ಬೀದರ: 12 ಲಕ್ಷ ಮೌಲ್ಯದ ಶ್ರೀಗಂಧದ ಕಟ್ಟಿಗೆ ಜಪ್ತಿ; ನಾಲ್ವರ ಬಂಧನ
Team Udayavani, Sep 10, 2020, 7:30 PM IST
ಬೀದರ: ಔರಾದ ಪಟ್ಟಣದ ಚನ್ನಬಸವೇಶ್ವರ ಬಡಾವಣೆಯ ಮನೆಯೊಂದರ ಮೇಲೆ ಪೊಲೀಸ ಅಧಿಕಾರಿಗಳ ತಂಡ ದಾಳಿ ನಡೆಸಿ ಸುಮಾರು 12.50 ಲಕ್ಷ ರೂ. ಮೌಲ್ಯದ 2 ಕ್ವಿಂಟಾಲ್ ಶ್ರೀಗಂಧದ ಮರದ ಕಟ್ಟಿಗೆಯನ್ನು ಜಪ್ತಿ ಮಾಡಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.
ಮನೆಯಲ್ಲಿ ಶ್ರೀಗಂಧದ ಕಟ್ಟಿಗೆಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ಇಡಲಾಗಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ, ಔರಾದ ಠಾಣೆಯ ಪೊಲೀಸರು ನ್ಯಾಯಾಲಯದಿಂದ ಮನೆ ಶೋಧನಾ ವಾರಂಟ್ ಪಡೆದು ದಾಳಿ ನಡೆಸಿದ್ದಾರೆ. ಈ ವೇಳೆ 12 ಲಕ್ಷ ಮೌಲ್ಯದ 2 ಕ್ವಿಂ. ಶ್ರೀಗಂಧ ಮರದ ಕಟ್ಟಿಗೆ, 50 ಸಾವಿರ ವೌಲ್ಯದ ಎರಡು ಬೈಕ್ಗಳನ್ನು ಜಪ್ತಿ ಮಾಡಿ, ಸಂತೋಷ ವಿಶ್ವನಾಥ ಡ್ಯಾಡಂಗಲೆ, ನರಸಿಂಗ್ ತುಳಸಿರಾಮ್ ಮಾನೆ, ಶಿವಕುಮಾರ ಲಕ್ಷ್ಮಣ ದ್ಯಾಡಂಗಲೆ, ಅಶೋಕ ರಾಜಪ್ಪ ಹೆಳವಾ ಅವರನ್ನು ಬಂಧಿಸಿದ್ದಾರೆ. ಔರಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿವೈಎಸ್ಪಿ ದೇವರಾಜು ಬಿ., ಸಿಪಿಐ ಟಿ.ಆರ್. ರಾಘವೇಂದ್ರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಪಿಎಸ್ಐ ಸುವರ್ಣ, ಎಎಸ್ಐ ರಮೇಶ, ಸಿಬ್ಬಂದಿಗಳಾದ ಸುನೀಲ ಕೋರಿ, ರಾಜಕುಮಾರ, ಮಲ್ಲಮ್ಮ, ಶರಣಪ್ಪ, ರಾಜಕುಮಾರ ಪಂಚಾಳ, ನರಸರೆಡ್ಡಿ, ಶ್ರೀನಿವಾಸ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ