ಕೋವಿಡ್ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯ: ಪ್ರಕಾಶ ಖಂಡ್ರೆ
Team Udayavani, May 7, 2020, 1:23 PM IST
ಸಾಂದರ್ಭಿಕ ಚಿತ್ರ
ಭಾಲ್ಕಿ: ಮಾರಕ ಕೋವಿಡ್ ವೈರಸ್ ನಿಯಂತ್ರಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದರು.
ತಾಲೂಕಿನ ಲಖಣಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗೆ ಸಾನಿಟೈಸರ್ ಮತ್ತು ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಯಾರೂ ಅನಗತ್ಯವಾಗಿ ಓಡಾಡಬಾರದು. ಕೈಗಳನ್ನು ಸಾನಿಟೈಸರ್ನಿಂದ ತೊಳೆದುಕೊಳ್ಳಬೇಕು. ಮಾಸ್ಕ್ ಗಳನ್ನು ಕಡ್ಡಾಯವಾಗಿ ಬಳಸಬೇಕು. ಕೋವಿಡ್ ನಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಬಡವರು, ಕಾರ್ಮಿಕರು ಕಷ್ಟಕ್ಕೀಡಾಗಿದ್ದಾರೆ. ಪ್ರತಿಯೊಬ್ಬರು ತಾಳ್ಮೆಯಿಂದಿರಬೇಕು. ಸಾರ್ವಜನಿಕರು ಸ್ವ ಇಚ್ಛೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಪಂ ಮಾಜಿ ಸದಸ್ಯ ಯಾದವರಾವ ಕನಸೆ, ಪುರಸಭೆ ಮಾಜಿ ಅಧ್ಯಕ್ಷ ಕೈಲಾಸನಾಥ ಮೀನಕೆರೆ, ಗೋವಿಂದರಾವ ಬಿರಾದಾರ, ಗ್ರಾಪಂ ಅಧ್ಯಕ್ಷ ರಾಜಕುಮಾರ ಸೂರ್ಯವಂಶಿ, ಮುಖಂಡರಾದ ಗೋವಿಂದರಾವ ಚಾಂದಿವಾಲೇ, ಗೋವಿಂದರಾವ ಬಿರಾದಾರ ಮಾವಿನಹಳ್ಳಿ, ಜನಾರ್ಧನ ಸೂರ್ಯವಂಶಿ, ಶಿವಾ ಸೋಂಪುರ, ಪಾಂಡುರಂಗ ಸಲಾಬಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ