ಬೀದರ-ಔರಾದ್ ರಸ್ತೆ ದುರಸ್ತಿಗಾಗಿ ರಸ್ತೆ ತಡೆ
Team Udayavani, Oct 6, 2020, 3:57 PM IST
ಔರಾದ: ಹದಗೆಟ್ಟ ಬೀದರ-ಔರಾದ ರಸ್ತೆ ಸುಧಾರಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ಸೋಮವಾರ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಕಾರ್ಯಕರ್ತರು ಉಪ ಬಂಧಿಖಾನೆ ಬಳಿ ಬೀದರ-ಔರಾದ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ತಾಲೂಕು ಪ್ರಮುಖ ಹಾವಪ್ಪಾ ದ್ಯಾಡೆ ಮಾತನಾಡಿ, ಬೀದರ-ಔರಾದ ರಸ್ತೆ ಸುಧಾರಣೆ ಮಾಡುವಂತೆ ಸಂಘ ಸಂಸ್ಥೆ ಮುಖಂಡರು ಪಾದಯಾತ್ರೆ, ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ಹೆದ್ದಾರಿ ತಡೆ ನಡೆಸಲಾಗುತ್ತಿದೆ ಎಂದರು.
ಬೀದರ ಸಂಸದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕೂಡಾ ಔರಾದ ತಾಲೂಕಿನವರಾಗಿದ್ದಾರೆ. ಆದರೂ ರಸ್ತೆ ಸುಧಾರಣೆ ಮಾಡುವಲ್ಲಿ ಇಬ್ಬರೂ ನಾಯಕರು ನಿರಾಸಕ್ತಿ ತೋರುತ್ತಿದ್ದಾರೆ. ರಸ್ತೆ ಹಾಳಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ಬಸ್, ಇತರೆ ವಾಹನಗಳು ವಡಗಾಂವ ಮಾರ್ಗವಾಗಿ ಬೀದರಗೆ ಹೋಗುತ್ತಿವೆ. ಆ ರಸ್ತೆ ಕೂಡಾ ಹಾಳಾಗಿದೆಎಂದು ಆಕ್ರೋಶ ವ್ಯಕ್ತಪಡಿಸಿದರು.
ವಾರದಲ್ಲಿ ಬೀದರ ಔರಾದ ರಸ್ತೆ ಸುಧಾರಣೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೀದರ ಸಂಸದರು ಮುಂದಾಗಬೇಕು. ಇಲ್ಲವಾದಲ್ಲಿಅವರಿಬ್ಬರ ಪ್ರತಿಕೃತಿ ದಹನ ಮಾಡಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಅಂಬಾದಾಸ ನೆಳಗೆ, ಬಾಲಾಜಿ ಸಂತಪುರ, ನವನಾಥ ಮೇತ್ರೆ, ಉತ್ತಮ ಕಾಂಬಳೆ, ಕಿರಣ ಪ್ರಕಾಶ, ರಾಜು ಜೋಜನಾ, ಅನಿಲ ಮೇತ್ರೆ, ರಮೇಶ ವಾಘಮಾರೆ, ಅಶೋಕ ಶೆಂಬೆಳ್ಳೆ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ