ಬಂಜಾರರು ಶ್ರಮಜೀವಿಗಳು: ಎಂಎಲ್ಸಿ ಬಯ್ನಾಪೂರ
Team Udayavani, Apr 6, 2022, 11:58 AM IST
ಮುದಗಲ್ಲ: ಕಾಡು-ಮೇಡುಗಳಲ್ಲಿ ವಾಸಿಸುವ ಬಂಜಾರ ಸಮಾಜ ಬಂಧುಗಳು ಶ್ರಮಜೀವಿಗಳಾಗಿದ್ದಾರೆ ಎಂದು ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ನಾಪೂರ ಹೇಳಿದರು.
ಸೊಂಪೂರ ತಾಂಡಾ(ಡಿ)ದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ದುರ್ಗಾದೇವಿ ದೇವಸ್ಥಾನ ಉದ್ಘಾಟಿಸಿ ಅವರು ಮಾತನಾಡಿದರು.
ಬಂಜಾರ ಸಮಾಜಕ್ಕೆ ತನ್ನದೇಯಾದ ಇತಿಹಾಸವಿದೆ. ಸಂತ ಸೇವಾಲಾಲರು ತಂದೆ ಭೀಮಾನಾಯ್ಕ, ತಾಯಿ ಧರ್ಮಿಣಿಭಾಯಿ ತಪಸ್ಸಿನಿಂದ ಜನಿಸಿದರು. ಅವರು ಬಂಜಾರ ಸಮಾಜದ ಉದ್ಧಾರಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟರು ಎಂದರು.
ಮಸ್ಕಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ಇತ್ತೀಚೆಗೆ ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವ ಬಂಜಾರ ಸಮಾಜ ಅನಗತ್ಯ ಜಗಳ, ವೈಯಕ್ತಿಕ ಕಚ್ಚಾಟದಿಂದ ದೂರು-ಪ್ರತಿ ದೂರು ಸಲ್ಲಿಸುವ ಮೂಲಕ ದಾರಿ ತಪ್ಪುತ್ತಿದೆ ಎಂದು ವಿಷಾದಿಸಿದರು.
ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಮಾತನಾಡಿ, ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಒಗ್ಗಟ್ಟು ತೋರಿಸುವುದಲ್ಲದೇ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಮುಂದೆ ಬರಬೇಕಿದೆ ಎಂದರು.
ಎಲ್ಐಸಿ ಅಭಿವೃದ್ಧಿ ಅಧಿ ಕಾರಿ ಎಲ್.ಟಿ.ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮಕ್ಕೂ ಮುಂಚೆ ವಿಜಯಪುರ ಜಿಲ್ಲೆಯ ಕೆಸರಟ್ಟಿಯ ಶಂಕರಲಿಂಗ ಮಠದ ಶ್ರೀ ಸೋಮಲಿಂಗ ಮಹಾಸ್ವಾಮಿಗಳು ಹಾಗೂ ಲಿಂಗಸುಗೂರಿನ ವಿಜಯಮಹಾಂತೇಶ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಆಗಮಿಸಿ ತಾಂಡಾ ನಿವಾಸಿಗಳಿಗೆ ಆಶೀರ್ವದಿಸಿದರು. ಸುಮಾರು 2 ವರ್ಷಗಳಿಂದ ದೇವಸ್ಥಾನದ ಗೋಪುರ ಹಾಗೂ ಮೂರ್ತಿ ಕೆತ್ತನೆಗೆ ಶ್ರಮಿಸಿದ್ದ ಗ್ರಾಮದ ಮುಖಂಡರು ತಾಂಡಾದಲ್ಲಿ ಪ್ರತಿ ಮನೆಯಲ್ಲಿ ವಂತಿಗೆ ಸಂಗ್ರಹಿಸಿ ಕಳೆದ ತಿಂಗಳು ಮಹಾರಾಷ್ಟ್ರದ ಫಂಡರಪುರದಿಂದ ಅವಳಿ ಮೂರ್ತಿಯನ್ನು ತಂದು ಪ್ರತಿಷ್ಠಾಪಿಸಿದರು.
ಈ ವೇಳೆ ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಗ್ರಾಪಂ ಅಧ್ಯಕ್ಷ ಮೌನೇಶ ರಾಠೊಡ, ತಾಪಂ ಮಾಜಿ ಸದಸ್ಯರಾದ ರಾಮನಗೌಡ, ಶರಣಪ್ಪ ನಾಗಲಾಪುರ, ಶಂಭುಲಿಂಗಪ್ಪ ಸಾಹುಕಾರ, ಬಂಜಾರ ಸಮಾಜದ ಗೌರವಾಧ್ಯಕ್ಷ ಭೀಮಶಪ್ಪ ಪೂಜಾರಿ, ಗ್ರಾಪಂ ಸದಸ್ಯರಾದ ದುರುಗಪ್ಪ ಕಟ್ಟಿಮನಿ, ಮಾನಸಿಂಗ್, ಬಸವರಾಜ ತಳವಾರ, ಶರಣಪ್ಪ ತಗ್ಗಲಿ, ಪಿಕೆಪ್ಪ ನಾಯ್ಕ, ಮಹಿಬೂಬಸಾಬ ಸೇರಿದಂತೆ ತಾಂಡಾದ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ