ಬಸವಕಲ್ಯಾಣಕಣದ ಚಿತ್ರ ಬದಲಿಸಿದ ನಿಗಮಾಸ್ತ್ರ

ಮರಾಠ, ವೀರಶೈವ-ಲಿಂಗಾಯತ ಮತಗಳ ಮೇಲೆ ಕಣ್ಣು ,ಕಮಲ ತಂತ್ರಕ್ಕೆ ಕಂಗಾಲಾದ ಕಾಂಗ್ರೆಸ್‌, ಜೆಡಿಎಸ್‌

Team Udayavani, Nov 18, 2020, 5:19 PM IST

ಬಸವಕಲ್ಯಾಣಕಣದ ಚಿತ್ರ ಬದಲಿಸಿದ ನಿಗಮಾಸ್ತ್ರ

ಬೀದರ: ಬಸವಣ್ಣನ ಕಾರ್ಯಕ್ಷೇತ್ರ ಬಸವಕಲ್ಯಾಣ ಕ್ಷೇತ್ರವನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಬಿಜೆಪಿ ಪ್ರಯೋಗಿಸಿರುವ ಪ್ರಬಲ ಜಾತಿಗಳ ಓಲೈಕೆ “ಅಸ್ತ್ರ’ಮೊದಲ ಹಂತದಲ್ಲೇ ಯಶಸ್ಸು ಕಂಡಂತಾಗಿದೆ.  ಮರಾಠಾ ಅಭಿವೃದ್ಧಿ ಪ್ರಾಧಿ ಕಾರ ರಚನೆ ಬೆನ್ನಲ್ಲೇ ಈಗ ವೀರಶೈವ-ಲಿಂಗಾಯತ ಅಭಿವೃದ್ಧಿ ಪ್ರಾಧಿ ಕಾರ ರಚನೆಗೆ ಬಿಜೆಪಿ ಸರ್ಕಾರ “ಅಸ್ತು’ ಎಂದಿದ್ದು, ಕಲ್ಯಾಣದ ಉಪ ಚುನಾವಣೆ ದಶಕಗಳ ಬೇಡಿಕೆ ಈಡೇರಿಕೆಗೆ ವೇದಿಕೆ ಒದಗಿಸಿಕೊಟ್ಟಂತಾಗಿದೆ.

ಜನತಾ ಪರಿವಾರ ಮತ್ತು ಕಾಂಗ್ರೆಸ್‌ನಭದ್ರಕೋಟೆಯಾಗಿರುವ ಬಸವಕಲ್ಯಾಣ  ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಜೆಪಿ ಪಡೆ

ಚುನಾವಣೆ ಘೋಷಣೆ ಮುನ್ನವೇ ಕಸರತ್ತುನಡೆಸುತ್ತಿದೆ. ಚುನಾವಣಾ ಅಖಾಡಕ್ಕಿಳಿದಿರುವ ಸಿಎಂ ಪುತ್ರ, ಬಿಜೆಪಿಯ ಟ್ರಬಲ್‌ ಶೂಟರ್‌ ಬಿ.ವೈ ವಿಜಯೇಂದ್ರ ಶಿರಾ ಉಪ ಚುನಾವಣೆ ವೇಳೆ ಕಾಡು ಗೊಲ್ಲರಿಗೆ ಪ್ರತ್ಯೇಕ ನಿಗಮಸ್ಥಾಪನೆ ತಂತ್ರವನ್ನೇ ಕಲ್ಯಾಣ ಕ್ಷೇತ್ರದಲ್ಲೂ ಪ್ರಯೋಗಿಸಿದ್ದಾರೆ. ಮತಗಳ ಕ್ರೋಡೀಕರಣಕ್ಕೆ ಕ್ಷೇತ್ರದ ಪ್ರಮುಖ ಜಾತಿಯ ಮತಗಳ ಸೆಳೆಯಲು ತಂತ್ರ ಹೆಣೆಯುತ್ತಿದ್ದಾರೆ.

ಮುಖ್ಯವಾಗಿ ಮರಾಠಾ ಪ್ರಾಬಲ್ಯದ ಕಲ್ಯಾಣ ನೆಲದಲ್ಲೇ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಕುರಿತು ವಿಜಯೇಂದ್ರ ಭರವಸೆ ನೀಡಿದ್ದರು. ಅದಾದ ಕೆಲ ಗಂಟೆಯೊಳಗೆ ಸರ್ಕಾರದಿಂದ ಮಂಡಳಿ ರಚನೆಗೆ ಆದೇಶ ಹೊರಬಿದ್ದಿದೆ.

ಕ್ಷೇತ್ರದಲ್ಲಿ ಒಂದು ಸಮುದಾಯದ ಓಲೈಕೆಗಾಗಿ “ಪ್ರಾಧಿಕಾರ’ ರಚನೆ ಜೇನು ಗೂಡಿಗೆ ಕೈ ಹಾಕಿರುವ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು. ಕನ್ನಡಪರ ಸಂಘಟನೆಗಳಿಂದ ಭಾರಿ ವಿರೋಧ ವ್ಯಕ್ತವಾಗಿದ್ದರೆ, ಮತ್ತೂಂದೆಡೆ ವೀರಶೈವ- ಲಿಂಗಾಯತ ಪ್ರಾಧಿಕಾರ ರಚನೆ ಜತೆಗೆ ಸಮುದಾಯಕ್ಕೆ ಮಹಾರಾಷ್ಟ್ರ ಮಾದರಿ ಮೀಸಲಾತಿ ಬೇಡಿಕೆ ಮುನ್ನಲೆಗೆ ಬಂದಿತ್ತು.

ಬಹು ದಿನಗಳ ಕೂಗು: ಮರಾಠಾ ಪ್ರಾಧಿಕಾರ ರಚನೆಗೆ ವಿರೋಧದಿಂದ ಕಂಗಾಲಾದ ಸರ್ಕಾರ ಎರಡೇ ದಿನದಲ್ಲೇ ವೀರಶೈವ- ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಮೂಲಕ ಸಂಕಷ್ಟದಿಂದ ಹೊರಬರಲು ಯತ್ನ ಮಾಡಿದೆ.ಲಿಂಗಾಯತ ಸಮಾಜದ ಕಡು ಬಡವರು ಮತ್ತು ಯುವಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ಪ್ರಾಧಿಕಾರ ರಚಿಸಬೇಕೆಂಬ ಬಹು ದಿನಗಳ ಕೂಗಿಗೆ ಮನ್ನಣೆ ನೀಡಬೇಕೆಂಬ ಮಠಾಧಿಧೀಶರು, ವೀರಶೈವ ಮಹಾಸಭಾದ ಒತ್ತಡಕ್ಕೆ ಸರ್ಕಾರಕೊನೆಗೂ ಮಣಿದಿದೆ.

ಸಾಮಾನ್ಯವಾಗಿ ಬಿಜೆಪಿ ಲಿಂಗಾಯತ, ಮರಾಠಾ ಸೇರಿ ಮೇಲ್ವರ್ಗದ ಮತ ನೆಚ್ಚಿಕೊಂಡಿದೆ. ಬಸವಕಲ್ಯಾಣ ಉಪ ಚುನಾವಣೆ ಹೊತ್ತಿನಲ್ಲಿ ಈ ನಿರ್ಣಾಯಕ ಮತದಾರರನ್ನು ಪಕ್ಷದ ಪರ ಮತ್ತಷ್ಟು ಗಟ್ಟಿಯಾಗಿಸುವ ಬಿ.ವೈ. ವಿಜಯೇಂದ್ರ ಲೆಕ್ಕಾಚಾರಗಳು ಈ ಎರಡು ಪ್ರಾಧಿಕಾರಗಳ ರಚನೆಯೊಂದಿಗೆ ಕೈಗೂಡುವಂತಾಗಿದ್ದರೆ ಎರಡುಸಮುದಾಯಗಳಿಗೆ ತನ್ನ ಹಕ್ಕೊತ್ತಾಯ ಈಡೇರಲು ಈ ಚುನಾವಣೆಯೇ ಕಾರಣವಾಯಿತು. ಆದರೆ, ರಾಜ್ಯದಲ್ಲಿ ಅತಿ ದೊಡ್ಡ ಸಮುದಾಯವಾಗಿರುವ ವೀರಶೈವ ಲಿಂಗಾಯತ ಸಮುದಾಯಕ್ಕೆ ಮಹಾರಾಷ್ಟ್ರ ಮಾದರಿಯಲ್ಲಿ ಶೇ.16 ಮೀಸಲಾತಿ ನೀಡಬೇಕು. ಆ ಮೂಲಕ ಸಮುದಾಯದ ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕು ಎಂಬುದು ಒತ್ತಾಸೆಯಾಗಿದೆ.

 

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.