ಕೋವಿಡ್ -19 ತಡೆಗೆ ಮುನ್ನೆಚ್ಚರಿಕೆ ವಹಿಸಿ
Team Udayavani, Jun 25, 2020, 1:24 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಭಾಲ್ಕಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಪ್ರಭು ಚವ್ಹಾಣ ಭೇಟಿ ನೀಡಿ ಕೋವಿಡ್ ಪ್ರಕರಣಗಳ ಮಾಹಿತಿ ಪಡೆದರು. ಅಧಿಕಾರಿಗಳ ತಂಡದೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಐಸೋಲೇಷನ್ ವಾರ್ಡ್ ಹಾಗೂ ಉಗ್ರಾಣ ಕೋಣೆ ಸೇರಿ ನಾನಾ ವಾರ್ಡ್ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಲಾಕ್ಡೌನ್ ಸಡಿಲಿಕೆ ಬಳಿಕ ಜಿಲ್ಲೆ ಸೇರಿ ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ. ಇದೇ ವೇಳೆ ಗುಣಮುಖರಾಗುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ತರಿಸಿದೆ. ಸೋಂಕು ನಿಯಂತ್ರಿಸಲು ಸರಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಶಂಕಿತರ ಗಂಟಲು ದ್ರವ ಮಾದರಿ ಪರೀಕ್ಷಿಸಲು ಈಗಾಗಲೇ ಬೀದರ್ನಲ್ಲಿ ಪರೀಕ್ಷಾ ಕೇಂದ್ರ ಆರಂಭಿಸಿರುವ ಪರಿಣಾಮ ತ್ವರಿತವಾಗಿ ವರದಿ ಸಿಗುತ್ತಿದೆ. ಸೋಂಕಿತರು ಹೆಚ್ಚಾಗುತ್ತಿರುವ ಕಡೆಗಳಲ್ಲಿ ತಕ್ಷಣವೇ ಚಿಕಿತ್ಸೆ ನೀಡಬೇಕು ಎನ್ನುವ ಉದ್ದೇಶದಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಐಸೋಲೇಷನ್ ವಾರ್ಡ್ ಸ್ಥಾಪಿಸಲಾಗಿದೆ ಎಂದರು.
ಆಸ್ಪತ್ರೆ ಪರಿಸರದಲ್ಲಿ ಕಾಲಕಾಲಕ್ಕೆ ಸಾನಿಟೈಸ್ ಮಾಡಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕು ಎಂದು ವೈದ್ಯರಿಗೆ ಸೂಚಿಸಿದರು. ಡಿಸಿ ರಾಮಚಂದ್ರನ್
ಆರ್, ಜಿಪಂ ಸಿಇಒ ಜ್ಞಾನೇಂದ್ರಕುಮಾರ ಗಂಗ್ವಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…