ವಾಯುಮಾಲಿನ್ಯ ಜಾಗೃತಿ ಮಾಸಾಚರಣೆಗೆ ಚಾಲನೆ


Team Udayavani, Nov 14, 2020, 5:10 PM IST

ವಾಯುಮಾಲಿನ್ಯ ಜಾಗೃತಿ ಮಾಸಾಚರಣೆಗೆ ಚಾಲನೆ

ಬೀದರ: ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ನಗರದಲ್ಲಿ ನ. 12ರಂದು “ಮಾಲಿನ್ಯ ಅಳಿಸಿ ಜೀವ ಉಳಿಸಿ’ ಘೋಷ ವಾಕ್ಯದಡಿ ವಾಯುಮಾಲಿನ್ಯ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ನಿಮಿತ್ತ ನಗರದ ಅಂಬೇಡ್ಕರ್‌ ವೃತ್ತ ಹತ್ತಿರ ನಡೆದ ಬೀದಿನಾಟಕ ಕಾರ್ಯಕ್ರಮ ಹಾಗೂ ಸಸಿ ವಿತರಣೆಗೆ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಚಾಲನೆ ನೀಡಿದರು. ಇದೇ ವೇಳೆ ಡಿಸಿ ವಾಹನ ಚಾಲಕರಿಗೆ ಸಸಿ ವಿತರಣೆ ಮಾಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಶಂಕರ ಮಾತನಾಡಿ, ಮನುಕುಲದ ಒಳಿತಿಗೆ ಪರಿಸರ ಸಮತೋಲನದಿಂದ ಇಟ್ಟುಕೊಳ್ಳಬೇಕು.

ಈ ನಿಟ್ಟಿನಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಒತ್ತು ಕೊಡಬೇಕು. ವಾಹನಗಳಿಗೆ ಕಳಪೆ ಇಂಧನ ಬಳಸಬಾರದು. ಇದರಿಂದ ಸಾಕಷ್ಟು ಹೊಗೆ ಉಂಟಾಗಿ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂದರು.

ಹೊಗೆ ಸೇವನೆಯಿಂದ ಮನುಷ್ಯನ ಶ್ವಾಸಕೋಶದ ಮೇಲೆ ಪರಿಣಾಮವಾಗಲಿದೆ. ಅಲ್ಲದೇ ಕಣ್ಣು ಮಂಜಾಗಲಿವೆ. ಕ್ಯಾನ್ಸರ್‌, ಅಸ್ತಮಾ ಮತ್ತು ದಮ್ಮಿನಂತಹ ಕಾಯಿಲೆಗಳು ಬರುತ್ತವೆ. ಆದ್ದರಿಂದ ಜನರು ವಾಹನಗಳಿಗೆ ಗುಣಮಟ್ಟದ ಇಂಧನ ಬಳಸಬೇಕು. ವಾಹನಗಳಿಗೆ ತಪ್ಪದೇ ಆರು ತಿಂಗಳಿಗೊಮ್ಮೆ ವಾಯುಮಾಲಿನ್ಯ ತಪಾಸಣೆ ಮಾಡಿಸಬೇಕು. ಇಲ್ಲವಾದರೆ ದ್ವಿಚಕ್ರ ವಾಹನಗಳಿಗೆ 1500ರೂ. ಮತ್ತು ನಾಲ್ಕು ಚಕ್ರದ ವಾಹನಗಳಿಗೆ 3000 ರೂ. ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು. ಭಾಲ್ಕಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಾಫರ ಸಾಕ್‌ ಮಾತನಾಡಿ, ಮನುಷ್ಯನಿಗೆ ಗಾಳಿ ಅತೀಮುಖ್ಯ. ಹೀಗಾಗಿ ಕಾಲಕಾಲಕ್ಕೆ ವಾಹನ ಪರಿಶೀಲಿಸುತ್ತ ಹೊಗೆಬಾರದಂತೆ ಸುಸ್ಥಿತಿಯಲ್ಲಿಟ್ಟುಕೊಳ್ಳೋಣ. ಚಿಕ್ಕ ಮಕ್ಕಳಿಗೆ ವಾಹನ ನೀಡಬಾರದು ಎಂದು ಸೂಚಿಸಿದರು.

ಕಚೇರಿ ಅಧೀಕ್ಷಕ ಖಾಜಾ ಬಿರಾನಿಬಾಷಾ, ವಾಹನ ನಿರೀಕ್ಷಕ ಮಂಜುನಾಥ ಎಂ.,ಪ್ರಮುಖರಾದ ಶಿವರಾಜ ಜಮಾದಾರ, ಪ್ರಕಾಶ ಗುಮ್ಮೆ, ಸಮೀರ್‌ ಅಹ್ಮದ್‌, ಅನೀಲಕುಮಾರ, ರಾಜಕುಮಾರಬಿರಾದಾರ, ವಿಲಿಯಂ ಹೊಸಮನಿ, ಜೇಮ್ಸ್‌, ವಿಶ್ವನಾಥ ಎಂ, ಸಯ್ಯದ್‌ ಖಲೀಂ, ವೀರೇಂದ್ರ ಇತರರು ಇದ್ದರು.

ಜಾಗೃತಿ ಕಾರ್ಯಕ್ರಮ: ದೇವದಾಸ್‌ ಚಿಮಕೋಡ್‌ ನೇತೃತ್ವದ ನಂದೀಶ್ವರ ನಾಟ್ಯ ಸಂಘದಿಂದ ಬಸವೇಶ್ವರ ವೃತ್ತ, ಹೊಸ ಬಸ್‌ ನಿಲ್ದಾಣ, ಆರ್‌ಟಿಒ ಕಚೇರಿ ಹತ್ತಿರ ಜಾಗೃತಿ ಕಾರ್ಯಕ್ರಮ ನಡೆದವು. ವಾಯುಮಾಲಿನ್ಯ ನಿಯಂತ್ರಣ ಕುರಿತು ಜಾಗೃತಿ ಗೀತೆ ಹೇಳಿ ಅರಿವು ಮೂಡಿಸಲಾಯಿತು.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.