ಬೆಳ್ಳಿ ಹಬ್ಬಕ್ಕೆ ಬಸವೇಶ್ವರ ಕಾಲೇಜು ಸಿದ್ಧ


Team Udayavani, Mar 16, 2019, 11:25 AM IST

bid-2.jpg

ಬಸವಕಲ್ಯಾಣ: ನಗರದ ಹೌಸಿಂಗ್‌ ಬೋರ್ಡ್‌ ಕಾಲೋನಿಯ ಬಸವೇಶ್ವರ ಚಿತ್ರಕಲಾ ಮಹಾವಿದ್ಯಾಲಯದ ಬೆಳ್ಳಿ ಹಬ್ಬ ಕಾರ್ಯಕ್ರಮ ಮಾ.29ರಂದು ಸಂಜೆ 7 ಗಂಟೆಗೆ ಹಳೆ ತಹಶೀಲ್‌ ಕಚೇರಿ ಆವರಣದಲ್ಲಿ ನಡೆಯಲಿದ್ದು, ತನ್ನಿಮಿತ್ತ ಸಮುದಾಯ ಭವನದಲ್ಲಿ ಮೂರು ದಿನಗಳ ಕಾಲ ಚಿತ್ರಕಲಾ ಪ್ರದರ್ಶನ ಆಯೋಜಿಸಲಾಗಿದೆ.

ಸರ್ಕಾರ ಹಾಗೂ ಸಂಘ ಸಂಸ್ಥೆಗಳ ಸಹಾಯವಿಲ್ಲದಿದ್ದರೂ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವ ಉದ್ದೇಶದಿಂದ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಬಸವೇಶ್ವರ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮ ನಿಮಿತ್ತ ಬಳಕೆಗೆ ಬಾರದ ವಸ್ತುಗಳಿಂದ ಕಲಾಕೃತಿಗಳನ್ನು ತಯಾರಿಸುವ ಕಾರ್ಯ ಭರದಿಂದ ನಡೆಯುತ್ತಿದೆ. ಈಗಾಗಲೇ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ ನಡೆಯುತ್ತಿದ್ದು, ವಿಜೇತರಿಗೆ ಬಹುಮಾನ ನೀಡಲಾಗುತ್ತಿದೆ.

1994ರ ಜೂನ್‌ ತಿಂಗಳಲ್ಲಿ ಕೆಲವೇ ವಿದ್ಯಾರ್ಥಿಗಳಿಂದ ಪ್ರಾರಂಭವಾದ ಈ ಕಾಲೇಜು ಇಂದು ನೂರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿ ಬೆಳೆದಿದೆ. ಇಲ್ಲಿ ಅಭ್ಯಾಸ ನಾಡಿದ ಬಹುತೇಕ ವಿದ್ಯಾರ್ಥಿಗಳು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಚಿತ್ರಕಲಾ ಶಿಕ್ಷಕರಾಗಿ ಮತ್ತು ಸ್ವಯಂ ಉದ್ಯೋಗಿಗಳಾಗಿ ಜೀವನ ಕಟ್ಟಿಕೊಂಡಿದ್ದಾರೆ. ಪ್ರತಿವರ್ಷ ಮಾರ್ಚ್‌ ನಲ್ಲಿ ನಡೆಯುವ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಾಡಿನ ಹಿರಿಯ ಕಲಾವಿದರಾದ ಶರಂಕಗೌಡ ಬೆಟ್ಟದೂರ, ಜೆ.ಎಸ್‌.ಖಂಡೇರಾವ್‌, ವಿ.ಜಿ.ಅಂದಾನಿ, ಬಸವರಾಜ ಹಾಗೂ ಅನೇಕ ಖ್ಯಾತನಾಮ ಕಲಾವಿದರು ಆಗಮಿಸಿ ಪ್ರಾತ್ಯಕ್ಷಿಕೆ-ಕಲಾಕೃತಿ ರಚನೆ ಮಾಡಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುತ್ತಾರೆ. ಇದಕ್ಕೆ ಇಲ್ಲಿ ಸಂಗ್ರಹಿಸಿದ ಚಿತ್ರ ಕಲಾಕೃತಿಗಳೇ ನಿದರ್ಶನ.

ಪ್ರತಿವರ್ಷ ಬೆಂಗಳೂರು ಹಾಗೂ ಕಲಬುರಗಿಯಲ್ಲಿ ನಡೆಯುವ ಚಿತ್ರಸಂತೆಯಲ್ಲಿ ಈ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಕಲಾಕೃತಿಗಳು ಮತ್ತ ಕರಕುಶಲ ವಸ್ತುಗಳನ್ನು ಪ್ರದರ್ಶಿಸಿ ಕಲಾಸಕ್ತರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಹಾಗಾಗಿ ಬೆಳ್ಳಿಹಬ್ಬ ಕಾರ್ಯಕ್ರಮ ನಿಮಿತ್ತ ಇಲ್ಲಿ ಕಲಿತ ವಿದ್ಯಾರ್ಥಿಗಳು ಆಗಮಿಸಿ ಉಪಯೋಗಕ್ಕೆ ಬಾರದ ವಸ್ತುಗಳನ್ನು ಬಳಸಿಕೊಂಡು ಮತ್ತು ಕ್ರಾಫ್ಟ್‌ ಮತ್ತು ವಿದ್ಯಾರ್ಥಿನಿಯರು ದಾರದಿಂದ ವಿವಿಧ ಗೊಂಬೆ, ಗೃಹ ಅಲಂಕಾರಿಕ ಸಾಮಗ್ರಿಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಅವು ಕಡಿಮೆ ದರದಲ್ಲಿ ಕಲಾಸಕ್ತರಿಗೆ ಸಿಗುವಂತೆ ಕಾರ್ಯ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.

ಹಳೆ ವಿದ್ಯಾರ್ಥಿಗಳು ಸಿಮೆಂಟ್‌ನಿಂದ ತಯಾರಿಸಿದ ಹಾರಕೂಡದ ಶ್ರೀ ಚನ್ನಬಸವ ಶಿವಯೋಗಿಗಳು ಮತ್ತು ಬಸವಣ್ಣನವರ ಮೂರ್ತಿಗಳು ಗಮನ ಸೆಳೆಯುತ್ತಿವೆ. ಕಲಾನಿಕೇತನವು ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೂ ಉತ್ತಮ ಬೋಧನೆ ಮಾಡುತ್ತ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ 25 ವರ್ಷಗಳಿಂದ ಶ್ರಮಿಸುತ್ತಿರುವುದು ಶ್ಲಾಘನೀಯ ಕಾರ್ಯ. 

ಕಲಾಕೃತಿ ಸಂಗ್ರಹ: ನಾಡಿನ ಹಿರಿಯ ಕಲಾವಿದರಾದ ಎಂ.ಬಿ.ಪಾಟೀಲ, ಎಂ.ಎಫ್‌.ಹುಸೇನ್‌, ಎಸ್‌.ಎಂ.ಪಂಡೀತ ಹಾಗೂ ಅನೇಕ ಕಲಾವಿದರ ಲಕ್ಷಾಂತ ರೂ. ಮೌಲ್ಯದ ಕಲಾಕೃತಿಗಳು, ಪ್ರತಿಕೃತಿ ಮತ್ತು ಪೋಸ್ಟರ್‌ಗಳನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಅಭ್ಯಾಸಕ್ಕಾಗಿ ಇಲ್ಲಿ ಸಂಗ್ರಹಿಸಿ ಇಡಲಾಗಿದೆ. 

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ನಡುವೆಯೂ ಸ್ವಾವಲಂಬಿ ಬದುಕಿಗೆ ಚಿತ್ರಕಲೆ ಪೂರಕವಾಗಿದೆ. ಆದರೆ ಸರ್ಕಾರದ ನಿರ್ಲಕ್ಷéದಿಂದ ಕಲಾ ಸಂಸ್ಥೆಗಳು ಮುಚ್ಚುವ ಸ್ಥಿತಿಯಲ್ಲಿವೆ. ಹಾಗಾಗಿ ಸರ್ಕಾರ ಅರ್ಹತೆಯ ಮೇಲಾದರು, ಕಲಾ ಕಾಲೇಜುಗಳಿಗೆ ಅನುದಾನ ನೀಡಬೇಕು. ಪ್ರತಿಯೊಂದು ಶಾಲೆಯಲ್ಲಿ ಕಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು.  ಪ್ರಭುಲಿಂಗಯ್ನಾ ಟಂಕಸಾಲಿ ಮಠ, ಪ್ರಾಚಾರ್ಯರು, ಬಸವೇಶ್ವರ ಚಿತ್ರಕಲಾ ಮಹಾವಿದ್ಯಾಲಯ ಪ್ರಾಚಾರ್ಯರ ಸತತ ಪರಿಶ್ರಮ ಹಾಗೂ ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದಾಗಿ ಇಂದು ನೂರಾರು ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಸ್ಥಾನಮಾನದಲ್ಲಿ ಇರಲು ಸಾಧ್ಯವಾಗಿದೆ. ಯಾವುದೇ ನೇಮಕವಾದರು ಈ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ನೇಮಕವಾಗಿರುವುದೇ ಇವರ ಕಾರ್ಯಕ್ಕೆ ಸಾಕ್ಷಿಯಾಗಿದೆ.  ಯಲ್ಲಾಲಿಂಗ ಪೂಜಾರಿ, ಕಲಾಶಿಕ್ಷಕ-ಹಳೆ ವಿದ್ಯಾರ್ಥಿ

ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.