ಹುಮನಾವಾದ: ಸ್ವಾತಂತ್ರ್ಯ ಅಮೃತಮಹೋತ್ಸವ; ಪಟ್ಟಣದಲ್ಲಿ ಪ್ರತಿದಿನ ಹತ್ತಾರು ಜಾಥ
Team Udayavani, Aug 14, 2022, 4:27 PM IST
ಹುಮನಾವಾದ: ಕಳೆದ ಆ.8 ರಂದು ಆರಭಗೊಂಡ ತಿರಂಗಾ ಜಾಥಗಳು ಪ್ರತಿದಿನ ಹತ್ತಾರು ಸಂಘ, ಸಂಸ್ಥೆಗಳು, ರಾಜಕೀಯ ಪಕ್ಷಗಳ ನೇತೃತ್ವದಲ್ಲಿ, ಕಾಲ್ನಡಿಗೆ ಜಾಥಾ, ಬೈಕ್ ಜಾಥಾಗಳು ಸಡಗರ-ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ.
ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹರ್ ಘರ್ ತಿರಂಗಾ ಯೋಜನೆಗೆ ಪಟ್ಟಣದಲ್ಲಿ ಉತ್ತಮ ಸ್ಪಂದನೆ ದೊರೆತಿದ್ದು, ಪ್ರತಿಯೊಂದು ಮನೆ ಅಂಗಡಿಗಳ ಮೇಲೆ ರಾಷ್ಟ್ರಧ್ವಜ ಹಾರುತಿರುವುದು ಕಂಡುಬರುತ್ತಿದೆ.
ದ್ವಿ ಚಕ್ರ ವಾಹನ, ಆಟೋ, ಕಾರುಗಳ ಮೇಲೆ ಕೂಡ ರಾಷ್ಟ್ರಧ್ವಜ ಹಚ್ಚಿ ಜನರು ಸಂಭ್ರಮಿಸುತ್ತಿದ್ದಾರೆ. ಒಟ್ಟಾರೆ ಈ ವರ್ಷದ ಅಮೃತಮಹೋತ್ಸವನ್ನು ಇಲ್ಲಿನ ಜನರು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಪಟ್ಟಣದ ಎಲ್ಲಾ ಕಡೆಗಳಲ್ಲಿ ರಾಷ್ಟ್ರಭಕ್ತಿಯ ಕಲರವ ಕಂಡುಬರುತ್ತಿದೆ.
ಬಿಜೆಪಿ ಬೈಕ್ ರ್ಯಾಲಿ: ಭಾನುವಾರ ಬೆಳಿಗ್ಗೆ ಬಿಜೆಪಿ ಪಕ್ಷದ ವತಿಯಿಂದ ಪಟ್ಟಣದಲ್ಲಿ ಅದ್ದೂರಿ ಬೈಕ್ ರ್ಯಾಲಿ ನಡೆಯಿತು. ನೂರಾರು ಬೈಕ್ ಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಭಾರತ್ ಮಾತಾ ಕೀ ಜಯ್ ಎಂಬ ಜಯಘೋಷ ಹಾಕಿದರು. ಬಿಜೆಪಿ ಯುವ ಮುಖಂಡ ಡಾ। ಸಿದ್ದಲಿಂಗಪ್ಪ ಪಾಟೀಲ, ಜಿಲ್ಲಾಧ್ಯಕ್ಷರಾದ ಶಿವಾನಂದ ಮಂಠಾಳಕರ್, ಸೋಮನಾಥ ಪಾಟೀಲ, ರಮೇಶ ಕಲ್ಲೂರ್, ಮಧುಕರ್ ಹಿಲಾಲಪೂರ್, ಸುನೀಲ ಪಾಟೀಲ, ನಾಗೇಶ ಕಲ್ಲೂರ್, ಗಿರೀಶ ತುಂಬಾ, ದಯಾನಂದ ಮೇತ್ರೆ, ಪ್ರಭಾಕಾರ ನಾಗರಾಳೆ, ಗಿರೀಶ ಮಾಲಿಪಾಟೀಲ ಸೇರಿದಂತೆ ನೂರಾರು ಪಕ್ಷದ ಕಾರ್ಯಕರ್ತರು ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?