ಫೆ.15ಕ್ಕೆ ದೆಹಲಿಯಲ್ಲಿ ಸೇವಾಲಾಲ ಜಯಂತಿ

ಹಾಮುನಗರದಲ್ಲಿ ಹಾಮುಲಾಲ ಜಾತ್ರಾ ಮಹೋತ್ಸವ ದೆಹಲಿಗೆ ಆಗಮಿಸಲು ಡಾ| ಜಾಧವ ಕರೆ

Team Udayavani, Jan 26, 2020, 4:25 PM IST

26-January-24

ಬಸವಕಲ್ಯಾಣ: ಫೆಬ್ರವರಿ 15ರಂದು ದೆಹಲಿಯಲ್ಲಿ ಸಂತ ಸೇವಾಲಾಲ ಜಯಂತಿ ಆಚರಣೆ ಮಾಡುತ್ತಿದ್ದೇವೆ. ಬಂಜಾರಾ ಸಮುದಾಯದ ಬಾಂಧವರು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕಲಬುರಗಿ ಸಂಸದ ಡಾ| ಉಮೇಶ ಜಾಧವ ಹೇಳಿದರು.

ಹಾಮುನಗರ (ಏಕಲೂರ ತಾಂಡಾ)ದಲ್ಲಿ ಶುಕ್ರವಾರ ರಾತ್ರಿ ಜರುಗಿದ ಶ್ರೀ ಹಾಮುಲಾಲ ದೇವರ 173ನೇ ಜಾತ್ರಾ ಮಹೋತ್ಸವ ಸಮಾರಂಭದ ಉದ್ಘಾಟಿಸಿ ಅವರು ಮಾತನಾಡಿದರು. ಫೆ.15ರಂದು ದೆಹಲಿಯಲ್ಲಿ ಆಯೋಜಿಸಲಾದ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಫೆ.13ರಂದು ಸಂಜೆ ಯಾದಗಿರಿಯಿಂದ ದೆಹಲಿಗೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಂಡು ಸಮಾಜದ ಮುಖಂಡರು ಹಾಗೂ ಬಾಂಧವರು ದೆಹಲಿಗೆ ಆಗಮಿಸಿ ಜಯಂತಿ ಆಚರಣೆಗೆ ಮೆರಗು ತರಬೇಕು ಎಂದರು.

ಕುಸ್ತಿ ಪೈಲ್ವಾನರನ್ನು ಸೃಷ್ಟಿಸಿ ಹಾಗೂ ಅವರಿಗೆ ತರಬೇತಿ ನೀಡಲು ಮುಂದಿನ ವರ್ಷದೊಳಗಾಗಿ ಹಾಮುನಗರದಲ್ಲಿ ನೂತನ ಗರಡಿ ಮನೆ ಸ್ಥಾಪಿಸಬೇಕು. ಮುಂದಿನ ವರ್ಷ ಬಸವಕಲ್ಯಾಣದಲ್ಲಿ ಸಂತ ಸೇವಾಲಾಲ ಜಯಂತಿಯನ್ನು ಅದ್ಧೂರಿ ಹಾಗೂ ವಿಜೃಂಭಣೆಯಿಂದ ಆಚರಿಸಬೇಕು. ಇದರಲ್ಲಿ ನಾನೂ ಭಾಗವಹಿಸುವೆ ಎಂದು ಸಂಸದರು ಈ ವೇಳೆ ಶಾಸಕ ಬಿ. ನಾರಾಯಣರಾವ್‌ ಅವರಿಗೆ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ. ನಾರಾಯಣರಾವ್‌ ಮಾತನಾಡಿ, ಹಾಮುನಗರದಿಂದ ಏಕಲೂರ, ಹಾಮುನಗರ-ಹತ್ಯಾಳ ವರೆಗೆ ರಸ್ತೆ ನಿರ್ಮಾಣ, ಹಾಮುನಗರದಲ್ಲಿ ಕುಸ್ತಿ ಗರಡಿ ಮನೆ ಹಾಗೂ ಆಟದ ಮೈದಾನ ನಿರ್ಮಾಣ ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳಿಗಾಗಿ ಹಾಮುನಗರಕ್ಕೆ 5 ಕೋಟಿ.ರೂ. ಅನುದಾನ ನೀಡಲಾಗುವುದು. ತಾಲೂಕಿನ ಆಯಾ ಜಿಪಂ, ತಾಪಂ ಹಾಗೂ ಗ್ರಾಪಂ ಕ್ಷೇತ್ರಗಳ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಹಾಗೂ ಬಂಜಾರಾ ಸಮುದಾಯದ ಮುಖಂಡರೆಲ್ಲರು ಸಹಕರಿಸಿದರೆ ತಾಲೂಕಿನಲ್ಲಿರುವ ಒಟ್ಟು 40 ತಾಂಡಾಗಳ ಅಭಿವೃದ್ಧಿಗಾಗಿ ಒಟ್ಟು 20 ಕೋಟಿ ರೂ. ಒದಗಿಸಲು ನಾನು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.

ಕಾಂಗ್ರೆಸ್‌ ನಾಯಕ ಬಾಬು ಹೊನ್ನಾನಾಯಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ದೇವಿ ತಾಂಡಾದ ಅನೀಲ್‌ ಮಹಾರಾಜರು ನೇತೃತ್ವ ವಹಿಸಿದ್ದರು. ನಂತರ ತಾಪಂ ಅಧ್ಯಕ್ಷೆ ಯಶೋಧಾ ಎನ್‌. ರಾಠೊಡ್‌, ತಾಲೂಕು ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ನೀಲಕಂಠ ರಾಠೊಡ್‌, ಜಿಪಂ ಸದಸ್ಯ ರಾಜಶೇಖರ್‌ ಮೇತ್ರೆ ಮಾತನಾಡಿದರು.

ಚಿಕನಾಗಾಂವ್‌ ಬಂಜಾರಾ ತಾಂಡಾದ ಲೋಕೇಶ್‌ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ಯುವ ಮುಖಂಡ ಶರಣು ಸಲಗರ, ದಾವೂದ್‌, ಶರಣು ಅಲಗೂಡ್‌, ಧನಸಿಂಗ್‌ ರಾಠೊಡ್‌, ಬೀದರ ಉತ್ತರ ಕ್ಷೇತ್ರದ ನಾಡ ತಹಶೀಲ್ದಾರ್‌ ಘಮಾವತಿಬಾಯಿ ಆರ್‌. ರಾಠೊಡ, ಏಕಲೂರ ಗ್ರಾಪಂ ಅಧ್ಯಕ್ಷೆ ಹೇಮಾವತಿ ಟಿ. ಜೋಗೆ, ಉಪಾಧ್ಯಕ್ಷೆ ಮಹಾದೇವಿ ಎಸ್‌. ರಾಠೊಡ, ತಾಪಂ ಸದಸ್ಯೆ ತಾರಾಬಾಯಿ ಆರ್‌. ರಾಠೊಡ, ಎಸ್‌.ಆರ್‌. ನಾಯಕ, ವಿಠಲ ಕೆ. ರಾಠೊಡ, ಜೇಮಸಿಂಗ್‌ ಜಿ. ರಾಠೊಡ್‌, ಸುಶೀಲಾಬಾಯಿ ಜಿ. ರಾಠೊಡ್‌, ರಾಮಚಂದ್ರ ಜಿ. ರಾಟೋಡ, ಸಂಜುಕುಮಾರ ನಾಯಕ, ಪ್ರೇಮಸಿಂಗ್‌ ಚವ್ಹಾಣ ಇದ್ದರು. ನವಲಿಂಗ ಪಾಟೀಲ ನಿರೂಪಿಸಿದರು. ಕಿಶನ್‌ ಚವ್ಹಾಣ ವಂದಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಾಮುನಗರ ನಿವಾಸಿ ಭೀಮಸಿಂಗ್‌ ಎಸ್‌. ರಾಠೊಡ್‌ ಹಾಗೂ ಶ್ರೀ ಹಾಮುಲಾಲ ದೇವಸ್ಥಾನ ಸುತ್ತಲೂ ಸ್ಟೀಲ್‌ ಗ್ರೀಲ್‌ ಅಳವಡಿಸಿದ ದಾನಿಗಳನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.