST

16-February-6

ಔರಾದ: ಪ್ರತಿ ವರ್ಷಕ್ಕೊಮ್ಮೆ ಉದ್ಭವಲಿಂಗ ಅಮರೇಶ್ವರ ಜಾತ್ರೆ ಸಮಯದಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿನ ವಿದ್ಯುತ್‌ ಕಂಬಗಳಿಗೆ ಬಲ್ಬ್ ಹಾಕುವ ಪಟ್ಟಣ ಪಂಚಾಯತಿ ಅಧಿಕಾರಿಗಳು ಈ ಬಾರಿ ಸ್ವಚ್ಛತೆ ಹಾಗೂ ಬಲ್ಬ್ ಹಾಕದಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಔರಾದ ತಾಲೂಕು ಕೇಂದ್ರಸ್ಥಾನದಲ್ಲಿರುವ ಉದ್ಭವಲಿಂಗ ಹಾಗೂ ಕಲ್ಯಾಣ ಚಾಲುಕ್ಯರ ಆಳ್ವಿಕೆಯಲ್ಲಿ ಗುರುತಿಸಿಕೊಂಡ ಅಮರೇಶ್ವರ ಜಾತ್ರೆ ಫೆ.19ರಿಂದ ಆರಂಭವಾಗಲಿದೆ. ಆದರೆ ಪಪಂ ಅಧಿಕಾರಿಗಳು ಇನ್ನೂ ಮುಖ್ಯ ರಸ್ತೆಯಲ್ಲಿನ ಕಂಬಗಳಿಗೆ ಬಲ್ಬ್ ಗಳನ್ನು ಅಳವಡಿಸದ ಕಾರಣ ಕತ್ತಲೆಯಲ್ಲಿಯೇ ಜಾತ್ರೆ ಆಚಾರಿಸುವುದಾ? ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಪಪಂ ಚುನಾವಣೆಗಳು ಮುಗಿದು ವರ್ಷ ಕಳೆಯುತ್ತ ಬಂದರೂ ಇನ್ನೂ ಪಪಂಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಗಿದಿಲ್ಲ. ಸರ್ಕಾರದಿಂದ ಕೆಟಗಿರಿ ಬಾರದಿರುವ ಹಿನ್ನೆಲೆಯಲ್ಲಿ ಪೆಂಡಿಂಗ್‌ ಉಳಿದುಕೊಂಡಿದೆ ಎನ್ನುವುದು ಒಂದೆಡೆಯಾಗಿದ್ದರೆ, ಇನ್ನೊಂದಡೆ ಪಪಂ ಸದಸ್ಯರ ಕೈಗೆ ಪೂರ್ಣ ಪ್ರಮಾಣದ ಅಧಿಕಾರ ಸಿಕ್ಕಿಲ್ಲ. ಹೀಗಾಗಿ ಪಪಂ ಮುಖ್ಯಾಧಿಕಾರಿಗಳು ನಮ್ಮ ಮಾತಿಗೆ ಬೆಲೆ ನೀಡುತ್ತಿಲ್ಲ ಎನ್ನುವುದು ಸದಸ್ಯರ ಅಳಲು.

ಏಳು ದಿನಗಳ ಕಾಲ ನಡೆಯುವ ಉದ್ಭವಲಿಂಗ ಅಮರೇಶ್ವರ ಜಾತ್ರೆಗೆ ಔರಾದ ತಾಲೂಕು ಸೇರಿದಂತೆ ನೇರೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯದಿಂದ ಭಕ್ತರು ಬರುತ್ತಾರೆ. ಅಲ್ಲದೆ ಅಮರೇಶ್ವರನ ರಥೋತ್ಸವ ಕೂಡ ರಾತ್ರಿ ಸಮಯದಲ್ಲಿಯೇ ನಡೆಯುತ್ತದೆ. ಕತ್ತಲೆಯಲ್ಲಿ ರಥ ಸಂಚರಿಸುವುದು, ನಾಟಕ ಸೇರಿದಂತೆ ಇತರ ಮನರಂಜನೆ ಕಾರ್ಯಕ್ರಮ ವೀಕ್ಷಿಸಲು ಬರುವ ಜನರಿಗೆ ಕಳ್ಳರ ಕಾಟ ತಪ್ಪಿದ್ದಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.

ನಾಯಕರಲ್ಲಿ ಉತ್ಸಾಹದ ಕೊರತೆ: ಉದ್ಭವಲಿಂಗ ಅಮರೇಶ್ವರ ಜಾತ್ರೆ ಆಚರಣೆಗೆ ಈ ಬಾರಿ ರಾಜಕೀಯ ನಾಯಕರಲ್ಲಿ ಉತ್ಸಾಹದ ಕೊರತೆ ಎದ್ದು ಕಾಣುತ್ತಿದೆ. ಬೀದರ ಸಂಸದ ಭಗವಂತ ಖೂಬಾ ಪಟ್ಟಣದ ನಿವಾಸಿಯಾಗಿದ್ದರೂ ಜಾತ್ರೆಗೆ ಅಗತ್ಯ ಸೌಕರ್ಯ ಹಾಗೂ ಬೆನ್ನೆಲುಬಾಗಿ ನಿಲ್ಲುತ್ತಿಲ್ಲ. ಇನ್ನೂ ಸಚಿವ ಪ್ರಭು ಚವ್ಹಾಣ ಜಾತ್ರೆ ಕಾರ್ಯಕ್ರಮಕ್ಕೆ ಬಂದು ಹೋಗುತ್ತಾರೆ. ಪ್ರತಿವರ್ಷ ದಾಸೋಹಕ್ಕೆ ಅಗತ್ಯ ಸೌಕರ್ಯ ನೀಡುತ್ತಾರೆ. ಪಪಂ ಸದಸ್ಯರು ನಮ್ಮ ಕೈಯಲ್ಲಿ ಅ ಧಿಕಾರವಿಲ್ಲವೆಂದು ಕೈ ಕಟ್ಟಿ ಕುಳಿತಿದ್ದಾರೆ.

ಬಲ್ಬ್ ಹಾಕುವುದು ಯಾವಾಗ?: ಅಮರೇಶ್ವರ ಜಾತ್ರೆಗೆ ದಿನಗಣನೆ ಶುರುವಾಗಲಿದೆ. ಆದರೆ ಪಪಂ ಅಧಿ  ಕಾರಿಗಳು ದೇವಸ್ಥಾನದ ಸುತ್ತಮುತ್ತ ಹಾಗೂ ಪಟ್ಟಣದ ಮುಖ್ಯರಸ್ತೆ ಸೇರಿದಂತೆ ದೇವರು ತಿರುಗುವ ರಸ್ತೆಯಲ್ಲಿ ಸ್ವಚ್ಛತೆ ಮಾಡಿಲ್ಲ. ಅದರಂತೆ ಮುಖ್ಯ ರಸ್ತೆ ಸೇರಿದಂತೆ ಪ್ರಮುಖ ಬಡಾವಣೆಯಲ್ಲಿನ ವಿದ್ಯುತ್‌ ಕಂಬಗಳಿಗೆ ಬಲ್ಬ್ ಹಾಕದಿರುವುದರಿಂದ ಕತ್ತಲುಮಯ ವಾತಾವರಣವಿದೆ. ಇದರಿಂದ ರಾತ್ರಿಯಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗಲಿವೆ ಎನ್ನುವುದು ಜನರ ಮಾತು.

ಪಟ್ಟಣದಲ್ಲಿ ವಿದ್ಯುತ್‌ ಕಂಬಗಳಿಗೆ ಬಲ್ಬ್ ಗಳು ಇಲ್ಲದೆ ಪಟ್ಟಣವೇ ಕತ್ತಲುಮಯವಾಗಿದೆ. ಮುಖ್ಯಾಧಿ ಕಾರಿಗೆ ತಿಳಿಸಲು ಕಚೇರಿಗೆ ಹೋದರೆ ಕಚೇರಿಯಲ್ಲಿ ಅವರು ಇರುವುದಿಲ್ಲ. ಫೋನ್‌ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ. ಜಾತ್ರೆಯ ಸಮಯದಲ್ಲಾದರೂ ಕೆಲಸ ಮಾಡಿ. „ಆನಂದ ದ್ಯಾಡೆ,
   ಯುವಕ

ಅಧಿಕಾರಿಗಳಿಗೆ ಹೇಳಿ ಹೇಳಿ ಸಾಕಾಗಿದೆ. ದೇವಸ್ಥಾನ, ಮುಖ್ಯ ರಸ್ತೆ ಮತ್ತು ದೇವರು ತಿರುಗುವ ರಸ್ತೆಯಲ್ಲಿನ ಕಂಬಗಳಿಗೆ ಬಲ್ಬ್ ಹಾಕುವಂತೆ ಮನವಿ ಮಾಡಿದ್ದರೂ ಹಾಕಿಲ್ಲ. ಜನರಿಗೆ ಭಯ ಪಡದಿದ್ದರೂ ದೇವರಿಗಾದರೂ ಭಯ ಪಡಿ.
„ಬಸವರಾಜ ದೇಶಮುಖ,
ದೇವಸ್ಥಾನ ಕಮಿಟಿ ಅಧ್ಯಕ್ಷ

ಜಾತ್ರೆಯಲ್ಲಿ ಬೇರೆ ರಾಜ್ಯ ಹಾಗೂ ತಾಲೂಕಿನ ಮೂಲೆ ಮೂಲೆಗಳಿಂದ ಜನರು ಬರುತ್ತಾರೆ. ಸ್ವಚ್ಛತೆ ಹಾಗೂ ಬೀದಿ ದೀಪ ಅಳವಡಿಸುವಂತೆ ನಾಲ್ಕು ಬಾರಿ ಮನವಿ ಮಾಡಿದ್ದೇವೆ. ಆದರೆ ಅಧಿಕಾರಿ ನಮ್ಮ ಮಾತಿಗೆ ಕಿಮ್ಮತ್ತು ನೀಡುತ್ತಿಲ್ಲ.
„ಹೆಸರು ಹೇಳಲಿಚ್ಛಿಸದ ಪಪಂ ಸದಸ್ಯ

„ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.