ಕೆಲಸಕ್ಕೆ ಬಾರದ ಕಸದ ತೊಟ್ಟಿ

ಕಸಮುಕ್ತ ನಗರಕ್ಕಾಗಿ ಲಕ್ಷಾಂತರ ರೂ. ವೆಚ್ಚ ಕೆಲವೇ ತಿಂಗಳಲ್ಲಿ ಹಾಳಾದ ತೊಟ್ಟಿಗಳು

Team Udayavani, Mar 7, 2020, 3:23 PM IST

7-March-13

ಬಸವಕಲ್ಯಾಣ: ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಸುವ ನಿಟ್ಟಿನಲ್ಲಿ ಅಲ್ಲಲ್ಲಿ ಬೀಳುವ ಕಸವನ್ನು ಒಂದಡೆ ಸಂಗ್ರಹಿಸುವ ಉದ್ದೇಶದಿಂದ ನಗರಸಭೆಯಿಂದ ಲಕ್ಷಾಂತರ ರೂ. ಖರ್ಚು ಮಾಡಿ, ಅಲ್ಲಲ್ಲಿ ಕಸದ ತೊಟ್ಟಿಗಳು ಅಳವಡಿಸಲಾಗಿತ್ತು. ಆದರೆ ಕೆಲವೇ ತಿಂಗಳಲ್ಲಿ ಕಸದ ತೊಟ್ಟಿಗಳು ಕೆಲಸಕ್ಕೆ ಬಾರದಂತೆ ಆಗಿರುವುದು ಸಾರ್ವಜನಿಕರು ಮತ್ತು ಪರಿಸರ ಪ್ರೇಮಿಗಳ ಆಕ್ರೋಷಕ್ಕೆ ಕಾರಣವಾಗಿದೆ.

ಕಸಮುಕ್ತ ಕಲ್ಯಾಣ ಯೋಜನೆಯಡಿ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ, ಹೋಟೆಲ್‌, ಶಾಲೆ, ಮಾರ್ಕೇಟ್‌ ಸೇರಿದಂತೆ ನಗರಸಭೆ ವ್ಯಾಪ್ತಿಯ ಬಡಾವಣೆಗಳ ಎರಡು ಬದಿಯಲ್ಲಿ, ಮನೆ ಮುಂದೆ ಮತ್ತು ನಿತ್ತ ಕಸ ಸಂಗ್ರಹ ವಾಗುವ ಸಾರ್ವಜನಿಕರ ಸ್ಥಳಗಳಲ್ಲಿ ಕಸದ ತೊಟ್ಟಿಗಳನ್ನು ಅಳವಡಿಸಲಾಗಿತ್ತು. ಆದರೆ ನಗರ ಸ್ವಚ್ಛವಾಗುವ ಮುನ್ನವೇ ಕಸದ ತೊಟ್ಟಿಗಳು ಉಪಯೋಗಕ್ಕೆ ಬಾರದಂತೆ ಹಾಳಾಗುತ್ತಿವೆ.

ಈಗಾಗಲೇ ನಾರಾಯಣಪೂರ ಕ್ರಾಸ್‌ ಹಾಗೂ ನಗರದ ಶಾಲಾ-ಕಾಲೇಜು ಪ್ರಮುಖ ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಕಸದ ತೊಟ್ಟಿಗಳಲ್ಲಿ ಕೆಲವು ಮುರಿದು ಹೋಗಿವೆ, ಕೆಲವು ಬಿದ್ದಿವೆ. ಕೆಲವು ಕಸದ ತೊಟ್ಟಿ ಹಾಳಾಗಿದ್ದು, ಸ್ಟ್ಯಾಂಡ್ ಮಾತ್ರ ಉಳಿದುಕೊಂಡಿವೆ. ಇದನ್ನು ಗಮನಿಸಿದರೆ ಗುಣಮಟ್ಟದ ಕೆಲಸ ಮಾಡದೆ, ಕಾಟಾಚಾರಕ್ಕಾಗಿ ಕಸದ ತೊಟ್ಟಿಗಳನ್ನು ಅಳವಡಿಸಿರುವುದು ಕಂಡುಬರುತ್ತಿದೆ.

ಬೆಳಗಾದರೆ ಸಾಕು ನಗರಸಭೆ ಸಿಬ್ಬಂದಿ ಬಡಾವಣೆ ಮತ್ತು ರಸ್ತೆಗಳಲ್ಲಿನ ಕಸದ ಜೊತೆಗೆ, ಒಂದು-ಎರಡು ಹಾಳಾದ ಕಸದ ತೊಟ್ಟಿಗಳನ್ನು ನಿತ್ಯ ಟ್ರ್ಯಾಕ್ಟರ್‌ ನಲ್ಲಿ ತುಂಬಿಕೊಂಡು ಹೋಗುವುದು ಸಾಮಾನ್ಯವಾಗಿ ಕಂಡುಬರುತ್ತದೆ. ಇನ್ನೂ ಕೆಲವು ತಿಂಗಳುಗಳಲ್ಲಿ ಬಡಾವಣೆ ಮತ್ತು ನಗರದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಲಾದ ಎಲ್ಲ ಕಸದ ತೊಟ್ಟಿಗಳು ಸಂಪೂರ್ಣ ಉಪಯೋಗಕ್ಕೆ ಬರದಂತೆ ಹಾಳಾಗುತ್ತವೆ ಎಂಬುವುದು ನಿವಾಸಿಗಳ ಮತ್ತು ಸಾರ್ವಜನಿಕರು
ಅಭಿಪ್ರಾಯವಾಗಿದೆ.

ಒಟ್ಟಿನಲ್ಲಿ ಸ್ವಚ್ಛತೆಗಾಗಿ ಲಕ್ಷಾಂತ ರೂ. ಖರ್ಚು ಮಾಡಿ ಅಳವಡಿಸಲಾದ ಕಸದ ತೊಟ್ಟಿಗಳು ಕೆಲವೇ ತಿಂಗಳಲ್ಲಿ ಹಾಳಾಗಿರುವುದರಿಂದ ಅಳವಡಿಸಿಯೂ ವ್ಯರ್ಥವಾದಂತಾಗಿದೆ. ಹೀಗಾಗಿ ಕಸ ಸಂಗ್ರಹಕ್ಕಾಗಿ ತಾತ್ಕಾಲಿಕ ಕಸದ ತೊಟ್ಟಿ ಅಳವಡಿಸುವುದನ್ನು ಬಿಟ್ಟು, ಶಾಶ್ವತ ಪರಿಹಾರ ಮಾಡಬೇಕು ಎಂಬುದು ನಗರ ನಿವಾಸಿಗಳ ಒತ್ತಾಯವಾಗಿದೆ.

ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.