ಗುರು ಮನೆ ಪ್ರವೇಶಕ್ಕೆ ಶುದ್ಧ ಮನ ಅವಶ್ಯ

ಗೋಕರ್ಣ ರಾಘವೇಶ್ವರ ಭಾರತಿ ಶ್ರೀ ಪ್ರವಚನ ನಾಗಭೂಷಣ ಶಿವಯೋಗಿಗಳ ಪುಣ್ಯಸ್ಮರಣೋತ್ಸವ

Team Udayavani, Feb 7, 2020, 4:31 PM IST

7-February-24

ಬಸವಕಲ್ಯಾಣ: ಗುರು ಹಾಗೂ ದೇವರ ಮನದಲ್ಲಿ ಮತ್ತು ಮನೆಯಲ್ಲಿ ಪ್ರವೇಶ ಸಿಗಬೇಕು ಎಂದರೆ, ನಮ್ಮ ಮನಸ್ಸು ಚನ್ನಾಗಿರಬೇಕು. ಆಗ ಮಾತ್ರ ಪ್ರವೇಶ ಸಿಗಲು ಸಾಧ್ಯ ಎಂದು ಗೋಕರ್ಣ ರಾಮಚಂದ್ರಾಪೂರ ಮಠದ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳು ಹೇಳಿದರು.

ಮುಚಳಂಬ ಗ್ರಾಮದ ಶ್ರೀ ನಾಗಭೂಷಣ ಶಿವಯೋಗಿ ಸಂಸ್ಥಾನ ಮಠದಲ್ಲಿ ಶ್ರೀ ನಾಗಭೂಷಣ ಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಹಾಗೂ ಶ್ರೀ ಪ್ರಣವಾನಂದ ಮಹಾಸ್ವಾಮಿಗಳ 50 ನೇ ವರ್ಷದ ವರ್ಧಂತಿ ಮಹೋತ್ಸವ ಅಂಗವಾಗಿ ಗುರುವಾರ ನಡೆದ “ಕಿಂ ತೀರ್ಥ ಅಚ್ಛಾ ಮತಿ’ ವಿಷಯ ಕುರಿತು ಅವರು ಪ್ರವಚನ ನೀಡಿದರು.

ಮನುಷ್ಯನಲ್ಲಿ ಒಳ್ಳೆಯ ಮನಸ್ಸು ಇದ್ದಾಗ ಮಾತ್ರ ಒಳಗೆ ಬಾ ಅನ್ನುತ್ತಾನೆ. ಕಲ್ಮಷ ಇದ್ದಲ್ಲಿ ಹೊರಗೆ ಹೋಗು ಅನ್ನುತ್ತಾನೆ. ಏಕೆಂದರೆ ಮನಸ್ಸು ಮನುಷ್ಯನ ಮತ್ತು ದೇವರ ನಡುವೆ ಸೇತುಗೆಯಾಗಿ ಕೆಲಸ ಮಾಡುತ್ತದೆ ಎಂದರು.

ಮನುಷ್ಯ ದಿನಾಲೂ ಮೈ ತೊಳೆಯುತ್ತಿದ್ದಾನೆ ಹೊರತು ಮನಸ್ಸು ತೊಳೆಯುವುದಿಲ್ಲ. ಇದರಿಂದ ಕಾಲ ಕಳೆದಂತೆ ಮನುಷ್ಯನ ಮನಸ್ಸು ಹಾಳಾಗುತ್ತ ಹೋಗುತ್ತಿದೆ. ಹೀಗಾಗಿ ಭಕ್ತಾದಿಗಳು ಸ್ವತ್ಛವಾದ ಮನಸ್ಸು ಮಾಡಿಕೊಳ್ಳುವ ಮೂಲಕ ದೇವರ-ಗುರುಗಳ ಮನೆಯಲ್ಲಿ ಪ್ರವೇಶ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಲೋಕ ನಾಯಕ ಹಾಗೂ ಮಾಜಿ ಸಚಿವ ಭೀಮಣ್ಣಾ ಖಂಡ್ರೆ ಮಾತನಾಡಿ, ಶ್ರೀ ನಾಗಭೂಷಣ ಶಿವಯೋಗಿಗಳು ಸಮಾಜಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ, ಸುಮಾರು 9 ನೂರು ತೀರ್ಥ ಸ್ಥಳಗಳ ಪ್ರವಾಸ ಮಾಡಿ ಯೋಗ ಮಾಡುತ್ತಿದ್ದಾಗ ನಾನು ಅದರಲ್ಲಿ ಭಾಗವಹಿಸಿನ್ನು ಇಂದಿಗೂ ನಾನು ಮರೆಯುವಂತಿಲ್ಲ. ಹೀಗಾಗಿ ಇಂತಹ ಪವಿತ್ರವಾದ ಮಠಕ್ಕೆ ಸದಾ ಬೆನ್ನೆಲುಬಾಗಿ ನಿಂತುಕೊಳ್ಳುತ್ತೇನೆ ಎಂದು ಹೇಳಿದರು.

ಮುಚಳಂಬದ ಶ್ರೀ ಪ್ರಣವಾನಂದ ಮಹಾಸ್ವಾಮಿಗಳು ಮಾತನಾಡಿ, ಮನುಷ್ಯ ಪುಣ್ಯಸ್ಥಾನಗಳಿಗೆ ಹೋಗಿ ನೀರಿನಲ್ಲಿ ಮುಳಗಿದರೆ ಪಾವನವಾಗುವುದಿಲ್ಲ. ಸತ್ಸಂಗದಲ್ಲಿ ಮುಳಗಿದಾಗ ಮಾತ್ರ ಪಾವನವಾಗುತ್ತಾನೆ. ಹೀಗಾಗಿ ಅಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳುವ ಮೂಲಕ ನಿಮ್ಮ ಮನಸ್ಸು ಪಾವನ ಮಾಡಿಕೊಳ್ಳಿ ಎಂದರು.

ಇದಕ್ಕೂ ಮುನ್ನ ಗಂವ್ಹಾ ತ್ರಿವಿಕ್ರಮಾನಂದ ಮಠದ ಶ್ರೀ ಸೋಪಾನನಾಥ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ವೈಜನಾಥ ಕಾಮಶೆಟ್ಟೆ, ಆನಂದ ದೇವಪ್ಪಾ, ಕೆ.ಕೆ.ಮಾಸ್ಟರ್‌ ಸೇರಿದಂತೆ ವಿವಿಧ ಮಠಾಧಿಧೀಶರು ಹಾಗೂ ಭಕ್ತಾದಿಗಳು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.