ಬೀದರ ಪಶುಪಾಲನೆಗೆ ಯೋಗ್ಯ ಜಿಲ್ಲೆ: ಚವ್ಹಾಣ

ರೈತರಲ್ಲಿ ಜಾಗೃತಿ ಮೂಡಿಸಲು ಮೇಳ | ಜಾನುವಾರು ಔಷಧ-ರೋಗ ಪತ್ತೆ ಸಾಧನ ಮಾಹಿತಿಗಿತ್ತು ಅವಕಾಶ

Team Udayavani, Feb 10, 2020, 1:26 PM IST

10-February-13

ಬೀದರ: ಬೀದರ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಈ ನೆಲವು ಕೂಡ ಪಶುಪಾಲನೆಗೆ ಹೇಳಿ ಮಾಡಿಸಿದಂತಿದೆ. ಈ ಭಾಗದ ದೇವಣಿ ತಳಿಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದೆ. ಕೃಷಿ ಜೊತೆಗೆ ಪಶುಪಾಲನೆ ಕೈಗೊಳ್ಳಲು ಮಾಹಿತಿ ನೀಡುವ ನಿಟ್ಟಿನಲ್ಲಿ ಪಶು ಮೇಳ ಆಯೋಜಿಸಲಾಗಿದೆ ಎಂದು ಪಶು ಸಂಗೋಪನೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದರು.

ನಗರದ ಹೊರವಲಯದ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ರವಿವಾರ ನಡೆದ ರಾಜ್ಯಮಟ್ಟದ ಪಶು ಮೇಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜಾನುವಾರು ಸಾಕಾಣಿಕೆ ಮತ್ತು ನಿರ್ವಹಣೆಯ ಬಗ್ಗೆ ಮಾಹಿತಿ ಇದ್ದಲ್ಲಿ ಪಶುಗಳ ಪಾಲನೆಯನ್ನು ಸುಗಮವಾಗಿ ಮಾಡಬಹುದಾಗಿದೆ. ಹೀಗಾಗಿ ಈ ಪಶುಮೇಳದಲ್ಲಿ ಹಸು, ಎಮ್ಮೆ, ಕುರಿ, ಮೇಕೆ, ಹಂದಿ, ಮೊಲ, ಗಿರಿರಾಜ, ಸ್ವರ್ಣಧರ ಸೇರಿದಂತೆ ವಿವಿಧ ಕೋಳಿ ತಳಿಗಳ ಸಾಕಾಣಿಕೆ ಮತ್ತು ನಿರ್ವಹಣೆ ಕುರಿತು ಸಾರ್ವಜನಿಕರಿಗೆ ತಿಳಿವಳಿಕೆ ನೀಡಲು ವ್ಯವಸ್ಥೆ ಮಾಡಲಾಗಿತ್ತು ಎಂದರು.

ಜಾನುವಾರು ಆರೋಗ್ಯವು ಅತ್ಯಂತ ಅವಶ್ಯಕವಾಗಿದೆ. ಹೀಗಾಗಿ
ಪಶು ಮೇಳದಲ್ಲಿ ಜಾನುವಾರು ಔಷಧ, ಲಸಿಕೆ ಮತ್ತು ರೋಗ ಪತ್ತೆ ಸಾಧನಗಳ ಮಾಹಿತಿಗೆ ಅವಕಾಶ ಕಲ್ಪಿಸಲಾಗಿತ್ತು. ಹಾಲು ಮಾಂಸ ಮತ್ತು ಉಣ್ಣೆ ಉತ್ಪನ್ನಗಳ ಮಾಹಿತಿ ಮತ್ತು ಮಾರಾಟಕ್ಕೂ ಕೂಡ ಅವಕಾಶ ಕಲ್ಪಿಸಲಾಗಿತ್ತು. ಇಂತಹ ಕಾರ್ಯಕ್ರಮಗಳ ಮೂಲಕ ಪಶುಮೇಳ ವಿಶೇಷ ಆಕರ್ಷಣೆಯಾಗಿತ್ತು ಎಂದು ಸಚಿವರು ತಿಳಿಸಿದರು.

ಮನೆ-ಮನ ತಲುಪಿತು: ಗಡಿ ಪ್ರದೇಶ ಬೀದರನಲ್ಲಿ ಇಂತಹ ರಾಜ್ಯ ಮಟ್ಟದ ಕಾರ್ಯಕ್ರಮ ಮಾಡುವುದು ತ್ರಾಸದಾಯಕ ಕಾರ್ಯವಾಗಿದೆ. ಆದರೂ ಇದನ್ನು ಸವಾಲಾಗಿ ತೆಗೆದುಕೊಂಡು ಕಾರ್ಯಕ್ರಮವನ್ನು ಮಾಡಲಾಯಿತು. ಪಶುಪಾಲನಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಜಿಲ್ಲಾಡಳಿತ, ಜಿಪಂ ಪರಸ್ಪರ ಸಹಕಾರದಿಂದ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ರೂಪಿಸಿರುವುದು ದಾಖಲೆಯಾಗಿದೆ ಎಂದರು.

ಕರುಗಳ ಪ್ರದರ್ಶನ, ಹೈನು ರಾಸುಗಳ ಹಾಲು ಕರೆಯುವ ಸ್ಪರ್ಧೆ, ಶ್ವಾನ ಪ್ರದರ್ಶನ, ತೋಟಗಾರಿಕೆ ಇಲಾಖೆಯ ಫಲಫುಷ್ಪ ಪ್ರದರ್ಶನ, ಕೃಷಿ ಇಲಾಖೆಯ ಜಲಾನಯನ ಪ್ರಾತ್ಯಕ್ಷಿಕೆ ಸೇರಿದಂತೆ ನಾನಾ ಇಲಾಖೆಗಳ ಮಳಿಗೆಗಳು ಮತ್ತು ವಾಣಿಜ್ಯ ಮಳಿಗೆಗಳಿಗೆ ಕೂಡ ಜನರು ಕಿಕ್ಕಿರಿದು ಸೇರಿದ್ದರು. ಹೀಗೆ ಪಶು ಮೇಳವು ಮನೆಮನವನ್ನು ತಲುಪಿದ್ದು, ಖುಷಿ ತಂದಿತು ಎಂದು ತಿಳಿಸಿದ ಅವರು, ಮುಂದಿನ ವರ್ಷದ ರಾಜ್ಯ ಪಶು ಮೇಳವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಆಯೋಜಿಸಲಾಗುವುದು ಎಂದು ಸಚಿವರು ಇದೆ ವೇಳೆ ಘೋಷಿಸಿದರು.

ಸಂಸದ ಭಗವಂತ ಖೂಬಾ, ಎಂಎಲ್‌ಸಿ ಅರವಿಂದಕುಮಾರ ಅರಳಿ, ತಾಪಂ ಅಧ್ಯಕ್ಷ ವಿಜಯಕುಮಾರ ಬರೂರ್‌, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತ ಎಸ್‌.ಆರ್‌.ನಟೇಶ್‌, ನಿರ್ದೇಶಕ ಡಾ| ಎಂ.ಟಿ.ಮಂಜುನಾಥ, ಡಿಸಿ ಡಾ| ಮಹಾದೇವ್‌, ಜಿಪಂ ಸಿಇಒ ಜ್ಞಾನೇಂದ್ರಕುಮಾರ ಗಂಗವಾರ, ಪಶು ವಿವಿ ಕುಲಪತಿ ಡಾ|ಎಚ್‌.ಡಿ. ನಾರಾಯಣಸ್ವಾಮಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ಕಲಾವಿದ ಹಣಮಂತ ಅವರಿಂದ ಗಾಯನ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.