![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಬಸವಣ್ಣನ ಸಪ್ತಸೂತ್ರ ಅನುಸರಿಸಿದರೆ ಜೀವನ ಸಾರ್ಥಕ
Team Udayavani, Aug 21, 2018, 1:24 PM IST
![bid-2.jpg](https://www.udayavani.com/wp-content/uploads/2018/08/21/bid-2-620x278.jpg)
ಹುಮನಾಬಾದ: ವಿಶ್ವಗುರು ಬಸವಣ್ಣನ ಸಪ್ತಸೂತ್ರ ಅಳವಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ಹಿರಿಯರು ಆ ದಾರಿಯಲ್ಲಿ ನಡೆದು ಮಕ್ಕಳಿಗೆ ಪ್ರೇರಣೆ ಆಗಬೇಕು ಎಂದು ಜಿಪಂ ಮಾಜಿ ಅಧ್ಯಕ್ಷೆ ಸಂತೋಷಮ್ಮ ಕೌಡ್ಯಾಳೆ ಹೇಳಿದರು. ಇಲ್ಲಿನ ಬಸವನಗರ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರತಿಷ್ಠಾನ ಶ್ರಾವಣ ಮಾಸ ನಿಮಿತ್ತ ಹಮ್ಮಿಕೊಂಡಿರುವ “ಮನೆ ಮನೆಯಲ್ಲಿ
ಬಸವ ಬೆಳಗು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಚಿಟಗುಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಮಹಾದೇವ ಉಪ್ಪಿನ್ ವಿಶೇಷ ಉಪನ್ಯಾಸ ನೀಡಿ, ಬಸವಾದಿ
ಶರಣರು ನುಡಿದಂತೆ ನಡೆದು ತೋರಿಸಿದರೆಂಬ ಕಾರಣಕ್ಕೆ ಭಾರತ ಮಾತ್ರವಲ್ಲ, ಇಡೀ ವಿಶ್ವವೇ ಅವರ ತತ್ವಗಳನ್ನು ಒಪ್ಪಿ ಅಪ್ಪಿಕೊಂಡಿದೆ. ಇಲ್ಲಿನ ಎಲ್ಲ ಬಸವ ಸಂಘಟನೆಗಳು ಅದಕ್ಕೆ ಬದ್ಧವಾಗಿವೆ ಎಂಬುದಕ್ಕೆ ತಡೆರಹಿತ ಬಸವತತ್ವ ಪ್ರಚಾರ ನಡೆಯುತ್ತಿರುವುದೇ ಸಾಕ್ಷಿ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ವೀರಭದ್ರೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ನಾಗೇಂದ್ರ ಧುಮ್ಮನಸೂರೆ ಮಾತನಾಡಿ, ಕನ್ನಡ ಸಾಹಿತ್ಯದಿಂದ ವಚನ ಸಾಹಿತ್ಯವನ್ನು ಬದಿಗಿಟ್ಟರೇ ಅದರ ತೂಕ ಕಡಿಮೆಯಾಗುತ್ತದೆ. ಬಸವಾದಿ ಶರಣರ ಕಾಯಕ ತತ್ವ ಮೆಚ್ಚಿ 12ನೇ ಶತಮಾನದಲ್ಲಿ ವಿವಿಧ ರಾಷ್ಟ್ರಗಳ ಅರಸರು ಕಲ್ಯಾಣದತ್ತ ಹರಿದುಬಂದದ್ದೇ ಇದಕ್ಕೆ ಸಾಕ್ಷಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ತಾಲೂಕು ಅಧ್ಯಕ್ಷ ಶರಣ ಪಂಡಿತ ಬಾಳೂರೆ ಮಾತನಾಡಿ, ಶರಣರು ವಚನಗಳನ್ನು ಏನೋ ಹೇಳಬೇಕೆಂದು ರಚಿಸಿರುವಂಥವಲ್ಲ. ಆ ವಚನಗಳು ವೈಜ್ಞಾನಿಕ ನೆಲೆಗಟ್ಟಿನಲ್ಲಿ ರಚನೆಯಾಗಿರುವಂಥವು. ಅವರ ತತ್ವಗಳನ್ನು ವಿಶ್ವದ ಯಾವುದೇ ಧರ್ಮ ತಿರಸ್ಕರಿಸಲು ಸಾಧ್ಯವಾಗದಂಥ ಸಂದೇಶ ಸಾರಿದ್ದಾರೆ ಎಂದರು.
ಸಾಂತಪ್ಪಾ ದುಬಲಗುಂಡಿ, ಅಣ್ಣಾರಾವ್ ಕುಲಕರ್ಣಿ, ಮಲ್ಲಿಕಾರ್ಜುನ ನೀಲಕಂಠೆ, ಕೆ.ಎಂ. ಪಾಟೀಲ, ಮಂಜುನಾಥ ಲಗಶೆಟ್ಟೆ, ಪ್ರಿಮಾ ಕೌಡಿಯಾಳ, ಸುಜಾತಾ ಸಜ್ಜನ ಶೆಟ್ಟಿ, ಶ್ರೀದೇವಿ ಹುಗ್ಗೆ, ಸರಸ್ವತಿ ಧನ್ನೂರೆ, ವಿಜಯಲಕ್ಷ್ಮೀ, ಪ್ರಭಾವತಿ, ಸುಮಿತ್ರಾ ಇದ್ದರು. ಗೌರಮ್ಮ ಬಾಲಕುಂದೆ ಪ್ರಾರ್ಥಿಸಿದರು. ತೀರ್ಥಪ್ಪಾ ಭೀಮಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಶರಣೆ ಶ್ರೀದೇವಿ ಮೋತಕಪಳ್ಳಿ ನಿರೂಪಿಸಿದರು. ಅಂಜನಾದೇವಿ ದುಬಲಗುಂಡಿ ವಂದಿಸಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.