ಸುಸ್ಥಿರ ಆಡಳಿತಕ್ಕೆ ಶರಣರ ತತ್ವ ಪಾಲಿಸಿ

ಜಿಲ್ಲಾಡಳಿತದಿಂದ ಶರಣ ಮಡಿವಾಳ ಮಾಚಿದೇವರ ಜಯಂತಿ ಆಚರಣೆ

Team Udayavani, Feb 2, 2020, 1:27 PM IST

2-Febraury-13

ಬೀದರ: ಆಡಳಿತ ವ್ಯವಸ್ಥೆ ಸರಿ ದಾರಿಯಲ್ಲಿರಲು ಮಹನೀಯರ ಜಯಂತಿಗಳನ್ನು ಆಚರಿಸುವುದು ಅಷ್ಟೇ ಅಲ್ಲ. ಅವರ ತತ್ವಾದರ್ಶಗಳನ್ನು ಪಾಲಿಸಬೇಕಿದೆ ಎಂದು ಬಸವಕಲ್ಯಾಣ ಬಸವ ಮಹಾಮನೆ ಸಂಸ್ಥಾನದ ಶ್ರೀ ಸಿದ್ಧರಾಮ ಬೆಲ್ದಾಳ ಶರಣರು ಹೇಳಿದರು.

ನಗರದ ಡಾ| ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಶರಣರು ದೇಶದ ನಾನಾ ಪ್ರದೇಶಗಳು, ಭಾಷೆ, ಜನಾಂಗ ಹೀಗೆ ಸಾಮಾನ್ಯ ಪ್ರಜೆಯಿಂದ ಆಳ್ವಿಕೆ ನಡೆಸುವ ಅರಸನ ವರೆಗೆ ಎಲ್ಲರನ್ನು ಒಂದೆಡೆಗೆ ಸೇರಿಸಿ ಸಮಾನತೆಯಿಂದ ಜೀವಿಸುವ ಸಂಪ್ರದಾಯವನ್ನು ಹುಟ್ಟು ಹಾಕಿದವರು. ಪ್ರಸ್ತುತ ದಿನಗಳಲ್ಲಿ ಧರ್ಮ, ಜಾತಿ ಮತ್ತು ಭಾಷೆಯ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಮೂಡುತ್ತಿರುವುದು ಕಾಣುತ್ತಿದೆ. ಇದನ್ನು ಸರಿಪಡಿಸಿ, ಸಮೃದ್ಧ ಮತ್ತು ಸುಭದ್ರ ದೇಶ ಕಟ್ಟಲು ಶರಣರು ತೋರಿಸಿದ ಮಾರ್ಗವನ್ನು ಅನುಸರಿಸಬೇಕಿದೆ ಎಂದು ತಿಳಿಸಿದರು.

ಮಡಿವಾಳ ಮಾಚಿದೇವರದು ಶರಣ ಪರಂಪರೆಯಲ್ಲಿ ವಿಶಿಷ್ಟ ವ್ಯಕ್ತಿತ್ವ. ವಚನ ಸಾಹಿತ್ಯ ರಕ್ಷಣೆಯಲ್ಲಿ ಇವರ ಪಾತ್ರ ಅಮೋಘವಾದದ್ದು. ಇವರು ಸಮತಾವಾದಿಯಾಗಿದ್ದು, ಅನ್ಯಾಯವನ್ನು ಸಹಿಸದೇ ದಿಟ್ಟತನದಿಂದ ಎದುರಿಸುತ್ತಿದ್ದರು. ಅದಕ್ಕಾಗಿಯೇ ಇವರನ್ನು ವೀರ ಗಣಾಚಾರಿ ಎಂದು ಕರೆಯಲಾಗುತ್ತದೆ. “ನನ್ನ ತನು, ಮನ, ಕಾಯ ಶುದ್ಧಿಗೊಳಿಸಿ ಯೋಗ್ಯ ಮಾಡಿದಾತ ಮಡಿವಾಳ’ ಎಂದು ಬಸವಣ್ಣನವರು ಮಡಿವಾಳ ಮಾಚಿದೇವರನ್ನು ಕೊಂಡಾಡಿದ್ದಾರೆ ಎಂದು ಹೇಳಿದರು.

ಶಾಸಕ ರಹೀಮ್‌ ಖಾನ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 12ನೇ ಶತಮಾನದಲ್ಲಿ ಶರಣರು ಎಲ್ಲರಿಗೂ ಮಾನವೀಯತೆಯ ಪಾಠ ಕಲಿಸಿದವರು. ಅವರ ಚಿಂತನೆಗಳನ್ನು ಸಾಕಾರಗೊಳಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ತಿಳಿಸಿದರು. ಸಹಾಯಕ ಆಯುಕ್ತ ಅಕ್ಷಯ್‌ ಶ್ರೀಧರ್‌, ಅಪರ ಜಿಲ್ಲಾ ಧಿಕಾರಿ ರುದ್ರೇಶ್‌ ಗಾಳಿ, ಜಿಪಂ ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್‌., ಅಕ್ಕಮಹಾದೇವಿ ಮಹಿಳಾ ಕಾಲೇಜು ಪ್ರಾಚಾರ್ಯ ಶಿವಶರಣಪ್ಪ ಹುಗ್ಗಿ ಪಾಟೀಲ, ಸಮಾಜದ ಮುಖಂಡರಾದ ಬಾಬುರಾವ್‌ ಮಡಿವಾಳ, ದಿಗಂಬರ ಮಡಿವಾಳ, ಧನರಾಜ ಮಡಿವಾಳ, ಸುಭಾಷ ಮಡಿವಾಳ, ಶಿವಕುಮಾರ ಮಡಿವಾಳ ಹಾಗೂ ಇತರರು ಉಪಸ್ಥಿತರಿದ್ದರು.

ಇದೇ ವೇಳೆ “ಮಡಿವಾಳ ಮಾಚಿದೇವರ ಜೀವನ ಚರಿತ್ರೆ’ ಕಿರುಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಹಿರಿಯ ಸಾಹಿತಿ ಎಂ.ಜಿ.ಗಂಗನಪಳ್ಳಿ ಅವರು ಮಡಿವಾಳ ಮಾಚಿದೇವರ ಕುರಿತಾದ ಕವನ ವಾಚಿಸಿದರು. ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಸ್ವಾಗತಿಸಿದರು. ಪ್ರಾಂಶುಪಾಲ ಚನ್ನಬಸವ ಹೇಡೆ ನಿರೂಪಿಸಿದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.