ಬಸವ ಉತ್ಸವ ಮರೆತ ಸರ್ಕಾರ

ಸಿದ್ಧತೆ ಆರಂಭಿಸದ ಜಿಲ್ಲಾಡಳಿತ ಬಸವಾನುಯಾಯಿಗಳಿಗೆ ನಿರಾಶೆ

Team Udayavani, Jan 11, 2020, 11:40 AM IST

11-January-16

ಬೀದರ: ಮೈಸೂರು ದಸರಾ, ಹಂಪಿ ಮತ್ತು ಆನೆಗೊಂದಿ ಉತ್ಸವಗಳನ್ನು ಅದ್ಧೂರಿಯಾಗಿ ಆಚರಿಸುತ್ತಿರುವ ರಾಜ್ಯ ಸರ್ಕಾರ ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲಿ “ಬಸವ ಉತ್ಸವ’ ಆಚರಣೆಯನ್ನು ಮರೆತಿದೆ.

ಬಸವ ಉತ್ಸವಕ್ಕಾಗಿ ಜಿಲ್ಲಾಡಳಿತದಿಂದ ಇದುವರೆಗೆ ಯಾವುದೇ ಸಿದ್ಧತೆ ನಡೆಯದಿರುವುದು ಬಸವಾನುಯಾಯಿಗಳಲ್ಲಿ ಅಸಮಾಧಾನ ಮೂಡಿಸಿದೆ. ಪ್ರಕೃತಿ ವಿಕೋಪ, ಚುನಾವಣೆ ಮತ್ತು ರಾಜಕೀಯ ಬೆಳವಣಿಗೆಗಳಿಂದ ಬಸವ ಉತ್ಸವ ಆಚರಣೆ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಆದರೆ, ಈ ವರ್ಷವೂ ಉತ್ಸವ ನಡೆಯುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆ-ಬೆಳೆ ಆಗಿದ್ದು, ಯಾವುದೇ ಸಮಸ್ಯೆಗಳು ಅಥವಾ ಚುನಾವಣೆಗಳು ಈಗಿಲ್ಲ. ಆದರೂ ಇದುವರೆಗೆ ಉತ್ಸವ ಆಚರಿಸುವ ಸಂಬಂಧ ಆಡಳಿತದಿಂದ ಯಾವುದೇ ಚಟುವಟಿಕೆಗಳು ಆರಂಭಗೊಳ್ಳದಿರುವುದರಿಂದ ಮತ್ತೂಮ್ಮೆ ಬಸವ ಉತ್ಸವ ನಡೆಯದಿರುವ ಸಾಧ್ಯತೆ ದಟ್ಟವಾಗಿದೆ.

ಸರ್ಕಾರಗಳ ನಿರ್ಲಕ್ಷ್ಯ: ಬಸವಾದಿ ಶರಣರ ವಚನ ಸಾಹಿತ್ಯದ ಮೇಲೆ ಬೆಳಕು ಚೆಲ್ಲುವುದರ ಜತೆಗೆ ನೆಲದ ಸಂಸ್ಕೃತಿ, ಗತ ವೈಭವವನ್ನು ನಾಡಿಗೆ ಪ್ರತಿಬಿಂಬಿಸಲು ಶರಣರ ಪುಣ್ಯಭೂಮಿ ಬಸವಕಲ್ಯಾಣದಲ್ಲಿ 2009ರಿಂದ ಐತಿಹಾಸಿಕ ಬಸವ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ, ವಿವಿಧ ಕಾರಣಗಳಿಂದ ಕೈಬಿಡುತ್ತಲೇ ಬರಲಾಗುತ್ತಿದೆ. 12 ವರ್ಷಗಳಲ್ಲಿ ಐದು ಬಾರಿ ಮಾತ್ರ ಉತ್ಸವ ನಡೆದಿದೆ. ಬಸವ ತತ್ವದ ಮೇಲೆ ಆಡಳಿತ ನಡೆಸುತ್ತೇವೆ ಎನ್ನುವ ಸರ್ಕಾರಗಳು ಮಾತ್ರ ಬಸವಣ್ಣನನ್ನೇ ಮರೆಯುತ್ತಿರುವುದು ಕಲ್ಯಾಣ ನಾಡಿನ ಬಸವ ಭಕ್ತರರಲ್ಲಿ ಆಕ್ರೋಶ ಹೆಚ್ಚಿಸಿದೆ. ಬಸವ ಉತ್ಸವವು ರಾಜ್ಯದ ಇತರ ಉತ್ಸವಗಳಂತೆ ಬರೀ ಜಾತ್ರೆ ಅಥವಾ ಸಂಭ್ರಮಕ್ಕಾಗಿ ಆಚರಣೆಯಲ್ಲ, ಶರಣ ಸಂಸ್ಕೃತಿಯ ಪ್ರತೀಕ. ಬಸವಾದಿ ಶರಣರು ಸಾರಿದ ಸಮಾನತೆ, ಭಾವೈಕ್ಯತೆಯ ತತ್ವ ಪ್ರಚಾರ, ಪ್ರಸಾರದ ಉದ್ದೇಶ ಹೊಂದಿದೆ.

ಪ್ರತಿ ವರ್ಷ ಕಡ್ಡಾಯವಾಗಿ ಉತ್ಸವ ಆಚರಣೆ ಮಾಡಬೇಕಿತ್ತು. ಆದರೂ ಬಸವ ಉತ್ಸವವನ್ನು ಒಮ್ಮೆ ಭೀಕರ ಬರ, ಮತ್ತೂಂದು ವರ್ಷ ಅತಿವೃಷ್ಟಿಯಿಂದ ರದ್ದುಗೊಳಿಸಿದರೆ, ಮತ್ತೂಮ್ಮೆ ಚುನಾವಣೆ, ರಾಜಕೀಯ ನಾಯಕರ ಡೊಂಬರಾಟಕ್ಕೆ ಬಲಿಯಾಗುತ್ತ ಬಂದಿದೆ.

ಮೈಸೂರು ದಸರಾ, ಹಂಪಿ, ಆನೆಗೊಂದಿ, ಕಿತ್ತೂರು ಹಾಗೂ ಕರಾವಳಿ ಉತ್ಸವದಂತೆ ಬಸವ ಉತ್ಸವವು ಅಷ್ಟೇ ಪ್ರಾಮುಖ್ಯತೆ ಪಡೆದಿದೆ. ಅತಿವೃಷ್ಟಿ-ಅನಾವೃಷ್ಟಿ ಏನೇ ಇದ್ದರೂ ಈ
ಉತ್ಸವಗಳನ್ನು ಮುಂದುವರಿಸಿಕೊಂಡು ಬರುತ್ತಿರುವ ಸರ್ಕಾರ ಬಸವ ಉತ್ಸವದ ವಿಷಯದಲ್ಲಿ ಮಾತ್ರ ನಿರ್ಲಕ್ಷ್ಯ ತೋರಿಸುತ್ತಿರುವುದು ವಿಪರ್ಯಾಸ.

ಬಸವ ನಿಷ್ಠರ ಕೆಂಗಣ್ಣು: ಈ ಹಿಂದೆ 2014 ಮತ್ತು 2015ರ ಬಳಿಕ 2018ರಲ್ಲಿ ಕೊನೆಯ ಉತ್ಸವ ನಡೆಸಲಾಗಿತ್ತು. ಬಸವ ಉತ್ಸವವನ್ನು ಪ್ರತಿ ವರ್ಷ ಆಚರಿಸಿಕೊಂಡು ಬರಲಾಗುವುದು ಎಂದು ಪ್ರತಿ ಸರ್ಕಾರಗಳು ನೀಡುವ ಭರವಸೆಗಳು ಹುಸಿಯಾಗುತ್ತಿವೆ.
ಬಸವ ಉತ್ಸವಕ್ಕೆ ರಾಜ್ಯ ಸರ್ಕಾರದಿಂದ 30 ಲಕ್ಷ ರೂ. ಪ್ರತಿ ವರ್ಷ ಬಿಡುಗಡೆ ಮಾಡಲಾಗುತ್ತದೆ. ಈ ಹಣವನ್ನು ಮಾರ್ಚ್‌ ಅಂತ್ಯದೊಳಗೆ ಖರ್ಚು ಮಾಡುವುದು ಅನಿವಾರ್ಯ. ಈಗ ಒಂದೂವರೆ ತಿಂಗಳು ಕಾಲಾವಕಾಶ ಉಳಿದಿದ್ದರೂ ಈ ಬಗ್ಗೆ ಆಡಳಿತದಿಂದ ಸಿದ್ಧತೆಯೇ ಆರಂಭಗೊಂಡಿಲ್ಲ. ಜಿಲ್ಲಾಡಳಿತ ಸಿದ್ಧತೆಗಳನ್ನು ನಡೆಸದಿರುವುದರಿಂದ ಈ ವರ್ಷವೂ ಉತ್ಸವ ಆಚರಣೆ ರದ್ದುಗೊಳ್ಳುವುದು ಸ್ಪಷ್ಟವಾಗುತ್ತಿದೆ. ಇದು ನಿಜವೇ ಆದಲ್ಲಿ ಸರ್ಕಾರ ಬಸವ ನಿಷ್ಠರ ಕೆಂಗಣ್ಣಿಗೆ ಗುರಿಯಾಗುವುದಂತೂ ಸತ್ಯ.

ಬಸವ ಉತ್ಸವ ಆಚರಣೆ ಕುರಿತಂತೆ ಇನ್ನೂ ನಿರ್ಣಯ
ಆಗಬೇಕಿದೆ. ಹಾಗಾಗಿ ಈವರೆಗೆ ಯಾವುದೇ ಸಿದ್ಧತೆ ಆರಂಭ ಮಾಡಿಲ್ಲ. ಈ ಹಿಂದಿನಂತೆ ಫೆಬ್ರವರಿ ತಿಂಗಳಲ್ಲಿ ಉತ್ಸವವನ್ನು ಅರ್ಥಪೂರ್ಣ ಮತ್ತು ಅದ್ಧೂರಿಯಾಗಿ ಆಚರಿಸಲಾಗುವುದು. ಈ ಸಂಬಂಧ ಉಸ್ತುವಾರಿ ಸಚಿವರು, ಶಾಸಕರ ಜತೆಗೆ ಚರ್ಚಿಸಿ ದಿನಾಂಕದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು.
ಡಾ| ಎಚ್‌.ಆರ್‌ ಮಹಾದೇವ
ಜಿಲ್ಲಾಧಿಕಾರಿ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.