ಅರ್ಧಕ್ಕೆ ನಿಂತ ವಿಭಜಕ ಕಾಮಗಾರಿ

ರಸ್ತೆ ತುಂಬಾ ಬಿದ್ದ ಜಲ್ಲಿ ಕಲ್ಲುಪ್ರಯಾಣಿರ ಸಂಚಾರಕ್ಕೆ ನಿತ್ಯ ಕಿರಿಕಿರಿ

Team Udayavani, Feb 29, 2020, 11:38 AM IST

29-February-05

ಬಸವಕಲ್ಯಾಣ: ನಗರದಲ್ಲಿ ನಗರಸಭೆಯಿಂದ ಕೈಗೊಂಡಿರುವ ರಸ್ತೆ ಡಿವೈಡರ್‌ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ಇದರಿಂದ ಸಾರ್ವಜನಿಕರು ಮತ್ತು ಪ್ರಯಾಣಿಕರು ನಿತ್ತ ಸಮಸ್ಯೆ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದ ವಿವಿಧ ಪ್ರಮುಖ ರಸ್ತೆಗಳ ಡಿವೈಡರ್‌ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಅವುಗಳಲ್ಲಿ ಕೆಲವು ಪೂರ್ಣವಾದರೆ, ಕೆಲವು ಅಗೆದು ಹಾಗೆ ಬಿಡಲಾಗಿದೆ. ಇದು ಸಾರ್ವಜನಿಕರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ನಗರದ ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದಿಂದ ಹರಳಯ್ಯ ವೃತ್ತದ ವರೆಗೆ ಡಿವೈಡರ್‌ ಕಾಮಗಾರಿ ಸಲುವಾಗಿ ರಸ್ತೆ ಅಗೆದು ಹಾಗೆ ಬೀಡಲಾಗಿದೆ.

ಕಾಂಕ್ರಿಟ್‌, ಜಲ್ಲಿ ಕಲ್ಲುಗಳು ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದರಿಂದ ಬೈಕ್‌ ಸವಾರರು ಮತ್ತು ಪ್ರಯಾಣಿಕರು ಸ್ವಲ್ಪ ನಿರ್ಲಕ್ಷ್ಯ ವಹಿಸಿದರೆ ಅಪಘಾತ ನಡೆಯುವುದು ಖಚಿತ ಎಂಬಂತಿದೆ. ಆದರೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮಾತ್ರ ಕಳೆದ ಒಂದು ತಿಂಗಳಿಂದ ಡಿವೈಡರ್‌ ಕೆಲಸಕ್ಕಾಗಿ ರಸ್ತೆ ಅಗೆದು ಹಾಗೆ ಬಿಟ್ಟಿದ್ದಾರೆ ಎಂಬುವುದು ಸಾರ್ವಜನಿಕರ ಆರೋಪವಾಗಿದೆ.

ಒಟ್ಟಿನಲ್ಲಿ ನಗರದ ಪ್ರಮುಖ ರಸ್ತೆ ಡಿವೈಡರ್‌ ಕಾಮಗಾರಿಗಾಗಿ ಅಗೆದಿರುವುದನ್ನು ಕೂಡಲೇ ಪೂರ್ಣಗೊಳಿಸಿ ಮುಂದೆ ನಡೆಯುವ ಅನಾಹುತ ತಪ್ಪಿಸಬೇಕು ಎಂದು ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

ಡಿವೈಡರ್‌ ಕಾಮಗಾರಿಗಾಗಿ ರಸ್ತೆ ಅಗೆದು ಬಿಟ್ಟಿರುವುದು ಸಂಚಾರಕ್ಕೆ ಕಿರಿಕಿರಿ ಉಂಟಾಗಿದೆ. ಜನದಟ್ಟನೆ ಇರುವ ರಸ್ತೆಗಳಲ್ಲಿ ರಾತ್ರಿ ಸಮಯದಲ್ಲಿ ವಾಹನಗಳು ಎದುರುಗಡೆ ಬಂದರೆ ರಸ್ತೆ ಯಾವುದೊ, ಡಿವೈಡರ್‌ ಯಾವುದೊ ಎಂಬುವುದು ತಿಳಿಯದಂತಾಗಿದೆ. ನಗರದ ಕೆಲ ಪ್ರಮುಖ ರಸ್ತೆಗಳಲ್ಲಿ ಡಿವೈಡರ್‌ ಮಾಡದ ಹಿನ್ನೆಲೆಯಲ್ಲಿ ಭಾರಿ ವಾಹನಗಳು ಮತ್ತು ಬೈಕ್‌ ಸವಾರರು ರಸ್ತೆ ಮಧ್ಯದಿಂದ ಮನಸ್ಸಿಗೆ ಬಂದಂತೆ ಸಂಚರಿಸುತ್ತಿದ್ದಾರೆ. ಇದರಿಂದ ವೃದ್ಧರಿಗೆ ಮತ್ತು ವಿದ್ಯಾರ್ಥಿಗಳಿಗೆ ಭಯ ಹುಟ್ಟಿಸುವಂತೆ ಮಾಡಿದೆ.

ಕಾರ್ಮಿಕರ ಸಮಸ್ಯೆ ಇದ್ದ ಕಾರಣ ಡಿವೈಡರ್‌ ಕೆಲಸ ಅರ್ಧಕ್ಕೆ ನಿಂತಿದೆ. ಕಾರ್ಮಿಕರು ಸಿಕ್ಕ ತಕ್ಷಣ ಒಂದು ವಾರದ ಒಳಗೆ ಡಿವೈಡರ್‌ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದಾರೆ.
ಮೀನಾಕುಮಾರಿ ಬೋರಾಳಕರ್‌,
ಪೌರಾಯುಕ್ತರು ನಗರಸಭೆ ಬಸವಕಲ್ಯಾಣ

ವೀರಾರೆಡ್ಡಿ ಆರ್‌. ಎಸ್‌.

ಟಾಪ್ ನ್ಯೂಸ್

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.