ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮ ಜಾಗೃತ
Team Udayavani, Nov 23, 2021, 1:15 PM IST
ಬೀದರ: ರೊವರ್ ಹಾಗೂ ರೇಂಜರ್ ಘಟಕದಿಂದ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮದ ಜೊತೆಗೆ ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಕಲಿಸಿಕೊಡುತ್ತದೆ ಎಂದು ಡಿಡಿಪಿಯು ಎಂ.ಆಂಜನೇಯ ಹೇಳಿದರು.
ತಾಲೂಕಿನ ಮನ್ನಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡ ರೊವರ್ ಹಾಗೂ ರೇಂಜರ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಭವ್ಯ ಭಾರತದ ಉತ್ತಮ ನಾಗರಿಕರಾಗಿ ಬಾಳಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಚಂದ್ರಕಾಂತ ಶಾಹಾಬಾದಕರ, ದೇಶ ಪ್ರೇಮದ ಜೊತೆಗೆ ಭಾತೃತ್ವದ ಭಾವನೆ ಮೂಡಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ. ನೈತಿಕತೆ ಮತ್ತು ಮಾನವೀಯ ಮೌಲ್ಯಗಳ ಅರಿವು ಮೂಡಿಸುವ ಕಾರ್ಯ ನಡೆಯಬೇಕು ಎಂದು ಹೇಳಿದರು.
ಘಟಕದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಚಳಕಾಪುರೆ ಮಾತನಾಡಿ, ವಿದ್ಯಾರ್ಥಿಗಳಿಗೆ ಜೀವನದಲ್ಲಿ ಬದುಕುವ ಕಲೆ, ಉತ್ತಮ ಸಂಸ್ಕಾರ ನೀಡುವಲ್ಲಿ ರೊವರ್ ಹಾಗೂ ರೇಂಜರ್ ಘಟಕದ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಪಾಂಶುಪಾಲ ಚಂದ್ರಕಾಂತ ಗಂಗಶೆಟ್ಟಿ ಮಾತನಾಡಿದರು. ಇದೇ ವೇಳೆ ಡಿಡಿಪಿಯು ಎಂ. ಆಂಜನೇಯ, ರೊವರ್ ಹಾಗೂ ರೇಂಜರ್ ಅ ಧಿಕಾರಿ ಬಾಲಾಜಿ ದಿಂಡಿಗಿರೆ, ಉಪನ್ಯಾಸಕಿ ರುಕ್ಮಿಣಿ ಅವರಿಗೆ ಸನ್ಮಾನಿಸಿ, ಗೌರವಿಸಲಾಯಿತು. ಉಪನ್ಯಾಸಕರಾದ ಸುಭಾಷ ರಾಠೊಡ, ಶ್ರೀನಿವಾಸ ಜಿವಣಗಿ, ಮದನಲಾಲ ರಾಠೊಡ, ರಜನಿಕಾಂತ, ಜೇಸ್ಸಿಕಾ, ಶಿವಶಂಕರ ಬಾಮಂದಿ, ವಿಜಯಕುಮಾರ ದೇವಾ, ಶಿವಶಂಕರ ಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ