ಗೃಹರಕ್ಷಕದಳದ “ಕಾಸ್‌’ಬಾತ್‌

ಜಿಲ್ಲೆಯಲ್ಲಿದ್ದಾರೆ ಸುಮಾರು 952 ಗೃಹರಕ್ಷಕ ಸಿಬ್ಬಂದಿಡ್ನೂಟಿ ಹಾಕಲು ಯುನಿಟ್‌ ಹೆಡ್‌ ಗಳ ಕಿರಿಕಿರಿ

Team Udayavani, Jan 25, 2020, 11:47 AM IST

25-January-5

ಬೀದರ: ತುರ್ತು ಸಂದರ್ಭದಲ್ಲಿ ರಕ್ಷಣೆ ಮತ್ತು ಸಮಾಜ ಸೇವೆ ಮಾಡುತ್ತಿರುವ ಗೃಹ ರಕ್ಷಕರಿಗೆ “ಡ್ನೂಟಿ’ ಹಾಕಲು ಯೂನಿಟ್‌ ಹೆಡ್‌ಗಳು ಸತಾಯಿಸುತ್ತಾರೆಂಬ ಆರೋಪಗಳು ಕೇಳಿ ಬರುತ್ತಿವೆ.

ಶಿಸ್ತುಬದ್ಧ, ಸಮವಸ್ತ್ರಧಾರಿ ಸ್ವಯಂ ಸೇವಕರ ಪಡೆಯಾಗಿರುವ ಗೃಹ ರಕ್ಷಕ ದಳ ಮೂರ್‍ನಾಲ್ಕು ವರ್ಷಗಳಿಂದ ಸಿಬ್ಬಂದಿಗಳ ಜೀವನಕ್ಕೆ ಆಸರೆಯಾಗಿ ಬದಲಾಗುತ್ತಿದೆ. ವರ್ಷದಲ್ಲಿ ಏಳೆಂಟು ತಿಂಗಳು ಕೆಲಸ, ಉತ್ತಮ ಗೌರವ ಧನವೂ ಸಿಗುತ್ತಿದೆ. ಹಾಗಾಗಿ ಮಹಿಳೆಯರು-ಪುರುಷರು ತಮ್ಮ ಬಿಡುವಿನ ದಿನಗಳಲ್ಲಿ ಗೃಹ ರಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಯೂನಿಟ್‌ ಹೆಡ್‌ನ‌ವರು ಸೇವೆ ಮಾಡಲು ಅವಕಾಶ ನೀಡಲು ಸತಾಯಿಸುತ್ತಾರೆಂಬ ಆರೋಪಗಳು ಕೇಳಿ ಬರುತ್ತಿವೆ.

ಗಡಿ ಜಿಲ್ಲೆ ಬೀದರನಲ್ಲಿ ಸುಮಾರು 952 ಜನರು ಗೃಹ ರಕ್ಷಕ ದಳದ ಸಿಬ್ಬಂದಿಯಾಗಿ
ಕಾರ್ಯ ನಿರ್ವಹಿಸುತ್ತಿದ್ದು, ಇದರಲ್ಲಿ 200 ಮಂದಿ ಮಹಿಳೆಯರು ಸಹ ಸೇರಿದ್ದಾರೆ.
ಬೀದರ ನಗರದಲ್ಲೇ ಸುಮಾರು 200 ಗೃಹ ರಕ್ಷಕರು ಕೆಲಸ ಮಾಡುತ್ತಿದ್ದಾರೆ. ತಿಂಗಳಿಗೆ 12,000 ರೂ. ಗೌರವ ಧನ ಪಡೆಯುತ್ತಿದ್ದಾರೆ. ಗೃಹ ರಕ್ಷಕರು ತಮ್ಮ ಕರ್ತವ್ಯನಿಷ್ಠೆ ಮತ್ತು ಬದ್ಧತೆಯಿಂದ ಸೇವೆ ಸಲ್ಲಿಸುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್‌, ಭದ್ರತಾ ಸಿಬ್ಬಂದಿಗೆ ಸಾಥ್‌ ನೀಡುತ್ತಿದ್ದಾರೆ.

ಜಿಲ್ಲೆಯ ಐದು ತಾಲೂಕಿನಲ್ಲಿ ತಲಾ ಒಂದು ಯುನಿಟ್‌ ಮತ್ತು ವಿವಿಧ ವೃತ್ತಗಳಲ್ಲಿ 10 ಸಬ್‌
ಯೂನಿಟ್‌ಗಳನ್ನು ಸ್ಥಾಪಿಸಿ ಮುಖ್ಯಸ್ಥರನ್ನು ನೇಮಿಸಲಾಗಿದೆ. ಇಲ್ಲಿಯೇ ತಿಂಗಳಲ್ಲಿ 4 ಬಾರಿ ಪರೇಡ್‌ಗಳು ನಡೆಸಿ ಗೃಹ ರಕ್ಷಕರಿಗೆ ಹಾಜರಾತಿ ಮತ್ತು ಡ್ನೂಟಿ ಹಾಕುವುದು ನಿಯಮ. ಆದರೆ
ಡ್ನೂಟಿ ಹಾಕಿಸಿಕೊಳ್ಳಲು ಮತ್ತು ಇಂಥದ್ದೇ ಜಾಗದಲ್ಲಿ ಸೇವೆ ಸಲ್ಲಿಸಬೇಕಾದರೆ ಯೂನಿಟ್‌ ಹೆಡ್‌ಗಳು ಸೇವೆಗೆ ಅವಕಾಶ ಕಲ್ಪಿಸದೇ ಸತಾಯಿಸುತ್ತಾರೆಂಬ ದೂರುಗಳು ಕೇಳಿ ಬರುತ್ತಿವೆ.
ಜಿಲ್ಲೆಯಲ್ಲಿ ಇರುವ ಗೃಹ ರಕ್ಷಕರು ಮುಖ್ಯವಾಗಿ ಸುಗಮ ಸಂಚಾರ ವ್ಯವಸ್ಥೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಕೆಲವರು ಪೊಲೀಸ್‌ ಠಾಣೆ, ಬ್ರಿಮ್ಸ್‌, ರೈಲು ನಿಲ್ದಾಣ, ಕಾರಾಗೃಹದ ಸೇವೆಗಳಲ್ಲಿ ನಿಯೋಜನೆಗೊಂಡಿದ್ದಾರೆ. ಇನ್ನುಳಿದಂತೆ ಜಾತ್ರಾ ಮಹೋತ್ಸವ, ಚುನಾವಣೆ ಕೆಲಸ, ಮುಖ್ಯವಾಗಿ ಹಬ್ಬಗಳ ಸಂದರ್ಭದಲ್ಲಿ ದುಡಿಸಿಕೊಳ್ಳಲಾಗುತ್ತದೆ. ಕೆಲವೊಮ್ಮೆ ರಾಜ್ಯದ ವಿವಿಧ ಜಿಲ್ಲೆ ಮಾತ್ರವಲ್ಲ ನೆರೆಯ ರಾಜ್ಯಗಳಲ್ಲೂ ಚುನಾವಣೆ ಕರ್ತವ್ಯಕ್ಕೂ ಹಾಜರಾಗುತ್ತಾರೆ. ಗೃಹ ರಕ್ಷಕ ದಳದ ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಿ ಸಿಬ್ಬಂದಿಗಳಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕಿದೆ.

ಡ್ಯೂಟಿ ಹಾಕಿಸುವ ನೆಪದಲ್ಲಿ ಯೂನಿಟ್‌ಗಳಲ್ಲಿ ಗೃಹ ರಕ್ಷಕರಿಂದ ಹಣ ಪಡೆಯುತ್ತಿರುವುದು ನನ್ನ ಗಮನಕ್ಕೂ ಬಂದಿದೆ. ಈ ಹಿಂದೆ ಭಾಲ್ಕಿ ಮತ್ತು ಮಂಠಾಳ ಯೂನಿಟ್‌ನಲ್ಲಿ ಆರೋಪ ಕೇಳಿ ಬಂದಾಗ ಮುಖ್ಯಸ್ಥರನ್ನು ಅಮಾನತು ಮಾಡಲಾಗಿದೆ. ಪಾಳಿ ಆಧಾರದಲ್ಲಿ ಸಿಬ್ಬಂದಿಗಳನ್ನು ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಹಣ ಪಡೆಯುತ್ತಿರುವ ಬಗ್ಗೆ ದೂರು ನೀಡಿದರೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ.
ಮನೋಜಕುಮಾರ, ಜಿಲ್ಲಾ
ಸಮಾದೇಷ್ಟ, ಬೀದರ ಗೃಹ ರಕ್ಷಕ ದಳ.

ಸಮಾಜ ಸೇವೆಯ ಹಂಬಲದೊಂದಿಗೆ ಬಿಡುವಿನ ದಿನಗಳಲ್ಲಿ ಗೃಹ ರಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ವರ್ಷದಲ್ಲಿ 5-6 ತಿಂಗಳು ಮಾತ್ರ ಗೃಹ ರಕ್ಷಕನಾಗಿ ಸೇವೆಗೆ ಅವಕಾಶ ಸಿಗುತ್ತದೆ. ಡ್ನೂಟಿ ಹಾಕಿಸಿಕೊಳ್ಳಲು ಯೂನಿಟ್‌ ಹೆಡ್‌ಗಳು ಸತಾಯಿಸುತ್ತಾರೆ.
ಹೆಸರು ಹೇಳಲಿಚ್ಚಿಸದ ಗೃಹ ರಕ್ಷಕ ಸಿಬ್ಬಂದಿ.

„ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.